AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಸುರತ್ಕಲ್​ನ ಕಾಟಿಪಳ್ಯದಲ್ಲಿ ಚಾಕು ಇರಿತ

ಮಂಗಳೂರು ಹೊರವಲಯದ ಸುರತ್ಕಲ್​​ನ ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ ಜಲೀಲ್ ಎಂಬಾತನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾರೆ.

Mangaluru: ಸುರತ್ಕಲ್​ನ ಕಾಟಿಪಳ್ಯದಲ್ಲಿ ಚಾಕು ಇರಿತ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 24, 2022 | 10:08 PM

ಮಂಗಳೂರು: ಮಂಗಳೂರು (Mangalore) ಹೊರವಲಯದ ಸುರತ್ಕಲ್​​ನ (Surathkal) ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ ಜಲೀಲ್ (45) ಎಂಬುವರಿಗೆ  ದುಷ್ಕರ್ಮಿಗಳು ಇಂದು (ಡಿ. 24) ಚಾಕು ಇರಿದಿದ್ದಾರೆ. ಜಲೀಲ್  ಕಾಟಿಪಳ್ಳದ ನೈತಂಗಡಿ ರಸ್ತೆಯಲ್ಲಿರುವ ಲತೀಫಾ ಸ್ಟೋರ್ ಮಾಲಿಕರಾಗಿದ್ದರು. ಸ್ಟೋರ್​ನಲ್ಲಿದ್ದ ಜಲೀಲ್​ಗೆ ದುಷ್ಕರ್ಮಿಗಳ ಗುಂಪು ಚಾಕು ಇರಿದು ಪರಾರಿಯಾಗಿದ್ದರು. ಇದರಿಂದ ತೀರ್ವ ಗಯಗೊಂಡಿದ್ದ ಜಲೀಲ್​ರನ್ನು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ  ಚಿಕಿತ್ಸೆ ಫಲಕಾರಿಯಾಗದೆ ಜಲೀಲ್​ ಸಾವನ್ನಪ್ಪಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಹೊಸ ವರ್ಷ ಆಚರಣೆ; ಮಂಗಳೂರಿನ ಮೇಲೆ ಡ್ರಗ್​ ಪೆಡ್ಲರ್​ಗಳ ಕಣ್ಣು 

ಹೊಸ ವರ್ಷಾಚರಣೆ ಆಚರಿಸಲು ಮಂಗಳೂರಿಗೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸುವ ಸಾಧ್ಯತೆ ಹಿನ್ನೆಲೆ ಡ್ರಗ್ ಪೆಡ್ಲರ್​ಗಳ ಕಣ್ಣು ಮಂಗಳೂರಿನ ಮೇಲೆ ಬಿದ್ದಿದೆ. ಕೇರಳ ಸೇರಿದಂತೆ ವಿವಿಧ ಕಡೆಯಿಂದ ಗಾಂಜಾ, ಡ್ರಗ್ಸ್ ಅಪಾರ ಪ್ರಮಾಣದಲ್ಲಿ ಬರುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ.

ಇದನ್ನೂ ಓದಿ: 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, 6 ತಿಂಗಳ ಗರ್ಭಿಣಿ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢ

ಮಹಿಳೆಯನ್ನು ಬರ್ಬರ ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು

ಹಾಸನ: ಕತ್ತು ಸೀಳಿ ಮಹಿಳೆಯ ಬರ್ಬರ  ಹತ್ಯೆ ಮಾಡಿ, ದುಷ್ಕರ್ಮಿಗಳು ಪರಾರಿಯಾಗಿರುವಂತಹ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ(58) ಹತ್ಯೆಯಾದ ಮಹಿಳೆ. ಇಂದು(ಡಿ. 24) ಬೆಳಿಗ್ಗೆ ಹತ್ತು ಗಂಟೆ ಸಮಯದಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪಾರ್ವತಮ್ಮ ಪತಿ ರಾಜೇಗೌಡ ಹೊರಗೆ ಹೋಗಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಮಾಸ್ಕ್ ಧರಿಸಿ ಇಬ್ಬರು ಬೈಕ್‌ನಲ್ಲಿ ಬಂದು ಕೊಲೆ ಮಾಡಿರುವ ಆರೋಪ ಮಾಡಿದ್ದು, ಗ್ರಾಮಸ್ಥರು ದುಷ್ಕರ್ಮಿಗಳು ಬೈಕ್​ನಲ್ಲಿ ಪರಾರಿಯಾಗುವುದನ್ನು ನೋಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:18 pm, Sat, 24 December 22

ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ