AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: KSRTC ಬಸ್​ನಲ್ಲಿ ಕೋಳಿ ಮಾಂಸ ಜಗಳ; ಠಾಣೆಗೆ ಬಸ್​ ತೆಗೆದುಕೊಂಡು ಹೋದ ಚಾಲಕ

ಕೂಲಿ ಕಾರ್ಮಿಕರೊಬ್ಬರು ಕೋಳಿ ಮಾಂಸದೊಂದಿಗೆ ಬಸ್ ಹತ್ತಿದ್ದನ್ನು ಆಕ್ಷೇಪಿಸಿದ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್, ಪ್ರಯಾಣಿಕನನ್ನು ಇಳಿಯುವಂತೆ ಒತ್ತಾಯಿಸಿದ್ದಾರೆ. ಇದನ್ನು ನಿರಾಕರಿಸಿದ್ದಕ್ಕೆ ಚಾಲಕ ಮತ್ತು ಕಂಡೆಕ್ಟರ್ ಬಸ್​ ಅನ್ನು ಪ್ರಯಾಣಿಕರ ಸಹಿತ ನೇರವಾಗಿ ಪೊಲೀಸ್ ಠಾಣೆಗೆ ಕೊಂಡೊಯ್ದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

ಮಂಗಳೂರು: KSRTC ಬಸ್​ನಲ್ಲಿ ಕೋಳಿ ಮಾಂಸ ಜಗಳ; ಠಾಣೆಗೆ ಬಸ್​ ತೆಗೆದುಕೊಂಡು ಹೋದ ಚಾಲಕ
ಕೋಳಿ ಮಾಂಸದೊಂದಿಗೆ ಬಸ್ ಹತ್ತಿದ್ದಕ್ಕೆ ಕಾರ್ಮಿಕನನ್ನು ಠಾಣೆಗೆ ಕರೆದೊಯ್ದ KSRTC ಬಸ್ ಚಾಲಕ, ಕಂಡಕ್ಟರ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: Rakesh Nayak Manchi|

Updated on: Oct 16, 2023 | 10:07 PM

Share

ಮಂಗಳೂರು, ಅ.16: ಪ್ರಯಾಣಿಕನೊಬ್ಬ ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಕೆಎಸ್​ಆರ್​ಟಿಸಿ (KSRTC) ಬಸ್ ಹತ್ತಿದ ಕಾರಣಕ್ಕಾಗಿ ಆತನಿಗೆ ನಿರ್ವಾಹಕ ಅವ್ಯಾಚ್ಚ ಶಬ್ದದಿಂದ ಬೈದಿದ್ದಲ್ಲದೆ, ನೇರವಾಗಿ ಪ್ರಯಾಣಿಕರನ್ನು ಕೂರಿಸಿಕೊಂಡು ಬಸ್​ ಅನ್ನು ಪೋಲಿಸ್ ಠಾಣೆಗೆ ಕರೆದೊಯ್ದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

ಸುರೇಶ್ ಎಂಬವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆಎಸ್​ಆರ್​ಟಿಸಿ ಬಸ್ ಹತ್ತಿದ್ದಾರೆ. ಬಸ್ ನಿರ್ವಾಹಕ ಟಿಕೆಟ್ ನೀಡಲು ಬಂದಾಗ ಈತನ ಕೈಯಲ್ಲಿ ಚೀಲವೊಂದ್ದಿದ್ದು, ಇದರ ಬಗ್ಗೆ ವಿಚಾರಿಸಿದ್ದಾರೆ. ಪ್ರಯಾಣಿಕ ಕೋಳಿ ಮಾಂಸ ಎಂದು ತಿಳಿಸಿದಾಗ ಬಸ್​ನಿಂದ ಇಳಿಯುವಂತೆ ಒತ್ತಾಯಿಸಿದ್ದಾರೆ. ಕೋಳಿ ಮಾಂಸ ಬಸ್​ನಲ್ಲಿ ತರಲು ಅವಕಾಶವಿಲ್ಲ ಎಂಬ ವಾದ ನಿರ್ವಾಹಕನದ್ದಾಗಿದೆ. ಆದರೆ ಕೂಲಿ ಕಾರ್ಮಿಕನಿಗೆ ಇದರ ಅರಿವಿಲ್ಲದೆ ಬಸ್​ನಿಂದ ಇಳಿಯಲು ಒಪ್ಪಲಿಲ್ಲ.

ಹೀಗಾಗಿ ಇವರಿಬ್ಬರ ನಡುವೆ ವಾಗ್ವಾದ ನಡೆದಿದೆ. ನಿರ್ವಾಹಕ ಪ್ರಯಾಣಿಕನಿಗೆ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಹೇಳಲಾಗಿದೆ. ಅಲ್ಲದೆ, ಬಸ್​ನಿಂದ ಇಳಿಯದ ಕಾರಣಕ್ಕಾಗಿ ಚಾಲಕ ಪ್ರಯಾಣಿಕರು ತುಂಬಿದ್ದ ಬಸ್ಸನ್ನು ನೇರವಾಗಿ ಪೋಲೀಸ್ ಠಾಣೆಗೆ ತಂದು ಪ್ರಯಾಣಿಕನನ್ನು ಎಳೆದು ಇಳಿಸಿ ಹೋಗಿದ್ದಾರೆ.

ಇದನ್ನೂ ಓದಿ: ಮಂಗಳೂರು ದಸರಾ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ ವಿಶೇಷ ಪ್ಯಾಕೇಜ್

ಈ ವೇಳೆ ಠಾಣೆಯಲ್ಲಿದ್ದ ಎಸ್​ಐ ರಾಮಕೃಷ್ಣ ಅವರು ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಬುದ್ದಿ ಮಾತು ಹೇಳಿದ್ದಾರೆ. ಕೂಲಿ ಕಾರ್ಮಿಕರು ಬಸ್​ನಲ್ಲಿ ಮಾಂಸ, ಮೀನು ಕೊಂಡೊಯ್ಯಲು ಅವಕಾಶ ವಿಲ್ಲ ಎಂದಾದರೆ ಮತ್ತೆ ಹೇಗೆ ಕೊಂಡುಹೋಗುವುದು ಎಂಬ ಪ್ರಶ್ನೆಯನ್ನು ಸುರೇಶ್ ಮಾಡಿದ್ದಾರೆ.

ಕಾರು, ರಿಕ್ಷಾ ಬಾಡಿಗೆ ಮಾಡಿಕೊಂಡು ಒಂದು ಕೆಜಿ ಕೋಳಿ ಕೊಂಡುಹೋಗಬೇಕಾ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಬಡವರು ಕೋಳಿ ಮಾಂಸ ಕೊಂಡುಹೋದರೆ ಅವರನ್ನು ಪೋಲೀಸ್ ಠಾಣೆಗೆ ಕರೆದುಕೊಂಡು ಹೋಗುವುದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಅಲ್ಲದೆ, ನಿರ್ವಾಹಕ ಚಾಲಕರ ಇಂತಹ ನಡೆಯ ಬಗ್ಗೆ ಅಕ್ರೋಶ ವ್ಯಕ್ತವಾಗಿದೆ.

ಕೋಳಿ, ಮೀನು ತರುವಂತಿಲ್ಲ

ಜೀವ ಇರುವ ಕೋಳಿ, ಮೀನುಗಳನ್ನು ತರಬಹುದು, ಮಾಂಸ ಇತರರಿಗೆ ವಾಸನೆ ಬರುತ್ತದೆ. ಇದರಿಂದಾಗಿ ಇತರ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಹೀಗಾಗಿ ಬಸ್​ನಲ್ಲಿ ಕೋಳಿ, ಮೀನು ಮಾಂಸ ತರುವಂತಿಲ್ಲ ಎಂದು ನಿಗಮ ಅದೇಶ ಮಾಡಿದೆ ಎಂದು ಕೆಎಸ್​ಆರ್​ಟಿಸಿ ಬಂಟ್ವಾಳ ವಿಭಾಗದ ವಿಭಾಗೀಯ ಅಧಿಕಾರಿ ಶ್ರೀಶ ಭಟ್ ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More