AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಆರೋಪ: ಬಾರ್ ಅಸೋಸಿಯೇಷನ್​ನಿಂದ ವಕೀಲ ರಾಜೇಶ್ ಭಟ್ ಅಮಾನತು

ಆರೋಪಿ‌ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಸನ್ನದು‌ ಅಮಾನತು ಮಾಡಲಾಗಿದೆ. ಕರ್ನಾಟಕ ವಕೀಲರ ಪರಿಷತ್​​ನಿಂದ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳಲಾಗಿದೆ. ಆರೋಪಿ‌ ವಕೀಲ ಕೆ.ಎಸ್.ಎನ್. ರಾಜೇಶ್ ವಿರುದ್ಧ ವಿಚಾರಣೆ ನಡೆಸಲು ಬಾರ್ ಕೌನ್ಸಿಲ್ ನಿರ್ಧಾರ ಮಾಡಿದೆ.

ಲೈಂಗಿಕ ದೌರ್ಜನ್ಯ ಆರೋಪ: ಬಾರ್ ಅಸೋಸಿಯೇಷನ್​ನಿಂದ ವಕೀಲ ರಾಜೇಶ್ ಭಟ್ ಅಮಾನತು
ವಕೀಲ ರಾಜೇಶ್ ಭಟ್
TV9 Web
| Edited By: |

Updated on:Oct 22, 2021 | 7:48 PM

Share

ಮಂಗಳೂರು: ಇಂಟರ್ನ್‌ಶಿಪ್‌ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಾರ್ ಅಸೋಸಿಯೇಷನ್​​ನಿಂದ ರಾಜೇಶ್ ಭಟ್ ಅಮಾನತು ಆಗಿದ್ದಾರೆ. ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್​​ನಿಂದ ಅಮಾನತು ಆಗಿದ್ದಾರೆ. ಮುಂದಿನ ಆದೇಶದವರೆಗೂ ಪ್ರಾಕ್ಟೀಸ್ ಮಾಡದಂತೆ ಸೂಚನೆ ನೀಡಲಾಗಿದೆ.

ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಎಸಿಬಿ ಎಸ್‌ಪಿಪಿಯಾಗಿ ಕಾರ್ಯನಿರ್ವಹಿಸದಿರಲು ಸೂಚನೆ ಕೊಡಲಾಗಿದೆ. ಎಸಿಬಿ ಪೊಲೀಸ್ ಅಧೀಕ್ಷಕರಿಂದ ಸೂಚನಾ ಪತ್ರ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಎಸಿಬಿ ಪ್ರಕರಣಗಳಲ್ಲಿ ಅಭಿಯೋಜನೆ ಮಾಡದಂತೆ ಸೂಚನೆ ಕೊಡಲಾಗಿದೆ. ರಾಜೇಶ್ ಭಟ್ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಎಸಿಬಿ ಎಸ್​ಪಿಪಿ ಆಗಿ ನಿಯೋಜನೆಗೊಂಡಿದ್ದ ರಾಜೇಶ್ ಭಟ್​ಗೆ ಕಾರ್ಯನಿರ್ವಹಿಸದಿರಲು ಸೂಚಿಸಲಾಗಿದೆ.

ಅಷ್ಟೇ ಅಲ್ಲದೆ, ಆರೋಪಿ‌ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಸನ್ನದು‌ ಅಮಾನತು ಮಾಡಲಾಗಿದೆ. ಕರ್ನಾಟಕ ವಕೀಲರ ಪರಿಷತ್​​ನಿಂದ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳಲಾಗಿದೆ. ಆರೋಪಿ‌ ವಕೀಲ ಕೆ.ಎಸ್.ಎನ್. ರಾಜೇಶ್ ವಿರುದ್ಧ ವಿಚಾರಣೆ ನಡೆಸಲು ಬಾರ್ ಕೌನ್ಸಿಲ್ ನಿರ್ಧಾರ ಮಾಡಿದೆ. ವಕೀಲಿಕೆ ನಡೆಸದಂತೆ ಸನ್ನದು ಅಮಾನತು ಮಾಡಲಾಗಿದೆ. ಎಲ್. ಶ್ರೀನಿವಾಸ ಬಾಬು ಅಧ್ಯಕ್ಷತೆಯಲ್ಲಿ ನಡೆದ ಬಾರ್ ಕೌನ್ಸಿಲ್ ಸಭೆಯಲ್ಲಿ ಇಂದು ಈ ಬಗ್ಗೆ ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ: ವಕೀಲ K.S.N.ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಮೂವರು ಅರೆಸ್ಟ್, ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಇದನ್ನೂ ಓದಿ: ಮಂಗಳೂರು: ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ವಕೀಲ ರಾಜೇಶ್ ಭಟ್ ಸೇರಿ ನಾಲ್ವರ ವಿರುದ್ಧ ಎಫ್​ಐಆರ್; ತನಿಖೆಗೆ 3 ತಂಡ ರಚನೆ

Published On - 7:47 pm, Fri, 22 October 21

ತಮಿಳುನಾಡಿನ ವೆಲ್ಲೂರಿನಲ್ಲಿ 200ಕ್ಕೂ ಹೆಚ್ಚು ಹೋರಿಗಳಿಂದ ಓಟ ಸ್ಪರ್ಧೆ
ತಮಿಳುನಾಡಿನ ವೆಲ್ಲೂರಿನಲ್ಲಿ 200ಕ್ಕೂ ಹೆಚ್ಚು ಹೋರಿಗಳಿಂದ ಓಟ ಸ್ಪರ್ಧೆ
ಕೊನೆಗೂ ಕೂಡಿಬಂತು ಟೈಮ್: ರಾಹುಲ್ ಭೇಟಿ ಮಾಡಿದ್ದಕ್ಕೆ ಡಿಕೆಶಿ ಫುಲ್ ಖುಷ್
ಕೊನೆಗೂ ಕೂಡಿಬಂತು ಟೈಮ್: ರಾಹುಲ್ ಭೇಟಿ ಮಾಡಿದ್ದಕ್ಕೆ ಡಿಕೆಶಿ ಫುಲ್ ಖುಷ್
ಗಿಲ್ಲಿ ಎಂದರೆ ಯಾಕೆ ಇಷ್ಟ? ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಹೇಳಿದ್ದಿಷ್ಟು..
ಗಿಲ್ಲಿ ಎಂದರೆ ಯಾಕೆ ಇಷ್ಟ? ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಹೇಳಿದ್ದಿಷ್ಟು..
6 ಅಡಿ ಉದ್ದದ ಹಾವನ್ನು ಹಿಡಿದು ಆಟವಾಡುತ್ತಿದ್ದ ವೃದ್ಧನ ಕತೆ ಏನಾಯ್ತು?
6 ಅಡಿ ಉದ್ದದ ಹಾವನ್ನು ಹಿಡಿದು ಆಟವಾಡುತ್ತಿದ್ದ ವೃದ್ಧನ ಕತೆ ಏನಾಯ್ತು?
ಚೊಚ್ಚಲ ಅರ್ಧಶತಕ ಚಚ್ಚಿದ ರಾಧಾ ಯಾದವ್
ಚೊಚ್ಚಲ ಅರ್ಧಶತಕ ಚಚ್ಚಿದ ರಾಧಾ ಯಾದವ್
ಆಮೆಗತಿಯ ಬ್ಯಾಟಿಂಗ್‌; ಬಾಬರ್​ ಆಝಂಗೆ ಸ್ಟ್ರೈಕ್ ನೀಡದ ಸ್ಮಿತ್
ಆಮೆಗತಿಯ ಬ್ಯಾಟಿಂಗ್‌; ಬಾಬರ್​ ಆಝಂಗೆ ಸ್ಟ್ರೈಕ್ ನೀಡದ ಸ್ಮಿತ್
ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ..
ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ..
ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಅಧಿಕಾರಿ ಹೇಳಿದ್ದೇನು?
ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಅಧಿಕಾರಿ ಹೇಳಿದ್ದೇನು?
ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್
ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್
ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ
ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ