AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leopard Attack: ತೋಟಕ್ಕೆ ಹೋದವರ ಮೇಲೆ ಚಿರತೆ ದಾಳಿ; ನಾಯಿಯೊಂದಿಗೆ ಲಾಕ್ ಆಗಿದ್ದ ಚಿರತೆಯೇ ಇರಬಹುದೆಂಬ ಅನುಮಾನ

Leopard Attack: ಕಳೆದ ಕೆಲ ದಿನಗಳ ಹಿಂದೆ ಚಿರತೆ ಮನೆಗೆ ನುಗ್ಗಿತ್ತು. ಆದರೆ ಅದನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವಿಫಲರಾಗಿದ್ದರು.

Leopard Attack: ತೋಟಕ್ಕೆ ಹೋದವರ ಮೇಲೆ ಚಿರತೆ ದಾಳಿ; ನಾಯಿಯೊಂದಿಗೆ ಲಾಕ್ ಆಗಿದ್ದ ಚಿರತೆಯೇ ಇರಬಹುದೆಂಬ ಅನುಮಾನ
ಚಿರತೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ
sandhya thejappa
| Edited By: |

Updated on: Feb 12, 2021 | 4:11 PM

Share

ಮಂಗಳೂರು: ತೋಟಕ್ಕೆ ಹೋದವರ ಮೇಲೆ ಚಿರತೆ ದಾಳಿ ನಡೆದ ಘಟನೆ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ನಡೆದಿದೆ. ಗಾಯಾಳುಗಳು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಕಡಬ ತಾಲೂಕಿನ ಕೈಕಂಬ ಗ್ರಾಮದ ಮನೆಯೊಂದರಲ್ಲಿ ನಾಯಿಯೊಂದಿಗೆ ಶೌಚಾಲಯ ಪ್ರವೇಶಿಸಿದ್ದ ಚಿರತೆಯನ್ನು ಮನೆ ಮಾಲೀಕರು ಅಲ್ಲಿಯೇ ಚಿಲಕ ಹಾಕಿ ಕೂಡಿಟ್ಟಿದ್ದರು. ಅರಣ್ಯ ಇಲಾಖೆಯ ಬಲೆಗೆ ಸಿಗದ ಚಿರತೆ ತಪ್ಪಿಸಿಕೊಂಡು ಕಾಡು ಸೇರಿತ್ತು.

ಇದೇ ಚಿರತೆ ತೋಟದಲ್ಲಿ ಇದೀಗ ಇಬ್ಬರ ಮೇಲೆ ದಾಳಿ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಸದ್ಯ ಅರಣ್ಯ ಇಲಾಖೆಯು ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ನಡೆಸುತ್ತಿದೆ.

ಕಾರ್ಯಚರಣೆಯಲ್ಲಿ ತೊಡಗಿರುವ ಅರಣ್ಯ ಇಲಾಖೆ.

ಕಳೆದ ಕೆಲ ದಿನಗಳ ಹಿಂದೆ ಚಿರತೆ ಮನೆಗೆ ನುಗ್ಗಿತ್ತು. ಆದರೆ ಅದನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವಿಫಲರಾಗಿದ್ದರು. ಇದೀಗ ಮತ್ತೆ ಅದೇ ಚಿರತೆಯಿಂದ ನಸುಕಿನ ಜಾವ ಅಡಿಕೆ ತೋಟಕ್ಕೆ ನೀರು ಬಿಡಲು ಹೋಗಿದ್ದ ಇಬ್ಬರ ಮೇಲೆ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಶೇಖರ್ ಕಾಮತ್ ಮತ್ತು ಸೌಮ್ಯಾ ಕಾಮತ್ ಚಿರತೆ ದಾಳಿಗೊಳದವರು ಎಂದು ತಿಳಿದುಬಂದಿದೆ. ಚಿರತೆ ದಾಳಿಯಿಂದ ಇಬ್ಬರಿಗೂ ತರಚಿದ ಗಾಯಗಳಾಗಿದ್ದು, ಸದ್ಯ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಅರಣ್ಯ ಇಲಾಖೆ ಸಿಬ್ಬಂದಿ ಕೈಗೆ ಸಿಗದೆ ಪರಾರಿಯಾಯ್ತು ನಾಯಿ ಜೊತೆ ಬಂಧಿಯಾಗಿದ್ದ ಚಿರತೆ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​