AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲತಡಿ ಮಂಗಳೂರಿನಲ್ಲಿ ಹೆಣ್ಣು ಮಗುವಿನ ಮೇಲೆ ಹೀನ ಕೃತ್ಯ

ಮಂಗಳೂರಿನ ಪಾಂಡೇಶ್ವರದಲ್ಲಿ ಫಿಶ್ ಕಟ್ಟಿಂಗ್ ಮಾಡುವ ಫ್ಯಾಕ್ಟರಿ ಬಳಿ ಬಿಹಾರ ಮೂಲದ ಕಾರ್ಮಿಕರು ನೆಲೆಸಿದ್ದಾರೆ. ಕಾರ್ಮಿಕರೆಲ್ಲರ ಮಕ್ಕಳನ್ನ ನೋಡಿಕೊಳ್ಳಲು ಒಂದು ಕ್ಯಾಂಪ್ ಇದೆ. ಆ ಶಿಬಿರದಿಂದ ಹೆಣ್ಣು ಮಗುವನ್ನು ಚಂದನ್ ಎಂಬ ಆರೋಪಿ ಹೊತ್ತೊಯ್ದಿದ್ದಾನೆ. ಲೈಂಗಿಕ ಕಿರುಕುಳ ನೀಡಿ ಮಗುವನ್ನು ಫಿಶ್ ಕಟ್ಟಿಂಗ್ ಟ್ಯಾಂಕ್ ಗೆ ಬಿಸಾಡಿ ಹೋಗಿದ್ದಾನೆ.

ಕಡಲತಡಿ ಮಂಗಳೂರಿನಲ್ಲಿ ಹೆಣ್ಣು ಮಗುವಿನ ಮೇಲೆ ಹೀನ ಕೃತ್ಯ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸಾಧು ಶ್ರೀನಾಥ್​|

Updated on:Nov 01, 2021 | 12:22 PM

Share

ಮಂಗಳೂರು: ಕಡಲತಡಿ ಮಂಗಳೂರಿನಲ್ಲೊಂದು ಹೀನಾತಿಹೀನ ಕೃತ್ಯ ನಡೆದಿದೆ. ಲೈಂಗಿಕ ಕಿರುಕುಳ ನೀಡಲು ಎರಡು ವರ್ಷದ ಹೆಣ್ಣು ಮಗುವನ್ನು ಕಿರಾತಕರು ಹೊತ್ತೊಯ್ದಿದ್ದಾರೆ. ನಿನ್ನೆ ಸಂಜೆ ನಾಲ್ಕು ಗಂಟೆ ಸುಮಾರಿಗೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುಕೃತ್ಯ ನಡೆದಿದೆ. ಫಿಶ್ ಕಟ್ಟಿಂಗ್ ಮಾಡುವ ಫ್ಯಾಕ್ಟರಿ ಬಳಿ ಬಿಹಾರ ಮೂಲದ ಕಾರ್ಮಿಕರು ನೆಲೆಸಿದ್ದಾರೆ. ಕಾರ್ಮಿಕರೆಲ್ಲರ ಮಕ್ಕಳನ್ನ ನೋಡಿಕೊಳ್ಳಲು ಒಂದು ಕ್ಯಾಂಪ್ ಇದೆ. ಆ ಶಿಬಿರದಿಂದ ಹೆಣ್ಣು ಮಗುವನ್ನು ಚಂದನ್ ಎಂಬ ಆರೋಪಿ ಹೊತ್ತೊಯ್ದಿದ್ದಾನೆ. ಲೈಂಗಿಕ ಕಿರುಕುಳ ನೀಡಿ ಮಗುವನ್ನು ಫಿಶ್ ಕಟ್ಟಿಂಗ್ ಟ್ಯಾಂಕ್ ಗೆ ಬಿಸಾಡಿ ಹೋಗಿದ್ದಾನೆ.

ನಾಲ್ಕು ಗಂಟೆಗಳ ಕಾಲ ಜೀವನ್ಮರಣದ ಮಧ್ಯೆ ಮಗು ಹೋರಾಡಿದೆ. ಫಿಶ್ ಕಟ್ಟಿಂಗ್ ಟ್ಯಾಂಕ್ ನಲ್ಲಿ ಮಗುವಿನ ಜೀವನ್ಮರಣ ಹೋರಾಟ ನಡೆಸುವಾಗ ಟ್ಯಾಂಕ್ ನಲ್ಲಿದ್ದ ಉಪ್ಪು ನೀರು ಸೇವಿಸಿ ಅಸ್ವಸ್ಥಗೊಂಡಿದ್ದಾಳೆ. ಶ್ವಾಸಕೋಶಕ್ಕೆ ನೀರು ತುಂಬಿಕೊಂಡು ಮಗು ಗಂಭೀರವಾಗಿ ಅಸ್ವಸ್ಥಗೊಂಡಿದ್ದಾಳೆ. ವೆನ್ಲಾಕ್ ಮಕ್ಕಳ ಆಸ್ಪತ್ರೆಗೆ ಮಗುವನ್ನು ದಾಖಲು ಮಾಡಲಾಗಿದೆ.

ಸೊಸೆಯ ಕಿರುಕುಳಕ್ಕೆ ಬೇಸತ್ತು ಕೆರೆಗೆ ಹಾರಿದ ಅತ್ತೆ

ಗದಗ: ಸೊಸೆಯ ಕಿರುಕುಳಕ್ಕೆ ಬೇಸತ್ತು ಅತ್ತೆಯೊಬ್ಬರು ಇಲ್ಲಿನ ಭಿಷ್ಮ ಕೆರೆಗೆ ಹಾರಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಶಾಂತಕ್ಕ ಹೀರಮಠ(70) ಅವರನ್ನ ರಕ್ಷಣೆ ಮಾಡಲಾಗಿದೆ. ಗದಗದ ಮಸಾರಿ ಕಾಲೋನಿಯ ನಿವಾಸಿ ಶಾಂತಕ್ಕ ಎಂಬುವವರಿಗೆ ಊಟ ಮತ್ತು ಮಲಗುವುದಕ್ಕೆ ಬೆಡ್‌ಶೀಟ್ ನೀಡುತ್ತಿರಲಿಲ್ಲ. ಚೇರ್ ಮೇಲೆ ಕೂರುವುದಕ್ಕೂ ಅವರ ಸೊಸೆ ಬಿಡುತ್ತಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗದಗ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Puneeth Rajkumar Eye Donate: ನಾರಾಯಣ ನೇತ್ರಾಲಯ ಮುಖ್ಯಸ್ಥ ಡಾ. ಭುಜಂಗಶೆಟ್ಟಿ ಸುದ್ದಿಗೋಷ್ಠಿ | Tv9 Kannada

(labourer physically abuses girl child in fish cutting factory at mangalore port)

Published On - 12:06 pm, Mon, 1 November 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ