AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲತಡಿ ಮಂಗಳೂರಿನಲ್ಲಿ ಹೆಣ್ಣು ಮಗುವಿನ ಮೇಲೆ ಹೀನ ಕೃತ್ಯ

ಮಂಗಳೂರಿನ ಪಾಂಡೇಶ್ವರದಲ್ಲಿ ಫಿಶ್ ಕಟ್ಟಿಂಗ್ ಮಾಡುವ ಫ್ಯಾಕ್ಟರಿ ಬಳಿ ಬಿಹಾರ ಮೂಲದ ಕಾರ್ಮಿಕರು ನೆಲೆಸಿದ್ದಾರೆ. ಕಾರ್ಮಿಕರೆಲ್ಲರ ಮಕ್ಕಳನ್ನ ನೋಡಿಕೊಳ್ಳಲು ಒಂದು ಕ್ಯಾಂಪ್ ಇದೆ. ಆ ಶಿಬಿರದಿಂದ ಹೆಣ್ಣು ಮಗುವನ್ನು ಚಂದನ್ ಎಂಬ ಆರೋಪಿ ಹೊತ್ತೊಯ್ದಿದ್ದಾನೆ. ಲೈಂಗಿಕ ಕಿರುಕುಳ ನೀಡಿ ಮಗುವನ್ನು ಫಿಶ್ ಕಟ್ಟಿಂಗ್ ಟ್ಯಾಂಕ್ ಗೆ ಬಿಸಾಡಿ ಹೋಗಿದ್ದಾನೆ.

ಕಡಲತಡಿ ಮಂಗಳೂರಿನಲ್ಲಿ ಹೆಣ್ಣು ಮಗುವಿನ ಮೇಲೆ ಹೀನ ಕೃತ್ಯ
ಪ್ರಾತಿನಿಧಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on:Nov 01, 2021 | 12:22 PM

Share

ಮಂಗಳೂರು: ಕಡಲತಡಿ ಮಂಗಳೂರಿನಲ್ಲೊಂದು ಹೀನಾತಿಹೀನ ಕೃತ್ಯ ನಡೆದಿದೆ. ಲೈಂಗಿಕ ಕಿರುಕುಳ ನೀಡಲು ಎರಡು ವರ್ಷದ ಹೆಣ್ಣು ಮಗುವನ್ನು ಕಿರಾತಕರು ಹೊತ್ತೊಯ್ದಿದ್ದಾರೆ. ನಿನ್ನೆ ಸಂಜೆ ನಾಲ್ಕು ಗಂಟೆ ಸುಮಾರಿಗೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುಕೃತ್ಯ ನಡೆದಿದೆ. ಫಿಶ್ ಕಟ್ಟಿಂಗ್ ಮಾಡುವ ಫ್ಯಾಕ್ಟರಿ ಬಳಿ ಬಿಹಾರ ಮೂಲದ ಕಾರ್ಮಿಕರು ನೆಲೆಸಿದ್ದಾರೆ. ಕಾರ್ಮಿಕರೆಲ್ಲರ ಮಕ್ಕಳನ್ನ ನೋಡಿಕೊಳ್ಳಲು ಒಂದು ಕ್ಯಾಂಪ್ ಇದೆ. ಆ ಶಿಬಿರದಿಂದ ಹೆಣ್ಣು ಮಗುವನ್ನು ಚಂದನ್ ಎಂಬ ಆರೋಪಿ ಹೊತ್ತೊಯ್ದಿದ್ದಾನೆ. ಲೈಂಗಿಕ ಕಿರುಕುಳ ನೀಡಿ ಮಗುವನ್ನು ಫಿಶ್ ಕಟ್ಟಿಂಗ್ ಟ್ಯಾಂಕ್ ಗೆ ಬಿಸಾಡಿ ಹೋಗಿದ್ದಾನೆ.

ನಾಲ್ಕು ಗಂಟೆಗಳ ಕಾಲ ಜೀವನ್ಮರಣದ ಮಧ್ಯೆ ಮಗು ಹೋರಾಡಿದೆ. ಫಿಶ್ ಕಟ್ಟಿಂಗ್ ಟ್ಯಾಂಕ್ ನಲ್ಲಿ ಮಗುವಿನ ಜೀವನ್ಮರಣ ಹೋರಾಟ ನಡೆಸುವಾಗ ಟ್ಯಾಂಕ್ ನಲ್ಲಿದ್ದ ಉಪ್ಪು ನೀರು ಸೇವಿಸಿ ಅಸ್ವಸ್ಥಗೊಂಡಿದ್ದಾಳೆ. ಶ್ವಾಸಕೋಶಕ್ಕೆ ನೀರು ತುಂಬಿಕೊಂಡು ಮಗು ಗಂಭೀರವಾಗಿ ಅಸ್ವಸ್ಥಗೊಂಡಿದ್ದಾಳೆ. ವೆನ್ಲಾಕ್ ಮಕ್ಕಳ ಆಸ್ಪತ್ರೆಗೆ ಮಗುವನ್ನು ದಾಖಲು ಮಾಡಲಾಗಿದೆ.

ಸೊಸೆಯ ಕಿರುಕುಳಕ್ಕೆ ಬೇಸತ್ತು ಕೆರೆಗೆ ಹಾರಿದ ಅತ್ತೆ

ಗದಗ: ಸೊಸೆಯ ಕಿರುಕುಳಕ್ಕೆ ಬೇಸತ್ತು ಅತ್ತೆಯೊಬ್ಬರು ಇಲ್ಲಿನ ಭಿಷ್ಮ ಕೆರೆಗೆ ಹಾರಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಶಾಂತಕ್ಕ ಹೀರಮಠ(70) ಅವರನ್ನ ರಕ್ಷಣೆ ಮಾಡಲಾಗಿದೆ. ಗದಗದ ಮಸಾರಿ ಕಾಲೋನಿಯ ನಿವಾಸಿ ಶಾಂತಕ್ಕ ಎಂಬುವವರಿಗೆ ಊಟ ಮತ್ತು ಮಲಗುವುದಕ್ಕೆ ಬೆಡ್‌ಶೀಟ್ ನೀಡುತ್ತಿರಲಿಲ್ಲ. ಚೇರ್ ಮೇಲೆ ಕೂರುವುದಕ್ಕೂ ಅವರ ಸೊಸೆ ಬಿಡುತ್ತಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗದಗ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Puneeth Rajkumar Eye Donate: ನಾರಾಯಣ ನೇತ್ರಾಲಯ ಮುಖ್ಯಸ್ಥ ಡಾ. ಭುಜಂಗಶೆಟ್ಟಿ ಸುದ್ದಿಗೋಷ್ಠಿ | Tv9 Kannada

(labourer physically abuses girl child in fish cutting factory at mangalore port)

Published On - 12:06 pm, Mon, 1 November 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ