Kasargodu: ಕನ್ನಡ ಶಾಲೆಗೆ ಮಲಯಾಳಂ ಶಿಕ್ಷಕಿ ನೇಮಕ, ಸಚಿವ ಶಿವರಾಜ್ ತಂಗಡಗಿ ಪತ್ರಕ್ಕೂ ಕ್ಯಾರೆ ಅನ್ನದ ಕೇರಳ ಸರ್ಕಾರ

ಕರ್ನಾಟಕ ಮತ್ತು ಕೇರಳ ಗಡಿಯಲ್ಲಿರುವ ಕಾಸರಗೋಡಿನ ಅಡೂರಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗೆ ಮಲಯಾಳಂ ಶಿಕ್ಷಕಿಯ ನೇಮಕಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟನೆ ಮಾಡಿದ್ದಾರೆ.

Kasargodu: ಕನ್ನಡ ಶಾಲೆಗೆ ಮಲಯಾಳಂ ಶಿಕ್ಷಕಿ ನೇಮಕ, ಸಚಿವ ಶಿವರಾಜ್ ತಂಗಡಗಿ ಪತ್ರಕ್ಕೂ ಕ್ಯಾರೆ ಅನ್ನದ ಕೇರಳ ಸರ್ಕಾರ
ಅಡೂರಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆ
Follow us
|

Updated on:Jun 23, 2023 | 4:20 PM

ಮಂಗಳೂರು: ಕರ್ನಾಟಕ (Karnataka) ಮತ್ತು ಕೇರಳ (Kerala) ಗಡಿಯಲ್ಲಿರುವ ಕಾಸರಗೋಡಿನ (Kasaragod) ಅಡೂರಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗೆ ಮಲಯಾಳಂ ಶಿಕ್ಷಕಿಯ ನೇಮಕಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಕನ್ನಡ ಬರದ ಮಲಯಾಳಂ ಶಿಕ್ಷಕಿಯ ನೇಮಿಸಿರುವ ಕೇರಳ ಸರ್ಕಾರದ ನಿರ್ಧಾರದ ವಿರುದ್ಧ ಕೆಲ ದಿನಗಳ ಹಿಂದೆ ಅಡೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟಿಸಿದ್ದರು.

ಮಲಯಾಳಂ ಶಿಕ್ಷಕಿಯ ಪಾಠ ನಮಗೆ ಅರ್ಥವಾಗುತ್ತಿಲ್ಲವೆಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದರು. ಇನ್ನು ಪೋಷಕರು ಕನ್ನಡದ ಗಂಧಗಾಳಿ ಗೊತ್ತಿರದ ಶಿಕ್ಷಕಿಯನ್ನು ನೇಮಿಸಿದರೇ ಹೇಗೆ? ಇದರಿಂದ ಮಕ್ಕಳಿಗೆ ಪಾಠ ಅರ್ಥವಾಗುತ್ತಿಲ್ಲ. ಹೀಗಾಗಿ ಶಿಕ್ಷಣ ಇಲಾಖೆ ಹಾಗೂ ಕೇರಳ ಸರ್ಕಾರದ ವಿರುದ್ಧ ಗರಂ ಆಗಿದ್ದರು.

ಇದನ್ನೂ ಓದಿ: ನಾಗರ ಹಾವಿನ ಹೊಟ್ಟೆಯಿಂದ ಪ್ಲಾಸ್ಟಿಕ್ ಡಬ್ಬಿ ಹೊರತೆಗೆದ ಪಶುವೈದ್ಯರ ತಂಡ

ಈ ಹಿನ್ನೆಲೆ ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕೇರಳ ಸರ್ಕಾರದ ಸಚಿವ ಶಿವನ್ ಕುಟ್ಟಿಗೆ ಪತ್ರ ಬರೆದಿದ್ದರು. ಮಲಯಾಳಂ ಶಿಕ್ಷಕರ ಬದಲು ಕನ್ನಡ ಶಿಕ್ಷಕರ ನೇಮಿಸಬೇಕೆಂದು ಕೋರಿದ್ದರು. ಕರ್ನಾಟಕ ಸಚಿವರ ಪತ್ರಕ್ಕೆ ಕೇರಳ ಸರ್ಕಾರ ಪ್ರತಿಕ್ರಿಯೆ ನೀಡಿಲ್ಲ. ಈ ಮೂಲಕ ಮತ್ತೆ ಕೇರಳ ಸರ್ಕಾರ ಕನ್ನಡ ಮಾಧ್ಯಮವನ್ನು ಮುಗಿಸುತ್ತಿದ್ದೆ ಎಂದು ಗಡಿನಾಡು ಕನ್ನಡಿಗರು ಆರೋಪಿಸಿದ್ದಾರೆ.

ಇನ್ನು ಈ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಮುಂದೇನು ಮಾಡಬೇಕೆ ಅಂತ ಯೋಚಿಸುತ್ತೇವೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:18 pm, Fri, 23 June 23

 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ