AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Onam bumper Lottery: ಕೇರಳ ತಿರುಓಣಂ ಬಂಪರ್ ಲಾಟರಿ ಡ್ರಾ: ಪುತ್ತೂರಿನ ಮೇಸ್ತ್ರಿ, ನಾಲ್ವರು ಹೆಣ್ಣು ಮಕ್ಕಳ ಚಂದ್ರಯ್ಯಗೆ 50 ಲಕ್ಷ ರೂ ತೃತೀಯ ಬಹುಮಾನ

For Dakshina Kannada ನಾನೊಬ್ಬನೇ ಕುಟುಂಬದ ಆಧಾರ, ನಾನು ಆರ್ಥಿಕವಾಗಿ ಬಡವನಾಗಿದ್ದರೂ, ನನ್ನ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿದ್ದೇನೆ, ಅವರ ಶಿಕ್ಷಣ ಮತ್ತು ಮದುವೆಗೆ ನಾನು ರೂ 10 ಲಕ್ಷ ಸಾಲ ಮಾಡಿದ್ದೇನೆ. ಹಾಗಾಗಿ ಸಾಲವನ್ನು ವಾಪಸ್​​ ಮಾಡಲು ನಾನು ಮೊದಲ ಆದ್ಯತೆ ನೀಡುತ್ತೇನೆ. ದೇವರು ನನ್ನ ಕಷ್ಟವನ್ನು ಅರ್ಥಮಾಡಿಕೊಂಡಿದ್ದಾನೆ ಎಂದು ನಾನು ಭಾವಿಸುತ್ತೇನೆ ಎಂದು ಮೇಸ್ತ್ರಿ ಚಂದ್ರಯ್ಯ ಸಮಾಧಾನಪಟ್ಟರು.

Kerala Onam bumper Lottery: ಕೇರಳ ತಿರುಓಣಂ ಬಂಪರ್ ಲಾಟರಿ ಡ್ರಾ: ಪುತ್ತೂರಿನ ಮೇಸ್ತ್ರಿ, ನಾಲ್ವರು ಹೆಣ್ಣು ಮಕ್ಕಳ ಚಂದ್ರಯ್ಯಗೆ 50 ಲಕ್ಷ ರೂ ತೃತೀಯ ಬಹುಮಾನ
ಕೇರಳ ತಿರುಓಣಂ ಬಂಪರ್ ಲಾಟರಿ ಡ್ರಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 29, 2023 | 10:38 AM

Share

ಪುತ್ತೂರು, ಸೆಪ್ಟೆಂಬರ್​ 28: ಬಡತನದ ನಡುವೆಯೂ ತನ್ನ ನಾಲ್ವರು ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿರುವ ಪುತ್ತೂರು ತಾಲೂಕಿನ (Puttur) ಇಳಂತಿಲ ಗ್ರಾಮದ ಎಣ್ಮಡಿ ನಿವಾಸಿ, ಕಷ್ಟಪಟ್ಟು ದುಡಿಯುವ ಮೇಸ್ತ್ರಿ ಚಂದ್ರಯ್ಯ ಕುಂಬಾರ ಅವರ ಮೇಲೆ ತಾಯಿ ಲಕ್ಷ್ಮಿ ದೇವಿ ಮುಗುಳು ನಗೆ ಬೀರಿದ್ದಾಳೆ. ಮೇಸ್ತ್ರಿ ಚಂದ್ರಯ್ಯ (mason Chandraiah Kumbara) ಅವರು ಕೇರಳ ರಾಜ್ಯ ಲಾಟರಿ (Kerala state lottery) ಡ್ರಾದಲ್ಲಿ 50 ಲಕ್ಷ ರೂಪಾಯಿಗಳ ಬಹುಮಾನವನ್ನು ಗೆದ್ದಿದ್ದಾರೆ.

ಚಂದ್ರಯ್ಯ ಕಾನತ್ತೂರಿನ ಶ್ರೀ ನಾಲವಾರ ದೈವಸ್ಥಾನಕ್ಕೆ ಹೋಗಿದ್ದರು. ಅವರು 500 ರೂ ಬೆಲೆಯ ಓಣಂ ಬಂಪರ್ ಲಾಟರಿಯನ್ನು ಖರೀದಿಸಿದರು. ಬಂಪರ್ ಟಿಕೆಟ್​ 25 ಕೋಟಿ ರೂ ಬಹುಮಾನದ್ದಾಗಿತ್ತು. ಆದರೆ ಚಂದ್ರಯ್ಯ ತೃತೀಯ ಸ್ಥಾನ ಪಡೆದರು.

ಇದನ್ನೂ ಓದಿ: ಅಬ್ಬಬ್ಬಾ ಲಾಟರಿ! ಕೈಯಲ್ಲಿ ಕಾಸಿಲ್ಲದಿದ್ದರೂ 11 ಮಹಿಳಾ ಪೌರಕಾರ್ಮಿಕರು ಒಟ್ಟಾಗಿ ಟಿಕೆಟ್​ ಖರೀದಿಸಿ 10 ಕೋಟಿ ಕೇರಳ ಲಾಟರಿ ಗೆದ್ದುಬಿಟ್ಟರು!

ಮಾಧ್ಯಮದವರೊಂದಿಗೆ ಮಾತನಾಡಿದ ಚಂದ್ರಯ್ಯ, ನಾನು ಐದು ಸೆಂಟ್ಸ್ ಜನತಾ ಕಾಲೋನಿ ನಿವಾಸಿ, ನನಗೆ ನಾಲ್ಕು ಹೆಣ್ಣು ಮಕ್ಕಳಿದ್ದಾರೆ, ನನ್ನ ಮೊದಲ ಮಗಳು ಪಿಯುಸಿವರೆಗೆ ಓದಿದ್ದಾಳೆ, ಎರಡನೆಯವಳು ಎಂಬಿಎ ಮಾಡುತ್ತಿದ್ದಾಳೆ, ಮೂರನೇ ಮಗಳು ಪದವಿ ಓದುತ್ತಿದ್ದಾಳೆ. ಕೊನೆಯವಳು ಅರೆವೈದ್ಯಕೀಯವನ್ನು ಕೋರ್ಸ್ ಮಾಡ್ತಿದ್ದಾಳೆ ಎಂದು ಮಾಹಿತಿ ಹಂಚಿಕೊಂಡರು.

ನಾನೊಬ್ಬನೇ ಕುಟುಂಬದ ಆಧಾರ, ನಾನು ಆರ್ಥಿಕವಾಗಿ ಬಡವನಾಗಿದ್ದರೂ, ನನ್ನ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿದ್ದೇನೆ, ಅವರ ಶಿಕ್ಷಣ ಮತ್ತು ಮದುವೆಗೆ ನಾನು ರೂ 10 ಲಕ್ಷ ಸಾಲ ಮಾಡಿದ್ದೇನೆ. ಹಾಗಾಗಿ ಸಾಲವನ್ನು ವಾಪಸ್​​ ಮಾಡಲು ನಾನು ಮೊದಲ ಆದ್ಯತೆ ನೀಡುತ್ತೇನೆ. ದೇವರು ನನ್ನ ಕಷ್ಟವನ್ನು ಅರ್ಥಮಾಡಿಕೊಂಡಿದ್ದಾನೆ ಎಂದು ನಾನು ಭಾವಿಸುತ್ತೇನೆ ಎಂದು ಮೇಸ್ತ್ರಿ ಚಂದ್ರಯ್ಯ ಸಮಾಧಾನಪಟ್ಟರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ