Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ತಂಗಡಿಯ ನಕ್ಸಲ್ ಪೀಡಿತವಾಗಿದ್ದ ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿ

ಹಿಂದೊಮ್ಮೆ ನಕ್ಸಲ್ ಚಟುವಟಿಕೆ ಪೀಡಿತ ಪ್ರದೇಶ ಎಂದೇ ಗುರುತಿಸಿಕೊಂಡಿದ್ದ ಕುತ್ಲೂರು ಈಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದೆ. ಆದರೆ, ಬೇರೆಯೇ ಕಾರಣಕ್ಕೆ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಈ ಗ್ರಾಮಕ್ಕೆ ಈಗ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಗೆ ಭಾಜನವಾದ ಕರ್ನಾಟಕದ ಏಕೈಕ ಗ್ರಾಮವಾಗಿಯೂ ಕುತ್ಲೂರು ಗುರುತಿಸಿಕೊಂಡಿದೆ.

ಬೆಳ್ತಂಗಡಿಯ ನಕ್ಸಲ್ ಪೀಡಿತವಾಗಿದ್ದ ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿ
ಬೆಳ್ತಂಗಡಿಯ ನಕ್ಸಲ್ ಪೀಡಿತವಾಗಿದ್ದ ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿ
Follow us
Ganapathi Sharma
|

Updated on: Sep 27, 2024 | 10:10 AM

ಮಂಗಳೂರು, ಸೆಪ್ಟೆಂಬರ್ 27: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮ ನಕ್ಸಲ್ ಚಟುವಟಿಕೆಗಳಿಂದ ಸುದ್ದಿಯಾಗಿದ್ದ ಊರು. ಇದೀಗ ಆ ಹಣೆಪಟ್ಟಿ ಕಳಚಿಕೊಂಡಿದ್ದು, ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಭಾಜನವಾಗಿದೆ. ಈ ಮೂಲಕ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಪಾತ್ರವಾದ ಕರ್ನಾಟಕದ ಏಕೈಕ ಗ್ರಾಮವೆಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ದೇಶದ ಗ್ರಾಮಗಳಲ್ಲಿ ಸ್ಪರ್ಧಾತ್ಮಕತೆ ಮತ್ತು ಸ್ವಾವಲಂಬನೆಯ ಒಲವು ಹೆಚ್ಚಿಸುವುದಕ್ಕಾಗಿ ಪ್ರವಾಸೋದ್ಯಮ ಸಚಿವಾಲಯವು ಕಳೆದ ವರ್ಷ ‘ಬೆಸ್ಟ್ ಟೂರಿಸಂ ವಿಲೇಜ್ ಕಾಂಪಿಟೀಷನ್’ ಆರಂಭಿಸಿತ್ತು. ಇದರ ಅಡಿಯಲ್ಲಿ ಪ್ರತಿ ಕೆಟಗರಿಯಿಂದ ಅತ್ಯುತ್ತಮ ಐದು ಗ್ರಾಮೀಣ ಪ್ರವಾಸೋದ್ಯಮ ಗ್ರಾಮಗಳನ್ನು ಗುರುತಿಸಲಾಗುತ್ತದೆ.

ಮೂರು ಹಂತಗಳಲ್ಲಿ ನಡೆದಿದ್ದ ಸ್ಪರ್ಧೆ

ಸ್ಪರ್ಧೆಯು ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮೂರು ಹಂತಗಳಲ್ಲಿ ನಡೆಯುತ್ತದೆ. ಕುತ್ಲೂರಿನ ಸಾಫ್ಟ್‌ವೇರ್ ಇಂಜಿನಿಯರ್ ಹರೀಶ್ ಡಾಕಯ್ಯ ಅವರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಕತಾರ್‌ನಲ್ಲಿ ಕೆಲಸ ಮಾಡುವ ಅದೇ ಗ್ರಾಮದ ಸಂದೀಪ್ ಪೂಜಾರಿ ಮತ್ತು ಶಿವರಾಜ್ ಜತೆಗೂಡಿ ಸ್ನೇಹಿತರೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಅವರು ಸಾಹಸ ಪ್ರವಾಸೋದ್ಯಮ ವಿಭಾಗದಲ್ಲಿ ಭಾಗವಹಿಸಿದ್ದರು. ಪ್ರವಾಸೋದ್ಯಮ ವೆಬ್‌ಸೈಟ್‌ನಲ್ಲಿ ವಿವಿಧ ಸಾಹಸ ಅವಕಾಶಗಳು, ಸಂದರ್ಶಕರ ಸುರಕ್ಷತೆಗಾಗಿ ಸ್ಥಳದಲ್ಲಿರುವ ಭದ್ರತಾ ವ್ಯವಸ್ಥೆ ಇತ್ಯಾದಿಗಳಿಗೆ ಸಂಬಂಧಿಸಿದ ಸುಮಾರು 40 ಪ್ರಶ್ನೆಗಳಿದ್ದವು. ಅಲ್ಲಿ ಅವರು ಫೋಟೋಗಳು ಮತ್ತು ಪ್ರವಾಸೋದ್ಯಮದ ವಿವರಗಳನ್ನು ಒಳಗೊಂಡಂತೆ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಾಗಿತ್ತು. ನಂತರ ರಾಷ್ಟ್ರೀಯ ಮಟ್ಟದ ಮೌಲ್ಯಮಾಪನದಲ್ಲಿ ಅವರು ವೀಡಿಯೊವನ್ನು ಸಲ್ಲಿಸಬೇಕಾಯಿತು.

ಇದನ್ನೂ ಓದಿ: ಅಮೆರಿಕದಲ್ಲೂ ಮಂಗಳೂರಿನ ಯಕ್ಷಗಾನದ ರಂಗು, ವೈರಲ್‌ ಆಯ್ತು ವಿಡಿಯೋ

ಸ್ಪರ್ಧಿಗಳು ಅಪ್​ಲೋಡ್ ಮಾಡಿದ ಫೋಟೊ, ವಿಡಿಯೋಗಳು, ಮಾಹಿತಿಗಳನ್ನು ಪರಿಶೀಲನೆ ಮಾಡಿ ನಂತರ ಗ್ರಾಮಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು