AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections 2024: ದಕ್ಷಿಣ ಕನ್ನಡ ಕಾಂಗ್ರೆಸ್​​ನಲ್ಲಿ ಟಿಕೆಟ್​ಗೆ ಪೈಪೋಟಿ, ಮುನ್ನೆಲೆಗೆ ಬಂತು ಯುಟಿ ಖಾದರ್ ಹೆಸರು!

Dakshina Kannada Lok Sabha Constituency: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಯುಟಿ ಖಾದರ್ ಕಣಕ್ಕಿಳಿಲಿದ್ದಾರೆಯೇ? ಅಂಥದ್ದೊಂದು ಚರ್ಚೆ ಈಗ ಆರಂಭವಾಗಿದೆ. ಈ ವಿಚಾರವಾಗಿ ಕೆಪಿಸಿಸಿಯಲ್ಲಿ ಚರ್ಚೆಯೂ ನಡೆದಿದೆ ಎನ್ನಲಾಗಿದೆ. ಆದರೆ, ಯುಟಿ ಖಾದರ್ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಒಪ್ಪುತ್ತಾರೆಯೇ ಎಂಬುದೇ ಸದ್ಯದ ಕುತೂಹಲವಾಗಿದೆ.

Lok Sabha Elections 2024: ದಕ್ಷಿಣ ಕನ್ನಡ ಕಾಂಗ್ರೆಸ್​​ನಲ್ಲಿ ಟಿಕೆಟ್​ಗೆ ಪೈಪೋಟಿ, ಮುನ್ನೆಲೆಗೆ ಬಂತು ಯುಟಿ ಖಾದರ್ ಹೆಸರು!
ಯುಟಿ ಖಾದರ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Feb 09, 2024 | 8:59 AM

Share

ಮಂಗಳೂರು, ಫೆಬ್ರವರಿ 9: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ (Lok Sabha Elections 2024) ಕಾಂಗ್ರೆಸ್ ಪಕ್ಷದಲ್ಲಿ ಪೈಪೋಟಿ ಮುಂದುವರಿದಿದ್ದು, ಅಚ್ಚರಿಯ ರೀತಿಯಲ್ಲಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಹೆಸರು ಪ್ರಸ್ತಾಪವಾಗಿದೆ. ಒಂದೆಡೆ ಕಾಂಗ್ರೆಸ್ (Congress) ಮುಖಂಡರು ಜಾತಿ ಲೆಕ್ಕಾಚಾರ ಹಾಕುತ್ತಿದ್ದರೆ, ಮತ್ತೊಂದೆಡೆ ಖಾದರ್ ಹೆಸರು ಪ್ರಸ್ತಾಪವಾಗಿದೆ. ಹಿಂದುತ್ವದ ಭದ್ರಕೋಟೆಯಲ್ಲಿ ಯುಟಿಖಾದರ್​​ಗೆ ಟಿಕೆಟ್ ನೀಡಲು ಕೆಪಿಸಿಸಿಯಲ್ಲಿ ಚರ್ಚೆ ನಡೆದಿದೆ.

ಯುಟಿ ಖಾದರ್ ಅವರಿಗೆ ಮುಸ್ಲಿಂ ಮತಗಳಗಳನ್ನು ಕ್ಲೀನ್ ಸ್ವೀಪ್ ಮಾಡುವ ಸಾಮರ್ಥ್ಯ ಇದೆ. ಅದೇ ರೀತಿ ಹಿಂದು ಮತಗಳನ್ನೂ ಹೆಚ್ಚಾಗಿ ಸೆಳೆಯುವ ಶಕ್ತಿ ಇದೆ. ಇತ್ತೀಚಿಗೆ ಭೂತ ಕೋಲದಲ್ಲಿ ಭಾಗವಹಿಸಿ ಖಾದರ್ ಅವರು ಹಿಂದುಗಳ ಮನ ಗೆದ್ದಿದ್ದು ಕೂಡ ಇಲ್ಲಿ ಗಮನಾರ್ಹ. ಅದೇ ರೀತಿ ಖಾದರ್ ಹಲವು ಬಾರಿ ನಡೆದುಕೊಂಡಿದ್ದಾರೆ. ಹಿಂದೂ ದೇಗುಲಗಳಿಗೆ ಭೇಟಿ ನೀಡುವುದು, ಸಮಾರಂಭಗಳಲ್ಲಿ ಭಾಗವಹಿಸುವುದನ್ನು ಮಾಡಿದ್ದಾರೆ. ಜತೆಗೆ, ಅನೇಕ ಹಿಂದೂ ಮುಖಂಡರ ಜತೆಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇವೆಲ್ಲ ಅಂಶಗಳನ್ನೂ ಪರಿಗಣಿಸಲಾಗಿದೆ.

ಜಾತ್ಯತೀತ ನಡೆಯಿಂದ ಖಾದರ್ ಅವರಿಗೆ ಎಲ್ಲ ರೀತಿಯ ಓಟ್ ಬ್ಯಾಂಕ್ ಸೆಳೆಯುವ ಶಕ್ತಿ ಇದೆ ಎಂಬುದು ಅವರ ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ಜತೆಗೆ, ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಅಭಿಪ್ರಾಯವೂ ಕ್ಷೇತ್ರದ ಜನತೆಯಲ್ಲಿದೆ. ಹೀಗಾಗಿ ಅವರ ಮೂಲಕ ಕರಾವಳಿ ಪ್ರದೇಶದಲ್ಲಿ ಮತ್ತೆ ಹಿಡಿತ ಸಾಧಿಸುವುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ ಎನ್ನಲಾಗಿದೆ.

ಒಪ್ಪುತ್ತಾರೆಯೇ ಯುಟಿ ಖಾದರ್?

ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ಪರ್ಧಿಸಲು ಒಂದು ವೇಳೆ ಕಾಂಗ್ರೆಸ್ ಪಕ್ಷವು ಯುಟಿ ಖಾದರ್ ಅವರ ಹೆಸರನ್ನೇ ಅಂತಿಮಗೊಳಿಸಿದರೆ ಅವರು ಅದನ್ನು ಒಪ್ಪುತ್ತಾರೆಯೇ ಎಂಬುದೂ ಪ್ರಶ್ನೆಯಾಗಿದೆ. ಯಾಕೆಂದರೆ, ಯುಟಿ ಖಾದರ್ ಅವರು ಈ ಹಿಂದೆ ರಾಜ್ಯ ಸರ್ಕಾರದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದವರು. ರಾಜ್ಯ ರಾಜಕಾರಣದಲ್ಲಿ ಅವರ ವರ್ಚಸ್ಸು ಉತ್ತಮವಾಗಿದೆ. ಇದೀಗ ಸ್ಪೀಕರ್ ಆಗಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತಮ್ಮ ರಾಜಕೀಯ ಖದರ್​ ಅನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ. ಹೀಗಾಗಿ ರಾಷ್ಟ್ರ ರಾಜಕೀಯಕ್ಕೆ ಧುಮುಕಲು ಅವರು ಮುಂದಾಗಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ಘಟಾನುಘಟಿ ನಾಯಕರನ್ನೇ ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಾಯಕತ್ವ ಪಟ್ಟು

ಮತ್ತೊಂದೆಡೆ, ದಕ್ಷಿಣ ಕನ್ನಡ ಬಿಜೆಪಿಯಲ್ಲಿಯೂ ಈ ಬಾರಿ ತುಸು ಗೊಂದಲಗಳಿವೆ. ಇದರ ಲಾಭ ಪಡೆಯಲು ಕಾಂಗ್ರೆಸ್ ಯುಟಿ ಖಾದರ್ ಅವರ ಹೆಸರನ್ನು ಮುನ್ನೆಲೆಗೆ ಬಿಟ್ಟಿತೇ ಎಂಬ ಕುತೂಹಲವೂ ಮೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು