AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಮಂಗಳೂರಿನ ಜನ ಕೂಲ್​ ಕೂಲ್: ದಕ್ಷಿಣ ಕನ್ನಡ ಮತ್ತು ಉಡುಪಿಯ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರಾವಳಿ ಕರ್ನಾಟಕಕ್ಕೆ ಮೇ 6 ರಿಂದ ಗುಡುಗು ಸಹಿತ ಮಳೆ ಸಿಹಿ ಸುದ್ದಿ. ದಕ್ಷಿಣ ಕನ್ನಡ, ಉಡುಪಿ ಸೇರಿ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲೂ ಮಳೆಯ ನಿರೀಕ್ಷೆಯಿದೆ. ಬಿರುಗಾಳಿ, ಸಿಡಿಲು ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಲು ಹವಾಮಾನ ಇಲಾಖೆ ಸೂಚಿಸಿದೆ. ತಾಪಮಾನದಲ್ಲಿ ಕೊಂಚ ಬದಲಾವಣೆ ಕಂಡುಬಂದಿದೆ.

ನಾಳೆಯಿಂದ ಮಂಗಳೂರಿನ ಜನ ಕೂಲ್​ ಕೂಲ್: ದಕ್ಷಿಣ ಕನ್ನಡ ಮತ್ತು ಉಡುಪಿಯ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 05, 2026 | 2:34 PM

Share

ಮಂಗಳೂರು, ಮೇ.5: ಕರಾವಳಿ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಸಿಹಿ ಸುದ್ದಿ ನೀಡಿದೆ. ಮೇ 6ರ ಬುಧವಾರದಿಂದ ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯುದ್ದಕ್ಕೂ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.

ಈ ಮಳೆಯ ಅವಧಿಯಲ್ಲಿ ಬಿರುಗಾಳಿ ಹಾಗೂ ಸಿಡಿಲು ಸಹಿತ ಗುಡುಗು ಸಂಭವಿಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಲು ಸೂಚಿಸಲಾಗಿದೆ. ಇದೇ ಸಮಯದಲ್ಲಿ ಉತ್ತರ ಒಳನಾಡಿನ ಕರ್ನಾಟಕದಲ್ಲೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಸೋಮವಾರ ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿ.ಸೆ. ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 0.3 ಡಿ.ಸೆ. ಕಡಿಮೆಯಾಗಿದೆ. ಕನಿಷ್ಠ ತಾಪಮಾನ 26.1 ಡಿ.ಸೆ. ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 0.8 ಡಿ.ಸೆ. ಹೆಚ್ಚಾಗಿದೆ.

ಸೋಮವಾರ ಕರಾವಳಿಯ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದರೂ ಮಳೆಯಾಗಿರಲಿಲ್ಲ. ಆದರೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಈಗಾಗಲೇ ಸಾಧಾರಣ ಮಳೆಯಾಗಿರುವುದು ವರದಿಯಾಗಿದೆ. ಮೇ 6 ಮತ್ತು 7 ರಂದು ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಲಘು ಅಥವಾ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆರಾಯನದ್ದೇ ಹವಾ! ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್​

ಉತ್ತರ ಒಳನಾಡು (ಬೀದರ್, ಕಲಬುರಗಿ, ಯಾದಗಿರಿ) ಈ ಭಾಗದಲ್ಲಿ ಮೇ 7 ರಂದು ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ತಾಪಮಾನದಲ್ಲಿ ಸ್ಥಿರತೆ ಕಂಡುಬರಲಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವಾರಾಂತ್ಯದಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗಲಿದ್ದು, ಪ್ರವಾಸಿಗರು ಜಾಗರೂಕರಾಗಿರಲು ಸೂಚಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Tue, 5 May 26

Follow Us
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?"
'ಗ್ಯಾರಂಟಿಯಲ್ಲಿ ಅಕ್ರಮವಾಗಿದೆ ಎಂದಾದರೆ ಅನುಷ್ಠಾನ ಸಮಿತಿ ಏನ್ಮಾಡ್ತಿತ್ತು?
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ
ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ