AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಆರ್ಭಟ, ಪ್ರಮುಖ ಜಿಲ್ಲೆಗಳಿಗೆ ಅಲರ್ಟ್

ಆಗಸ್ಟ್ 6ರಂದು ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ತೀವ್ರಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆಯಿದೆ. ಕರಾವಳಿ ತೀರದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲೂ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಕರ್ನಾಟಕ ಹವಾಮಾನ ವರದಿ: ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಆರ್ಭಟ, ಪ್ರಮುಖ ಜಿಲ್ಲೆಗಳಿಗೆ ಅಲರ್ಟ್
ಸಾಮದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 06, 2026 | 7:03 AM

Share

ಬೆಂಗಳೂರು, ಆ.6: ನೈಋತ್ಯ ಮಾನ್ಸೂನ್ (ಮಳೆಗಾಲ) ರಾಜ್ಯಾದ್ಯಂತ ಚುರುಕಾಗಿದ್ದು, ಇಂದು (ಆಗಸ್ಟ್ 6) ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ರಭಸ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು (Heavy Rain Alert), ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಮಲೆನಾಡು ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಕಾವೇರಿ ಹಾಗೂ ತುಂಗಾ ನದಿ ಕೊಳ್ಳದ ಪ್ರದೇಶಗಳಲ್ಲಿ ಜಲಾನಯನ ಭಾಗದಲ್ಲಿ ಮಳೆ ಹೆಚ್ಚಾಗಲಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಬೈಕ್ ಸವಾರನ ಮೇಲಿನ ದರ್ಪ ಪ್ರಕರಣ: ಮಾಲೂರು JMFC ಜಡ್ಜ್ ಗಾಯತ್ರಿ ಬೀದರ್‌ಗೆ ವರ್ಗಾವಣೆ

ಬೆಂಗಳೂರು ನಗರ/ಗ್ರಾಮಾಂತರ, ಮೈಸೂರು, ಹಾಸನ, ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ (ಬೆಳಗಾವಿ, ಧಾರವಾಡ, ಹಾವೇರಿ, ರಾಯಚೂರು, ಕಲಬುರಗಿ) ಗಾಳಿ ಸಹಿತ ಸಾಧಾರಣ ಮಳೆಯಾಗಲಿದ್ದು, ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ತುಂತುರು ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ