AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಮಾರುತ್ತಿದ್ದ ಇಬ್ಬರ ಬಂಧನ; ನಗದು ಸೇರಿ 16 ಲಕ್ಷ ಮೌಲ್ಯದ ವಸ್ತು ವಶಕ್ಕೆ

ಇತ್ತೀಚೆಗೆ ಮಾದಕವಸ್ತು ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರು ಕೂಡ ಹದ್ದಿನ ಕಣ್ಣೀಟ್ಟಿದ್ದಾರೆ. ಅದರಂತೆ ಇಂದು(ಮೇ.02) ಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರ್​ ಬೀರಿ ಬಳಿ ಡ್ರಗ್ಸ್ ಮಾರುತ್ತಿದ್ದ ಇಬ್ಬರನ್ನ ಮಂಗಳೂರು(Mangalore) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಡ್ರಗ್ಸ್ ಮಾರುತ್ತಿದ್ದ ಇಬ್ಬರ ಬಂಧನ; ನಗದು ಸೇರಿ 16 ಲಕ್ಷ ಮೌಲ್ಯದ ವಸ್ತು ವಶಕ್ಕೆ
ಮಂಗಳೂರಿನಲ್ಲಿ ಡ್ರಗ್ಸ್ ಮಾರುತ್ತಿದ್ದ ಇಬ್ಬರ ಬಂಧನ
ಅಶೋಕ್​ ಪೂಜಾರಿ, ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್|

Updated on:May 02, 2024 | 3:24 PM

Share

ದಕ್ಷಿಣ ಕನ್ನಡ, ಮೇ.02: ಡ್ರಗ್ಸ್ ಮಾರುತ್ತಿದ್ದ ಇಬ್ಬರನ್ನ ಮಂಗಳೂರು(Mangalore) ಸಿಸಿಬಿ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರ್​ ಬೀರಿ ಬಳಿ ಬಂಧಿಸಿದ್ದಾರೆ. ಉಳ್ಳಾಲದ ಮೊಹಮ್ಮದ್​​ ಇಶಾನ್​​, ಜಾಫರ್​ ಸಾಧಿಕ್​​ ಬಂಧಿತ ಆರೋಪಿಗಳು. ಇವರ ಬಳಿಯಿದ್ದ 9 ಲಕ್ಷ ಮೌಲ್ಯದ 407 ಗ್ರಾಂ. ತೂಕದ MDMA ಮಾದಕವಸ್ತು, ಕಾರು, ಮೊಬೈಲ್​, ನಗದು ಸೇರಿ 16,13,800 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಈ ಆರೋಪಿಗಳು ಬೆಂಗಳೂರಿನಿಂದ ಡ್ರಗ್ಸ್​​​​ ಖರೀದಿಸಿ ತಂದು, ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಡ್ರಗ್ಸ್ ಮಾರುತ್ತಿದ್ದರು.

ಆರೋಪಿ ಜಾಫರ್ ವಿರುದ್ಧ ದಾಖಲಾಗಿತ್ತು 9 ಕೇಸ್

ಇನ್ನು ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಜಾಫರ್ ಎಂಬಾತನ ವಿರುದ್ಧ ಹಲ್ಲೆ ಮತ್ತು ಕೊಲೆ ಯತ್ನ ಸೇರಿ ಒಟ್ಟು 9 ಕೇಸ್​ಗಳು ದಾಖಲಾಗಿತ್ತು. ಇನ್ನು ಆರೋಪಿ ಮೊಹಮ್ಮದ್‌ ಇಶಾನ್ ವಿರುದ್ಧವು ಈ ಹಿಂದೆ MDMA ಮಾದಕವಸ್ತು ಮಾರಾಟ ಪ್ರಕರಣ ದಾಖಲಾಗಿದೆ. ಈ ಹಿನ್ನಲೆ ಇಂದು ಖಚಿತ ಮಾಹಿತಿ ಪಡೆದು ದಾಳಿ ಮಾಡಿದಾಗ ಮಾದಕ ವಸ್ತುಗಳು ಪತ್ತೆಯಾಗಿವೆ.

ಇದನ್ನೂ ಓದಿ:ಸಿಸಿಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 3 ಪ್ರತ್ಯೇಕ ಡ್ರಗ್ಸ್ ಪ್ರಕರಣಗಳಲ್ಲಿ ನಾಲ್ವರು ಅರೆಸ್ಟ್

ತ್ಯಾಜ್ಯ ವಿಲೇವಾರಿ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ

ದಾವಣಗೆರೆ: ತಾಲೂಕಿನ ಅವರಗೊಳ್ಳ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಹಿನ್ನಲೆ ಸುತ್ತಮುತ್ತಲಿನ ಪ್ರದೇಶಕ್ಕೆ ಹೊಗೆ ಅವರಿಸಿದ್ದು, ಬೆಂಕಿ ಕಾಣಿಸಿಕೊಂಡಿದ್ದರಿಂದ ಸುತ್ತಮುತ್ತಲಿನ ಜನರಲ್ಲಿ ಆತಂಕ ಮೂಡಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದ್ದು, ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Thu, 2 May 24

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ