AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kasargodu: ಕನ್ನಡ ಶಾಲೆಗೆ ಮಲಯಾಳಂ ಶಿಕ್ಷಕಿ ನೇಮಕ, ಸಚಿವ ಶಿವರಾಜ್ ತಂಗಡಗಿ ಪತ್ರಕ್ಕೂ ಕ್ಯಾರೆ ಅನ್ನದ ಕೇರಳ ಸರ್ಕಾರ

ಕರ್ನಾಟಕ ಮತ್ತು ಕೇರಳ ಗಡಿಯಲ್ಲಿರುವ ಕಾಸರಗೋಡಿನ ಅಡೂರಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗೆ ಮಲಯಾಳಂ ಶಿಕ್ಷಕಿಯ ನೇಮಕಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟನೆ ಮಾಡಿದ್ದಾರೆ.

Kasargodu: ಕನ್ನಡ ಶಾಲೆಗೆ ಮಲಯಾಳಂ ಶಿಕ್ಷಕಿ ನೇಮಕ, ಸಚಿವ ಶಿವರಾಜ್ ತಂಗಡಗಿ ಪತ್ರಕ್ಕೂ ಕ್ಯಾರೆ ಅನ್ನದ ಕೇರಳ ಸರ್ಕಾರ
ಅಡೂರಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆ
ವಿವೇಕ ಬಿರಾದಾರ
|

Updated on:Jun 23, 2023 | 4:20 PM

Share

ಮಂಗಳೂರು: ಕರ್ನಾಟಕ (Karnataka) ಮತ್ತು ಕೇರಳ (Kerala) ಗಡಿಯಲ್ಲಿರುವ ಕಾಸರಗೋಡಿನ (Kasaragod) ಅಡೂರಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗೆ ಮಲಯಾಳಂ ಶಿಕ್ಷಕಿಯ ನೇಮಕಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಕನ್ನಡ ಬರದ ಮಲಯಾಳಂ ಶಿಕ್ಷಕಿಯ ನೇಮಿಸಿರುವ ಕೇರಳ ಸರ್ಕಾರದ ನಿರ್ಧಾರದ ವಿರುದ್ಧ ಕೆಲ ದಿನಗಳ ಹಿಂದೆ ಅಡೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟಿಸಿದ್ದರು.

ಮಲಯಾಳಂ ಶಿಕ್ಷಕಿಯ ಪಾಠ ನಮಗೆ ಅರ್ಥವಾಗುತ್ತಿಲ್ಲವೆಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದರು. ಇನ್ನು ಪೋಷಕರು ಕನ್ನಡದ ಗಂಧಗಾಳಿ ಗೊತ್ತಿರದ ಶಿಕ್ಷಕಿಯನ್ನು ನೇಮಿಸಿದರೇ ಹೇಗೆ? ಇದರಿಂದ ಮಕ್ಕಳಿಗೆ ಪಾಠ ಅರ್ಥವಾಗುತ್ತಿಲ್ಲ. ಹೀಗಾಗಿ ಶಿಕ್ಷಣ ಇಲಾಖೆ ಹಾಗೂ ಕೇರಳ ಸರ್ಕಾರದ ವಿರುದ್ಧ ಗರಂ ಆಗಿದ್ದರು.

ಇದನ್ನೂ ಓದಿ: ನಾಗರ ಹಾವಿನ ಹೊಟ್ಟೆಯಿಂದ ಪ್ಲಾಸ್ಟಿಕ್ ಡಬ್ಬಿ ಹೊರತೆಗೆದ ಪಶುವೈದ್ಯರ ತಂಡ

ಈ ಹಿನ್ನೆಲೆ ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕೇರಳ ಸರ್ಕಾರದ ಸಚಿವ ಶಿವನ್ ಕುಟ್ಟಿಗೆ ಪತ್ರ ಬರೆದಿದ್ದರು. ಮಲಯಾಳಂ ಶಿಕ್ಷಕರ ಬದಲು ಕನ್ನಡ ಶಿಕ್ಷಕರ ನೇಮಿಸಬೇಕೆಂದು ಕೋರಿದ್ದರು. ಕರ್ನಾಟಕ ಸಚಿವರ ಪತ್ರಕ್ಕೆ ಕೇರಳ ಸರ್ಕಾರ ಪ್ರತಿಕ್ರಿಯೆ ನೀಡಿಲ್ಲ. ಈ ಮೂಲಕ ಮತ್ತೆ ಕೇರಳ ಸರ್ಕಾರ ಕನ್ನಡ ಮಾಧ್ಯಮವನ್ನು ಮುಗಿಸುತ್ತಿದ್ದೆ ಎಂದು ಗಡಿನಾಡು ಕನ್ನಡಿಗರು ಆರೋಪಿಸಿದ್ದಾರೆ.

ಇನ್ನು ಈ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಮುಂದೇನು ಮಾಡಬೇಕೆ ಅಂತ ಯೋಚಿಸುತ್ತೇವೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:18 pm, Fri, 23 June 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ