AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ವೈದ್ಯಲೋಕದಲ್ಲಿ ಗಾಂಜಾ ಲೋಕ! ಇಬ್ಬರು ವೈದ್ಯರನ್ನು ಮನೆಗೆ ಕಳಿಸಿದ ಕೆಎಂಸಿ‌ ಆಡಳಿತ ಮಂಡಳಿ

ಡ್ರಗ್ಸ್​​ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಅತ್ತಾವರ ಕೆಎಂಸಿ ಆಸ್ಪತ್ರೆ ಮೆಡಿಕಲ್ ಆಫೀಸರ್ ಡಾ.ಸಮೀರ್, ಮಣಿಪಾಲ ಕೆಎಂಸಿ ಆಸ್ಪತ್ರೆ ಮೆಡಿಕಲ್ ಸರ್ಜನ್ ಡಾ.ಮಣಿಮಾರನ್ ಅವರನ್ನು ಆಡಳಿತ ಮಂಡಳಿ ವಜಾ ಮಾಡಿ ಗುತ್ತಿಗೆ ರದ್ದುಪಡಿಸಿದೆ.

ಮಂಗಳೂರಿನ ವೈದ್ಯಲೋಕದಲ್ಲಿ ಗಾಂಜಾ ಲೋಕ! ಇಬ್ಬರು ವೈದ್ಯರನ್ನು ಮನೆಗೆ ಕಳಿಸಿದ ಕೆಎಂಸಿ‌ ಆಡಳಿತ ಮಂಡಳಿ
ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್
TV9 Web
| Edited By: |

Updated on:Jan 20, 2023 | 1:31 PM

Share

ಮಂಗಳೂರು: ಮಂಗಳೂರಿನಲ್ಲಿ ಗಾಂಜಾ ಪ್ರಕರಣದಲ್ಲಿ ವೈದ್ಯರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಕೆಎಂಸಿ‌ ಆಸ್ಪತ್ರೆ ಆಡಳಿತ ಮಂಡಳಿ ಇಬ್ಬರು ವೈದ್ಯರನ್ನು ವಜಾಗೊಳಿಸಿದೆ. ಡ್ರಗ್ಸ್​​ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಅತ್ತಾವರ ಕೆಎಂಸಿ ಆಸ್ಪತ್ರೆ ಮೆಡಿಕಲ್ ಆಫೀಸರ್ ಡಾ.ಸಮೀರ್, ಮಣಿಪಾಲ ಕೆಎಂಸಿ ಆಸ್ಪತ್ರೆ ಮೆಡಿಕಲ್ ಸರ್ಜನ್ ಡಾ.ಮಣಿಮಾರನ್ ಅವರನ್ನು ಆಡಳಿತ ಮಂಡಳಿ ವಜಾ ಮಾಡಿ ಗುತ್ತಿಗೆ ರದ್ದುಪಡಿಸಿದೆ.

ಉಳಿದ 7 ವೈದ್ಯಕೀಯ ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳಾದ ಡಾ‌‌.ನದೀಯಾ ಸಿರಾಜ್, ಡಾ.ವರ್ಷಿಣಿ ಪ್ರತಿ, ಡಾ.ರಿಯಾ ಚಡ್ಡಾ, ಡಾ.ಇರಾ ಬಾಸಿನ, ಡಾ.ಕ್ಷಿತಿಜ್ ಗುಪ್ತಾ ಹಾಗೂ ಡಾ.ವಿ.ಎಸ್‌.ಹರ್ಷಕುಮಾರ್ ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತರಿಗೆ ಕೆಎಂಸಿ ಡೀನ್ ಉನ್ನಿಕೃಷ್ಣನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು ಡಾಕ್ಟರುಗಳ ನಶಾ ಲೋಕ: ಊರು ಬಿಡುತ್ತಿರುವ ಆರೋಪಿ ವೈದ್ಯರು-ವಿದ್ಯಾರ್ಥಿಗಳು, ಬೆನ್ನುಹತ್ತಿದ CCB, ಅನೇಕರು ಅರೆಸ್ಟ್!

ಮಂಗಳೂರು ಮೆಡಿಕಲ್ ಕಾಲೇಜ್​​ಗಳು, ಗಾಂಜಾ ಅಡ್ಡೆಗಳಾಗ್ತಿರುವ ಸತ್ಯ ಬಯಲಾಗಿದ್ದು ಮೆಡಿಕಲ್ ಕಾಲೇಜ್​​ನ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗಾಂಜಾ ನಂಟಿರೋದು ಸಾಬೀತಾಗಿತ್ತು. ಈ ಸಂಬಂಧ ಹತ್ತು ಮಂದಿಯನ್ನ ಸಿಸಿಬಿ ಪೊಲೀಸರು ಈ ಹಿಂದೆಯೇ ಅರೆಸ್ಟ್ ಮಾಡಲಾಗಿದೆ. ಬಳಿಕ ನಶೆಕೋರರು ಕೊಟ್ಟ ಮಾಹಿತಿ ಮೇರೆಗೆ, ಮತ್ತೆ ಮೂವರನ್ನ ಬಂಧಿಸಲಾಗಿತ್ತು. ಕೊಚ್ಚಿನ ಮೂಲದ ಡಿಫಾರ್ಮ್ ವಿದ್ಯಾರ್ಥಿ ಅಡೋನ್ ದೇವ್, ಕೆಎಂಸಿ ವೈದ್ಯಕೀಯ ವಿದ್ಯಾರ್ಥಿ ಡಾ.ಹರ್ಷಕುಮಾರ್ ಹಾಗೂ ಕೆಎಂಸಿಯಲ್ಲಿ ಎಂಡಿ ಸ್ಟೂಡೆಂಟ್​​ ಆಗಿರುವ ತುಮಕೂರು ಮೂಲದ, ಮೊಹಮ್ಮದ್ ಆಫ್ರಾನ್​​ನನ್ನ ವಶಕ್ಕೆ ಪಡೆದಿದ್ದರು.

ಪಿಜಿ, ಹಾಸ್ಟೆಲ್​​ಗಳಲ್ಲಿದ್ದ ಯುವತಿಯರು, ತಮ್ಮ ಬಾಯ್​ ಫ್ರೆಂಡ್​ಗಳ ಜತೆ ಅಪಾರ್ಟ್​​​​​ಮೆಂಟ್​​ಗೆ ಶಿಫ್ಟ್​ ಆಗಿದ್ದರು ಎಂಬ ಬೆಚ್ಚಿಬೀಳಿಸುವ ಸಂಗತಿ ಪೊಲೀಸರ ತನಿಖೆ ವೇಳೆ ಬಯಲಾಗಿತ್ತು. ಇವರು ಓವರ್​ನೈಟ್​​​ ಪಾರ್ಟಿಯಲ್ಲಿ ಡಾಕ್ಟರ್ಸ್​, ಸ್ಟೂಡೆಂಟ್​ಗಳೆಲ್ಲ ಗಾಂಜಾ ಎಳೀತಾ ಇದ್ರಂತೆ. ಲೇಟ್​ ನೈಟ್​ ಪಾರ್ಟಿ ಬಗ್ಗೆ ಅನೇಕ ಸಲ ಸ್ಥಳೀಯರು ಪೊಲೀಸರಿಗೆ ಮಾಹಿತಿ ಕೊಟ್ಟಿದ್ರಂತೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:29 pm, Fri, 20 January 23

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ