Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ‘ದೌರ್ಜನ್ಯದ ಆರೋಪ ನನ್ನ ವಿರುದ್ಧ ನಡೆದ ದೊಡ್ಡ ಷಡ್ಯಂತ್ರ’; ವಕೀಲ ರಾಜೇಶ್ ಭಟ್ ಹೇಳಿಕೆ

ಮಂಗಳೂರಿನಲ್ಲಿ ವಿದ್ಯಾರ್ಥಿನಿಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಪಟ್ಟಂತೆ ವಕೀಲ ರಾಜೇಶ್ ಭಟ್ ಪ್ರತಿಕ್ರಿಯೆ ನೀಡಿದ್ದು, ಪ್ರತ್ಯಾರೋಪ ಮಾಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

ಮಂಗಳೂರು: ‘ದೌರ್ಜನ್ಯದ ಆರೋಪ ನನ್ನ ವಿರುದ್ಧ ನಡೆದ ದೊಡ್ಡ ಷಡ್ಯಂತ್ರ’; ವಕೀಲ ರಾಜೇಶ್ ಭಟ್ ಹೇಳಿಕೆ
ವಕೀಲ ರಾಜೇಶ್ ಭಟ್
Follow us
TV9 Web
| Updated By: shivaprasad.hs

Updated on: Oct 19, 2021 | 10:49 AM

ಮಂಗಳೂರು: ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ FIR ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಪತ್ತೆಯಾಗಿರುವ ಆರೋಪಿ, ವಿಡಿಯೋ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಈ ಪ್ರಕರಣವು ತಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎಂದು ಅವರು ಆರೋಪಿಸಿದ್ದಾರೆ. ‘‘ಈ ಪ್ರಕರಣ ನನ್ನ ವಿರುದ್ಧ ನಡೆದ ದೊಡ್ಡ ಷಡ್ಯಂತ್ರ. ಸೆ.25ರಂದು ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ. ಸೆ.27ಕ್ಕೆ ನಾನು ಇಬ್ಬರು ಯುವತಿಯರು ಹಣಕ್ಕಾಗಿ ಬೇಡಿಕೆ ಇಟ್ಟ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದೆ. ದೂರು ನೀಡಿದ್ದರೂ ಕೂಡ ಪೊಲೀಸರು ಕ್ರಮ ಕೈಗೊಳ್ಳಲಿಲ್ಲ’’ ಎಂದು ರಾಜೇಶ್ ಭಟ್ ವಿಡಿಯೋ ಮೂಲಕ ಹೇಳಿಕೆ ನೀಡಿದ್ದಾರೆ.

ರಾಜೇಶ್ ಭಟ್ ಪ್ರತಿಕ್ರಿಯೆ ಇಲ್ಲಿದೆ:

ತನಿಖೆಯ ನಂತರ ಸಮಗ್ರ ವರದಿ ಸಲ್ಲಿಸಲಾಗುವುದು; ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯೆ ಮಂಗಳೂರು: ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ FIR ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ಇಂಟರ್ನ್‌ಶಿಪ್ ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತನೆ ಹಾಗೂ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ದೂರು ನೀಡಿದ್ದಾರೆ. ಹೀಗಾಗಿ ವಕೀಲ ರಾಜೇಶ್ ಭಟ್ ವಿರುದ್ಧ ಒಟ್ಟು 2 ಪ್ರಕರಣ ದಾಖಲಿಸಲಾಗಿದ್ದು, ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು ಹಾಗೂ ಸಂತ್ರಸ್ತೆಗೆ ಬೆದರಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

ಸಂತ್ರಸ್ತೆಗೆ ಸಹಾಯ ಮಾಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆದರಿಸಿದ ಹಿನ್ನೆಲೆ ಕೇಸ್ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಸದ್ಯಕ್ಕೆ ಆರೋಪಿ ಇನ್ನೂ ಪತ್ತೆಯಾಗಿಲ್ಲ. ಪ್ರಕರಣದ ಸಮಗ್ರ ತನಿಖೆಯ ಬಳಿಕ ಕೋರ್ಟ್‌ಗೆ ವರದಿ ಸಲ್ಲಿಸುತ್ತೇವೆ ಎಂದು ಟಿವಿ9ಗೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

ಪ್ರಕರಣವೇನು? ಇಂಟರ್ನ್​ಶಿಪ್ ವಿದ್ಯಾರ್ಥಿನಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವಕೀಲ ರಾಜೇಶ್ ಭಟ್ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ಸಂತ್ರಸ್ತ ಯುವತಿ ನಿನ್ನೆ (ಅಕ್ಟೋಬರ್ 18) ದೂರು ನೀಡಿದ್ದಾರೆ. ಕಳೆದ ಕೆಲವು ಸಮಯದಿಂದ ರಾಜೇಶ್ ಭಟ್ ಹಾಗೂ ಸಂತ್ರಸ್ತ ಯುವತಿ ಮಾತನಾಡಿದ್ದು ಎನ್ನಲಾದ ಆಡಿಯೋವೊಂದು ವೈರಲ್ ಆಗಿತ್ತು.

ಇದನ್ನೂ ಓದಿ:

ಲೈಂಗಿಕ ದೌರ್ಜನ್ಯದ ಆರೋಪ; ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಎಫ್​ಐಆರ್ ದಾಖಲು

ನಾನೇ ಮಾತನಾಡಿದ್ರು ಉಲ್ಟಾ ಹಾಕ್ತೀರಾ! ಮಾಧ್ಯಮದವ್ರು ಕರೆಕ್ಟ್ ಇದ್ರೆ ನಮ್ ಬಾಳ್ ಹಿಂಗೇ ಯಾಕೆ ಆಗ್ತಿತ್ತು: ರಮೇಶ್ ಜಾರಕಿಹೊಳಿ ವ್ಯಥೆ

BBMP: ಘೋಷಣೆಗೆ ಸೀಮಿತವಾದ ಮಳೆ ಹಾನಿ ಪರಿಹಾರ; ಕೇವಲ ಪ್ರಮಾಣ ಪತ್ರ ಕೊಟ್ಟು ಸುಮ್ಮನಾದ ಬಿಬಿಎಂಪಿ

ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!