AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕೆ ಚಾರಣಿಗರಿಗೆ ಕುಮಾರಪರ್ವತ ಬಂದ್​; ಆದೇಶ ಉಲ್ಲಂಘಿಸಿದ್ರೆ ಅರಣ್ಯ ಇಲಾಖೆ ಕಠಿಣ ಕ್ರಮದ ಎಚ್ಚರಿಕೆ

ಈ ಪರ್ವತ ಪ್ರದೇಶದಲ್ಲಿ ವನ್ಯಜೀವಿ ಸಂರಕ್ಷಿತಾರಣ್ಯಗಳಾಗಿವೆ. ಇಂತಹ ಕಡೆ ಜನ ಸಂಚರಿಸುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಕೆಲವರು ಅಲ್ಲಿಯೇ ಟೆಂಟ್‌ ಹಾಕಿ ಉಳಿಯುತ್ತಿರುವುದು ಅಲ್ಲಿರುವ ಸಾವಿರಾರು ಅಪರೂಪದ ಜೀವ ಸಂಕುಲಕ್ಕೆ ಇದು ಮಾರಕವಾಗುತ್ತಿದೆ. ಹೀಗಾಗಿ ಅರಣ್ಯ ಇಲಾಖೆ ಈ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಪರಿಸರಕ್ಕೆ ಮಾರಕವಾಗದಂತೆ ನಿರ್ಧಾರ ಕೈಗೊಳ್ಳಲಿದೆ.

ಸದ್ಯಕ್ಕೆ ಚಾರಣಿಗರಿಗೆ ಕುಮಾರಪರ್ವತ ಬಂದ್​; ಆದೇಶ ಉಲ್ಲಂಘಿಸಿದ್ರೆ ಅರಣ್ಯ ಇಲಾಖೆ ಕಠಿಣ ಕ್ರಮದ ಎಚ್ಚರಿಕೆ
ಕುಮಾರಪರ್ವತ ಚಾರಣಿಗರಿಗೆ ಬಂದ್​; ಆದೇಶ ಉಲ್ಲಂಘಿಸಿದ್ರೆ ಕಠಿಣ ಕ್ರಮ
ಅಶೋಕ್​ ಪೂಜಾರಿ, ಮಂಗಳೂರು
| Updated By: ಸಾಧು ಶ್ರೀನಾಥ್​|

Updated on:Feb 08, 2024 | 2:22 PM

Share

ಲಾಂಗ್ ವೀಕೆಂಡ್ ಬಂತಂದ್ರೆ ಸಾಕು ಪ್ಯಾಟೆ ಮಂದಿ ಟ್ರೆಕ್ಕಿಂಗ್ ಹೋಗೊದಕ್ಕೆ (Trekking Restricted) ಸಿದ್ದರಾಗಿ ಬಿಡ್ತಾರೆ. ಅದರಲ್ಲೂ ಈಗೀಗ ಸಂರಕ್ಷಿತಾರಣ್ಯಗಳು ಪ್ರವಾಸಿತಾಣಗಳಾಗಿ ಬದಲಾಗಿ ಬಿಡುತ್ತಿದೆ. ಈ ಬೆಳವಣಿಗೆ ಪ್ರಕೃತಿಯ ಮೇಲೆ ಘೋರ ಪರಿಣಾಮ ಬೀರುವ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಚಾರಣ ಪ್ರದೇಶ ಕುಮಾರ ಪರ್ವತಕ್ಕೆ ಚಾರಣಿಗರ (Kumara Parvatha Trekking) ಎಂಟ್ರಿಗೆ ನಿಷೇಧ ವಿಧಿಸಲಾಗಿದೆ. ಆದೇಶ ಉಲ್ಲಂಘಿಸಿದ್ರೆ ಅರಣ್ಯ ಇಲಾಖೆ ಕಠಿಣ ಕ್ರಮದ ಎಚ್ಚರಿಕೆಯನ್ನು ನೀಡಿದೆ.

ಒಂದೆಡೆ ಹಸಿರು, ಇನ್ನೊಂದಡೆ ಮುಳಿ ಹುಲ್ಲಿನಿಂದ ಕೂಡಿದ ನುಣುಪಾದ ಶಿಖರ. ಬಂಡೆಗಳ ಕಡಿದಾದ ಪ್ರದೇಶದಲ್ಲಿ ಹೆಜ್ಜೆ ಹಾಕುವ ಚಾರಣಿಗರು. ಇದು ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಪ್ರದೇಶ. ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯೊಳಗೆ ಬರುವ ಈ ಕುಮಾರ ಪರ್ವತ ಹತ್ತೋದಕ್ಕೆ ಸಾಕಷ್ಟು ಜನ ಚಾರಣಿಗರು ಬರ್ತಾರೆ.

ಲಾಂಗ್‌ ವೀಕೆಂಡ್‌ಗಳಲ್ಲಿ ಸುಮಾರು 400 ರಿಂದ 500 ಮಂದಿ ಭೇಟಿ ನೀಡುತ್ತಿದ್ದ ಈ ಪರ್ವತಕ್ಕೆ ವಾರಗಳ ಹಿಂದೆ ಸುಬ್ರಹ್ಮಣ್ಯದ ಮೂಲಕ ಸಾವಿರಾರು ಮಂದಿ ದಾಂಗುಡಿಯಿಟ್ಟಿದ್ದರು. ಇದರಿಂದ ಟಿಕೆಟ್‌ ಕೌಂಟರ್‌ನಲ್ಲಿ ನೂಕು ನುಗ್ಗಲು ಉಂಟಾದ ವೀಡಿಯೋ ವೈರಲ್‌ ಆಗಿತ್ತು. ಇದನ್ನು ನೋಡಿ ಪರಿಸರ ಪ್ರೇಮಿಗಳು ಕಳವಳ ವ್ಯಕ್ತಪಡಿಸಿದ್ದರು. ಈ ವಿಚಾರ ಅರಣ್ಯ ಸಚಿವ ಈಶ್ವರ ಖಂಡ್ರೆ ಗಮನಕ್ಕೆ ಬಂದು ರಾಜ್ಯದ ಎಲ್ಲಾ ಟ್ರಕ್ಕಿಂಗ್‌ ಪಾಯಿಂಟ್‌ಗಳಲ್ಲಿಯೂ ಎಸ್‌ಒಪಿ ರೂಪಿಸುವ ಅಗತ್ಯವಿದ್ದು, ಅಲ್ಲಿಯವರೆಗೂ ಅನ್‌ಲೈನ್‌ ಬುಕ್ಕಿಂಗ್‌ ಇಲ್ಲದ ತಾಣಗಳಲ್ಲಿ ಟ್ರಕ್ಕಿಂಗ್‌ ನಿರ್ಬಂಧಿಸುವಂತೆ ಸೂಚಿಸಿದ್ದರು. ಅದರಂತೆ ಇದೀಗ ಕುಮಾರ ಪರ್ವತ ಪ್ರವೇಶ ಸ್ಥಳದಲ್ಲೂ ಅರಣ್ಯ ಇಲಾಖೆ ಪ್ರವಾಸಿಗರ ಎಂಟ್ರಿಗೆ ನಿರ್ಬಂಧ ವಿಧಿಸಿರುವ ಬ್ಯಾನರ್ ಅಳವಡಿಸಿದೆ.

ಇದನ್ನೂ ಓದಿ: ಕುಮಾರ ಪರ್ವತದ ತಪ್ಪಲಿನಲ್ಲಿ ನಡೆಯುತ್ತೆ ಕುಕ್ಕೆ ಸುಬ್ರಹ್ಮಣ್ಯ ದೇವರ ಪಾದುಕೆ ಪೂಜೆ, ಇದರ ಹಿಂದಿದೆ ಪುರಾಣ ಕಥೆ

ಕುಮಾರ ಪರ್ವತ ಸಮುದ್ರ ಮಟ್ಟದಿಂದ ಸುಮಾರು 5,615 ಅಡಿ ಎತ್ತರದಲ್ಲಿದೆ. ದಕ್ಷಿಣ ಕನ್ನಡ, ಕೊಡಗು, ಹಾಸನ ಈ ಮೂರು ಜಿಲ್ಲೆಯ ಕಡೆಗಳಿಂದಲೂ ಇಲ್ಲಿಗೆ ಚಾರಣ ಕೈಗೊಳ್ಳಬಹುದು. ಆದ್ರೆ ಹೆಚ್ಚಿನ ಮಂದಿ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂಬದಿಯಿಂದ ಚಾರಣ ಆರಂಭಿಸುತ್ತಾರೆ. ಸುಬ್ರಹ್ಮಣ್ಯದಿಂದ ಕುಮಾರಪರ್ವಕ್ಕೆ ಟ್ರೆಕ್ಕಿಂಗ್ ಮಾಡಲು ಇರುವ ನಡಿಗೆಯ ದೂರ 12 ಕಿ.ಮೀ. ಸದ್ಯ ಕುಮಾರ ಪರ್ವತ ಟ್ರೆಕ್ಕಿಂಗ್ ಆರಂಭಿಸುತ್ತಿದ್ದ ಜಾಗಕ್ಕೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ( Eshwara Khandre ) ಅವರೇ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇಲ್ಲಿ ಅರಣ್ಯ, ಹುಲ್ಲುಗಾವಲು ಸಂಪೂರ್ಣವಾಗಿ ಒಣಗಿರುವುದರಿಂದ ಈ ಅವಧಿಯಲ್ಲಿ ವನ್ಯಧಾಮದೊಳಗೆ ಸಾರ್ವಜನಿಕರು ಪ್ರವೇಶಿಸಿ ಚಟುವಟಿಕೆ ನಡೆಸಿದರೆ ವನ್ಯಧಾಮಕ್ಕೆ ಬೆಂಕಿ ಬೀಳುವ ಸಾಧ್ಯತೆ ಮತ್ತು ಚಾರಣಿಗರಿಗೂ ಅಪಾಯ ಇದೆ ಎಂಬ ಕಾರಣಕ್ಕಾಗಿ ಪ್ರವಾಸಿಗರಿಗೆ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ. ಮುಂದೆ ದಿನವೊಂದಕ್ಕೆ ಎಷ್ಟು ಮಂದಿಗೆ ಟ್ರೆಕ್ಕಿಂಗ್ ಅವಕಾಶ ನೀಡಬಹುದು, ಏನೇನು ಕ್ರಮ ವಹಿಸಬೇಕು ಎಂಬ ಬಗ್ಗೆ ಅಧ್ಯಯನ ನಡೆಸಿ ಆನ್‌ಲೈನ್ ಮೂಲಕವೇ ಟಿಕೇಟ್ ನೀಡುವ ವ್ಯವಸ್ಥೆ ಮಾಡಲಾಗುತ್ತೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:20 pm, Thu, 8 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ