AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kukke Subramanya ChampaShashti: ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಚಂಪಾಷಷ್ಠಿಯ ಈ ದಿನದಂದು ಮಾತ್ರ ಎಡೆಸ್ನಾನಕ್ಕೆ ಅವಕಾಶ

ChampaShashti: ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲಾಗಿದೆ. ಕೊರೊನಾ ಸಮಯದಲ್ಲಿ ಈ ಆಚರಣೆಗೆ ನಿರ್ಬಂಧಿಸಲಾಗಿತ್ತು. ನವೆಂಬರ್ 21ರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದೆ.

Kukke Subramanya ChampaShashti: ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಚಂಪಾಷಷ್ಠಿಯ ಈ ದಿನದಂದು ಮಾತ್ರ ಎಡೆಸ್ನಾನಕ್ಕೆ ಅವಕಾಶ
Kukke Subramanya ChampaShashti
TV9 Web
| Edited By: |

Updated on:Nov 16, 2022 | 3:01 PM

Share

ದಕ್ಷಿಣ ಕನ್ನಡ:  ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ (Kukke Subramanya) ಚಂಪಾ ಷಷ್ಠಿಯ (ChampaShashti) ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲಾಗಿದೆ. ಕೊರೊನಾ ಸಮಯದಲ್ಲಿ ಈ ಆಚರಣೆಗೆ ನಿರ್ಬಂಧಿಸಲಾಗಿತ್ತು. ನವೆಂಬರ್ 21ರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದೆ. ಈಗಾಗಲೇ ಆಡಳಿತ ಮಂಡಳಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಸುವ ಬಗ್ಗೆ ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದೆ. ಲಕ್ಷ ದೀಪೋತ್ಸವ ದಿನದಂದು ರಾತ್ರಿ ರಥೋತ್ಸವದ ಇಲ್ಲಿನ ಬೀದಿಯಲ್ಲಿ ಉರುಳು ಸೇವೆ ಮಾಡುವವರಿಗೆ ಸಂಜೆ 5ರಿಂದ ಬೆಳಗ್ಗೆ 6 ಗಂಟೆವರೆಗೆ ಅವಕಾಶ ನೀಡಲಾಗುವುದು ಎಂದು ಮಹತ್ವದ ಸಭೆಯಲ್ಲಿ  ತಿಳಿಸಿದ್ದಾರೆ.

ಸಭೆಯಲ್ಲಿ ತಿಳಿಸಿರುವಂತೆ ಈ ಬಾರಿ ಮೂರು ದಿನ ಎಡೆಸ್ನಾನಕ್ಕೆ ಅವಕಾಶ ನೀಡಲಾಗಿದೆ. ಚೌತಿ, ಪಂಚಮಿ ಮತ್ತು ಷಷ್ಠಿಯಂದು ಎಡೆಸ್ನಾನ ಮಾಡಬಹುದು. ಅಂದರೆ, ನ.27, 28 ಮತ್ತು 29ರಂದು ಇದಕ್ಕೆ ಅವಕಾಶ ಸಿಗಲಿದೆ. ಮಧ್ಯಾಹ್ನ ಮಹಾಪೂಜೆಯ ಬಳಿಕ ಭಕ್ತರು ಸ್ವ-ಇಚ್ಛೆಯಲ್ಲಿ ಎಡೆಸ್ನಾನದಲ್ಲಿ ಭಾಗವಹಿಸಬಹುದು.

ಅಂಗಳದ ಸುತ್ತಲೂ ಎಲೆಗಳನ್ನ ಹಾಕಿ ಅದ್ರಲ್ಲಿ ನೈವೇದ್ಯ ಬಡಿಸಲಾಗುತ್ತೆ. ಅದ‌ನ್ನ ಹಸುಗಳು ತಿಂದ ಬಳಿಕ ಭಕ್ತರು ಎಲೆಯ ಮೇಲೆ ಉರುಳೋದು ಎಡೆಸ್ನಾನ. ಧಾರ್ಮಿಕ ದತ್ತಿ ಇಲಾಖೆಯ ಇಬ್ಬರು ಆಗಮಶಾಸ್ತ್ರ ಪಂಡಿತರು ಉಪಸ್ಥಿತಿಯಲ್ಲಿ ಈ ಎಡೆಸ್ನಾನ ನಡೆಯಲಿದೆ ಮತ್ತು ಜಿಲ್ಲಾಧಿಕಾರಿಗಳ ಆದೇಶದಂತೆ ಅಂದರೆ ಅವರ ನೇತೃತ್ವದಲ್ಲೇ ಈ ಕಾರ್ಯ ನಡೆಯುತ್ತದೆ.

ಇದನ್ನು ಓದಿ: Kukke Subramanya temple town: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇನ್ನು ಜಿಯೋ 4G ಡಿಜಿಟಲ್ ಲೈಫ್ ಸಂಪರ್ಕ ಸಂಭ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಕುಣಿತ ಭಜನೆ ನಡೆಸಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಅನೇಕ ತಂಡಗಳಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ಇಲ್ಲಿನ ಆಡಳಿತ ಮಂಡಳಿ ತಿಳಿಸಿರುವಂತೆ 1 ಸಾವಿರಕ್ಕೂ ಹೆಚ್ಚು ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ. ಪ್ರತಿಕಾ ಪ್ರಕಟನೆಯಲ್ಲಿ ತಿಳಿಸಿರುವಂತೆ ಕುಣಿತ ಭಜನೆಗೆ ಹೆಸರನ್ನು ನೋಂದಾಯಿಸಿಕೊಳ್ಳಬಹು ಎಂದು ಹೇಳಿದೆ.

ಒಂದು ಸಾವಿರ ತಂಡಗಳು ಭಾಗವಹಿಸುವ ಕಾರಣದಿಂದ ಕ್ಷೇತ್ರದ ರಾಜಗೋಪುರದ ಬಳಿಯಿಂದ ರಥಬೀದಿ, ಅಡ್ಡಬೀದಿ ಕಾಶಿಕಟ್ಟೆಯಾಗಿ ಕುಮಾರಧಾರದವರೆಗೆ ಭಜನೆ ನಡೆಸಲು ಅವಕಾಶವನ್ನು ನೀಡಿದೆ. ನವೆಂಬರ್ 23 ರ ಲಕ್ಷದೀಪೋತ್ಸವದ ದಿನ ಸಂಜೆ 7ರಿಂದ ನಡೆಯಲಿದೆ. ಪ್ರತಿ ತಂಡದಲ್ಲೂ 10 ಜನ ಇರಬೇಕು. ನವೆಂಬರ್ 20ರೊಳಗೆ ಕ್ಷೇತ್ರದ ಕಚೇರಿಗೆ ಬಂದು ಹೆಸರು ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಹೇಳಲಾಗಿದೆ.

Published On - 2:58 pm, Wed, 16 November 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ