AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ತ್ರಿಕೋನ ಪ್ರೇಮ ಪ್ರಕರಣದಲ್ಲಿ ಲಾಯ್ಡ್ ಡಿಸೋಜ ಸಾವು; ಘಟನೆಯ ವಿವರ ನೀಡಿದ ಪೊಲೀಸ್ ಆಯುಕ್ತ

ಪ್ರೇಯಸಿಯರಾದ ಅಶ್ವಿತಾ, ವೇಗಸ್ ಜೊತೆ ಮಾತುಕತೆ ನಡೆಸಲಾಗಿತ್ತು. ಈ ವೇಳೆ ಅಶ್ವಿತಾ ಪೆರಾವೋ ಸಮುದ್ರಕ್ಕೆ ಹಾರಿದ್ದಳು. ಅಶ್ವಿತಾಳನ್ನು ರಕ್ಷಿಸಲು ಲಾಯ್ಡ್ ಸಮುದ್ರಕ್ಕೆ ಹಾರಿದ್ದರು. ಇಬ್ಬರನ್ನೂ ರಕ್ಷಿಸಲು ಸ್ಥಳೀಯ ನಿವಾಸಿಗಳು ಮುಂದಾಗಿದ್ದರು ಎಂದು ಘಟನೆ ವಿವರಣೆ ನೀಡಿದ್ದಾರೆ.

Crime News: ತ್ರಿಕೋನ ಪ್ರೇಮ ಪ್ರಕರಣದಲ್ಲಿ ಲಾಯ್ಡ್ ಡಿಸೋಜ ಸಾವು; ಘಟನೆಯ ವಿವರ ನೀಡಿದ ಪೊಲೀಸ್ ಆಯುಕ್ತ
ಸಾಂಕೇತಿಕ ಚಿತ್ರ
TV9 Web
| Updated By: ganapathi bhat|

Updated on: Jan 29, 2022 | 5:08 PM

Share

ಮಂಗಳೂರು: ಇಲ್ಲಿನ ಸೋಮೇಶ್ವರ ಬೀಚ್‌ನಲ್ಲಿ ಲಾಯ್ಡ್‌ ಡಿಸೋಜ ಸಾವು ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ತ್ರಿಕೋನ ಪ್ರೇಮ ಪ್ರಕರಣದಲ್ಲಿ ಡಿಸೋಜ ಮೃತಪಟ್ಟಿದ್ದಾರೆ. ಡಿಸೋಜರನ್ನು ಇಬ್ಬರು ಯುವತಿಯರು ಪ್ರೀತಿಸುತ್ತಿದ್ದರು. ಈ ಬಗ್ಗೆ ನಿನ್ನೆ ಸಂಜೆ ಬೀಚ್ ಬಳಿ ಮಾತುಕತೆ ನಡೆದಿತ್ತು. ಪ್ರೇಯಸಿಯರಾದ ಅಶ್ವಿತಾ, ವೇಗಸ್ ಜೊತೆ ಮಾತುಕತೆ ನಡೆಸಲಾಗಿತ್ತು. ಈ ವೇಳೆ ಅಶ್ವಿತಾ ಪೆರಾವೋ ಸಮುದ್ರಕ್ಕೆ ಹಾರಿದ್ದಳು. ಅಶ್ವಿತಾಳನ್ನು ರಕ್ಷಿಸಲು ಲಾಯ್ಡ್ ಸಮುದ್ರಕ್ಕೆ ಹಾರಿದ್ದರು. ಇಬ್ಬರನ್ನೂ ರಕ್ಷಿಸಲು ಸ್ಥಳೀಯ ನಿವಾಸಿಗಳು ಮುಂದಾಗಿದ್ದರು ಎಂದು ಘಟನೆ ವಿವರಣೆ ನೀಡಿದ್ದಾರೆ.

ಅಶ್ವಿತಾ ಪೆರಾವೋಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ದಡಕ್ಕೆ ತರಲು ಯತ್ನಿಸಿದ್ರೂ ಯುವಕ ಲಾಯ್ಡ್‌ ಮೃತಪಟ್ಟಿದ್ದರು ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ. ಮಂಗಳೂರಿನ ಉಳಿಯ ಕುದ್ರುಗೆ ರಸ್ತೆ ವ್ಯವಸ್ಥೆ ಇಲ್ಲದ ಹಿನ್ನೆಲೆ ಒಂದು ಕಿಲೋಮೀಟರ್ ದೂರ ಮೃತದೇಹ ಹೊತ್ತು ಸಾಗಾಟ‌ ಮಾಡಲಾಗಿದೆ. ರಸ್ತೆ ಸಂಪರ್ಕವಿಲ್ಲದೆ ಲಾಯ್ಡ್‌ ಡಿಸೋಜ ಗೆಳೆಯರು ಪರದಾಟ ಪಟ್ಟಿದ್ದಾರೆ.

ಬೆಂಗಳೂರು: ಅಣ್ಣ ತಮ್ಮಂದಿರ ಜಗಳ ಬಿಡಿಸಲು ಬಂದಿದ್ದ ಸಂಬಂಧಿ ಕೊಲೆ

ಅಣ್ಣ ತಮ್ಮಂದಿರ ಜಗಳ ಬಿಡಿಸಲು ಬಂದಿದ್ದ ಸಂಬಂಧಿ ಕೊಲೆಯಾದ ದುರ್ಘಟನೆ ಬೆಂಗಳೂರಿನ ಜೆ.ಬಿ. ನಗರದ ಹನುಮನಗರದಲ್ಲಿ ನಡೆದಿದೆ. ಬಾಟಲಿಯಿಂದ ಹೊಡೆದು ವೆಂಕಟೇಶ್ ​(21) ಕೊಲೆ ಮಾಡಲಾಗಿದೆ. ಕಾಟ್ ಮೇಲೆ ಮಲಗುವ ವಿಚಾರಕ್ಕೆ ಸಹೋದರರು ಜಗಳ ಮಾಡಿದ್ದರು. ಜಗಳ ಆಡುತ್ತಿದ್ದ ವಿನಯ್, ಮನು ಗಲಾಟೆ ಬಿಡಿಸಲು ವೆಂಕಟೇಶ್ ಬಂದಿದ್ದರು. ಪಕ್ಕದ ಮನೆಯಲ್ಲಿ ವಾಸವಾಗಿದ್ದ ಸಂಬಂಧಿ ಮಧ್ಯಪ್ರವೇಶ ಮಾಡಿದ್ದರು.

ವೆಂಕಟೇಶ್ ಮೇಲೆ ಕುಡಿದ ಅಮಲಿನಲ್ಲಿದ್ದ ವಿನಯ್​​ ಹಲ್ಲೆ ನಡೆಸಿದ್ದಾರೆ. ಈ ವೇಳೆ ತೀವ್ರ ರಕ್ತಸ್ರಾವವಾಗಿ ವೆಂಕಟೇಶ್ ಮೃತಪಟ್ಟಿದ್ದಾರೆ. ಘಟನೆ ವೇಳೆ ವಿನಯ್ ಜೊತೆಗಿದ್ದ ಮೋಹನ್ ವಶಕ್ಕೆ ಪಡೆಯಲಾಗಿದೆ. ಜೆ.ಬಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಮನಗರ: ನಿರ್ಮಾಣ ಹಂತದ ಕಟ್ಟಡ ಕುಸಿದು ಬಾಲ ಕಾರ್ಮಿಕ ಸಾವು

ನಿರ್ಮಾಣ ಹಂತದ ಕಟ್ಟಡ ಕುಸಿದು ಬಾಲ ಕಾರ್ಮಿಕ ಸಾವನ್ನಪ್ಪಿದ ದುರ್ಘಟನೆ ಕೃಷ್ಣಾಪುರದಲ್ಲಿ ನಡೆದಿದೆ. ಬಳ್ಳಾರಿ‌ಯ ಭೀಮ ನಾಯಕ್ (13) ಮೃತ ದುರ್ದೈವಿ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದಲ್ಲಿ ಘಟನೆ ನಡೆದಿದೆ. ಸಿದ್ದರಾಜು ಎಂಬುವವರ ನಿರ್ಮಾಣ ಹಂತದ ಕಟ್ಟಡ ಕುಸಿದು ಘಟನೆ ಸಂಭವಿಸಿದೆ. ಎರಡನೇ ಅಂತಸ್ತಿನ ಮೌಲ್ಡ್ ಹಾಕುವಾಗ ಕಟ್ಟಡ ಕುಸಿದಿದೆ. ಕಟ್ಟಡದ ಮೇಲಿಂದ ಬಿದ್ದು ಭೀಮ ನಾಯಕ್ ಸಾವನ್ನಪ್ಪಿದ್ದಾರೆ. ತನ್ನ ಸಂಬಂಧಿಕರ ಜೊತೆ ಕೆಲಸಕ್ಕೆ ಬಂದಿದ್ದ ಬಾಲಕ ಮೃತಪಟ್ಟಿದ್ದಾನೆ. ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಿವಮೊಗ್ಗ: ಕೌಟುಂಬಿಕ ಕಲಹ ಹಿನ್ನೆಲೆ; ಪುರಸಭೆ ನೌಕರ ಆತ್ಮಹತ್ಯೆ

ಕೌಟುಂಬಿಕ ಕಲಹ ಹಿನ್ನೆಲೆ ಶಿವಮೊಗ್ಗ ನಗರದ ಮನೆಯಲ್ಲಿ ಶಿಕಾರಿಪುರ ಪುರಸಭೆ ನೌಕರ ಸಂತೋಷ್ (40) ನೇಣಿಗೆ ಶರಣಾಗಿದ್ದಾರೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಮಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ವಿಡಿಯೋ ಗೇಮ್​ ಆಡುವುದರಲ್ಲಿ ಬ್ಯುಸಿ; ವೈದ್ಯರ ನಿರ್ಲಕ್ಷ್ಯ ಆರೋಪ

ಇದನ್ನೂ ಓದಿ: ಮಂಗಳೂರು: ಫಿಶ್ ಮಿಲ್ ಚಿಮಣಿಯಲ್ಲಿ ಹಾರುತ್ತಿದೆ ಸಣ್ಣ ಬೆಂಕಿ ಉಂಡೆಗಳು; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ