Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ನಗರದಲ್ಲಿಯೂ ಸಂಚರಿಸಲಿವೆ ಸರ್ಕಾರಿ ಬಸ್​ಗಳು; ಸಮೀಕ್ಷೆ ನಡೆಸಿದ ಕೆಎಸ್​ಆರ್​ಟಿಸಿ

KSRTC Buses in Mangalore; ಮನವಿಗಳ ಆಧಾರದ ಮೇಲೆ, ಸಂಭಾವ್ಯ ಮಾರ್ಗಗಳನ್ನು ಗುರುತಿಸಲು ನಗರದಲ್ಲಿ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆಯ ನಂತರ, ಅಗತ್ಯವಿರುವ ಮಾರ್ಗಗಳಿಗೆ ಅರ್ಜಿ ಸಲ್ಲಿಸಲಾಗುತ್ತದೆ. ನಾಲ್ಕು ಮಾರ್ಗಗಳನ್ನು ಸಂಪರ್ಕಿಸಲು ಮತ್ತು ಒಂದು ಬಸ್ ಅನ್ನು ಒದಗಿಸಲು ಯೋಜಿಸುತ್ತಿದ್ದೇವೆ ಎಂದು ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ತಿಳಿಸಿರುವುದಾಗಿ ವರದಿಯಾಗಿದೆ.

ಮಂಗಳೂರು ನಗರದಲ್ಲಿಯೂ ಸಂಚರಿಸಲಿವೆ ಸರ್ಕಾರಿ ಬಸ್​ಗಳು; ಸಮೀಕ್ಷೆ ನಡೆಸಿದ ಕೆಎಸ್​ಆರ್​ಟಿಸಿ
KSRTC
Follow us
Ganapathi Sharma
|

Updated on: Sep 21, 2023 | 8:16 PM

ಮಂಗಳೂರು, ಸೆಪ್ಟೆಂಬರ್ 21: ಮಂಗಳೂರು ನಗರದಲ್ಲಿ (Mangalore City) ಸದಾ ಖಾಸಗಿ ಬಸ್​​ಗಳದ್ದೇ ದರ್ಬಾರು. ಎಲ್ಲೆಂದರಲ್ಲಿ ಖಾಸಗಿ ಸಿಟಿ ಬಸ್​ಗಳೇ ಸಂಚರಿಸುತ್ತಿವೆ. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿ ಬಳಿಕವಂತೂ ನಗರದಲ್ಲಿಯೂ ಸರ್ಕಾರಿ ಬಸ್​​ಗಳನ್ನು ಕಲ್ಪಿಸಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಇದೀಗ ನಗರವಾಸಿಗಳಿಗೆ ಕೆಎಸ್​ಆರ್​ಟಿಸಿ (KSRTC) ಶುಭ ಸುದ್ದಿ ನೀಡಿದ್ದು, ಮಂಗಳೂರಿನ ಯಾವ್ಯಾವ ರೂಟ್​ಗಳಲ್ಲಿ ಬಸ್​ಗಳನ್ನು ಕಾರ್ಯಾಚರಣೆಗೆ ಇಳಿಸಬಹುದು ಎಂಬ ಬಗ್ಗೆ ಸಮಕ್ಷೆ ನಡೆಸಿದೆ. ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ನಗರದಲ್ಲಿ ತನ್ನ ಸೇವೆಗಳನ್ನು ಹೆಚ್ಚಿಸಲು ಚಿಂತನೆ ನಡೆಸಿರುವ ಬಗ್ಗೆ ವರದಿಯಾಗಿದೆ.

ಸಾರ್ವಜನಿಕರು ಬಸ್ ಸೇವೆಗಳಿಲ್ಲದ ಮಾರ್ಗಗಳಲ್ಲಿ ಸರ್ಕಾರಿ ಬಸ್‌ಗಳಿಗೆ ವಿನಂತಿಸುತ್ತಿದ್ದಾರೆ. ಉದಾಹರಣೆಗೆ, ಕೋಡಿಕಲ್ – ಕುಳೂರು – ಕಾವೂರು – ಬೊಂದೇಲ್ ಮಾರ್ಗಕ್ಕೆ ಭಾರಿ ಬೇಡಿಕೆಯಿದೆ. ಇದರಿಂದ ಕೂಲಿ ಕಾರ್ಮಿಕರು ಸೇರಿದಂತೆ ದುಡಿಯುವ ವರ್ಗದ ಜನರಿಗೆ ಅನುಕೂಲವಾಗುವ ಸಾಧ್ಯತೆ ಇದೆ. ಮನವಿಗಳ ಆಧಾರದ ಮೇಲೆ, ಸಂಭಾವ್ಯ ಮಾರ್ಗಗಳನ್ನು ಗುರುತಿಸಲು ನಗರದಲ್ಲಿ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆಯ ನಂತರ, ಅಗತ್ಯವಿರುವ ಮಾರ್ಗಗಳಿಗೆ ಅರ್ಜಿ ಸಲ್ಲಿಸಲಾಗುತ್ತದೆ. ಹೆಚ್ಚಿನ ಬೇಡಿಕೆ ಇರುವ ಎಲ್ಲಾ ಮಾರ್ಗಗಳಿಗೆ ಬಸ್‌ಗಳನ್ನು ಒದಗಿಸಲು ನಮಗೆ ಸಾಧ್ಯವಾಗದಿದ್ದರೂ, ನಾವು ಮೂರು-ನಾಲ್ಕು ಮಾರ್ಗಗಳನ್ನು ಸಂಪರ್ಕಿಸಲು ಮತ್ತು ಒಂದು ಬಸ್ ಅನ್ನು ಒದಗಿಸಲು ಯೋಜಿಸುತ್ತಿದ್ದೇವೆ ಎಂದು ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಹೇಳಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ವಿಭಾಗವು ಬಿಎಂಟಿಸಿಯಿಂದ ಸುಮಾರು 10 ಬಸ್‌ಗಳನ್ನು ಸ್ವೀಕರಿಸಿದೆ. ಈ ಬಸ್‌ಗಳನ್ನು ಪರವಾನಗಿ ಹೊಂದಿರುವ ಮಾರ್ಗಗಳಲ್ಲಿ ನಿಯೋಜಿಸಲು ಆಯ್ಕೆ ಮಾಡಿಕೊಳ್ಳಲಾಗಿದೆ. ಆದರೆ ಪ್ರಸ್ತುತ ಬಸ್ ಸೇವೆಯ ಕೊರತೆಯಿದೆ ಎಂದು ರಾಜೇಶ್ ಶೆಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ: ಕರಾವಳಿ ಜಿಲ್ಲೆಗಳಲ್ಲಿ ಸ್ಪಂದನೆ ಇಲ್ಲದೆ ನೆನೆಗುದಿಗೆ ಬಿದ್ದ ಕಾರವಾನ್​​ ಪ್ರವಾಸ

ನಾವು ಶಕ್ತಿನಗರಕ್ಕೆ ಒಂದು ಬಸ್ ಅನ್ನು ಪರಿಚಯಿಸಿದ್ದೇವೆ, ಬಜ್ಪೆ ಮತ್ತು ಪಿಲಿಕುಳ-ಮೂಡುಶೆಡ್ಡೆ ಮಾರ್ಗಗಳಲ್ಲಿ ಇನ್ನೆರಡನ್ನು ಪರಿಚಯಿಸುವ ಯೋಜನೆ ಇದೆ. ಈ ಬಸ್‌ಗಳು ನಗರದ ನಿರ್ದಿಷ್ಟ ಹವಾಮಾನ ಪರಿಸ್ಥಿತಿಗಳಿಗೆ ಸೂಕ್ತವಾಗಿ ಹೊಂದಿಕೆಯಾಗುವಂತೆ ಮಾಡಲು ಮರು ಕಂಡೀಷನಿಂಗ್‌ಗೆ ಒಳಗಾಗುತ್ತಿವೆ. ಹೆಚ್ಚುವರಿಯಾಗಿ ನೆಲಹಾಸು, ಬಣ್ಣ ಬಳಿಯುವ ಕಾಮಗಾರಿಯನ್ನೂ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಕೆಎಸ್​ಆರ್​ಟಿಸಿ ಪ್ರಸ್ತುತ 12 ಪರ್ಮಿಟ್‌ಗಳನ್ನು ಹೊಂದಿದೆ. ಆದರೆ, ಸಾಕಷ್ಟು ಆದಾಯವಿಲ್ಲದ ಕಾರಣ ಕೋವಿಡ್-19 ಸಾಂಕ್ರಾಮಿಕಕ್ಕೆ ಮುಂಚೆಯೇ ಹಲವಾರು ಬಸ್‌ಗಳು ಕಾರ್ಯಾಚರಣೆಯನ್ನು ನಿಲ್ಲಿಸಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ