AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ: ಮುಲ್ಕಿ ಬಳಿ ನಿಯಂತ್ರಣ ಕಳೆದುಕೊಂಡು ಫುಟ್​ಪಾತ್​ಗೆ ನುಗ್ಗಿದ ಲಾರಿ; ಆಟೋ, ಬೈಕ್​ಗೆ ಡಿಕ್ಕಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಿಲ್ಲೆಯ ಮುಲ್ಕಿ ತಾಲೂಕಿನಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಬೈಕ್ ಹಾಗೂ ಆಟೋಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋ ಪಲ್ಟಿಯಾಗಿದ್ದು, ಬೈಕ್ ಸವಾರನಿಗೆ ಹಾಗೂ ಟ್ರಾಫಿಕ್​​ ಡ್ಯೂಟಿ ಮೇಲಿದ್ದ ಮಹಿಳಾ ಪೊಲೀಸ್ ಪೇದೆಗೆ ಗಾಯಗಳಾಗಿವೆ.

ದಕ್ಷಿಣ ಕನ್ನಡ: ಮುಲ್ಕಿ ಬಳಿ ನಿಯಂತ್ರಣ ಕಳೆದುಕೊಂಡು ಫುಟ್​ಪಾತ್​ಗೆ ನುಗ್ಗಿದ ಲಾರಿ; ಆಟೋ, ಬೈಕ್​ಗೆ ಡಿಕ್ಕಿ
ಮುಲ್ಕಿಯಲ್ಲಿ ನಡೆದ ಸರಣಿ ಅಪಘಾತ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Dec 07, 2023 | 2:48 PM

Share

ಮಂಗಳೂರು, ಡಿ.7: ನಿಯಂತ್ರಣ ಕಳೆದುಕೊಂಡ ಲಾರಿಯೊಂದು ರಸ್ತೆ ವಿಭಜಕದ ಮೇಲೆ ಹತ್ತಿ ಆಟೋ, ಬೈಕ್​ಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮುಲ್ಕಿ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಟ್ರಾಫಿಕ್​​ ಡ್ಯೂಟಿ ಮೇಲಿದ್ದ ಮಹಿಳಾ ಪೊಲೀಸ್​​ ಗೀತಾ ಸತೀಶ್ ಎಂಬವರ ಕೈಗೆ, ಬೈಕ್ ಸವಾರ, ಆಟೋ ಚಾಲಕ, ಆಟೋದಲ್ಲಿದ್ದ ಜನರಿಗೆ ಗಾಯಗಳಾಗಿವೆ.

ಲಾರಿ ಹೊಡೆತಕ್ಕೆ ಲಾಡ್ಜ್​​​ ಒಂದರಲ್ಲಿ ವಾಚ್​ಮೇನ್​​ ಆಗಿ ಕೆಲಸ ನಿರ್ವಹಿಸುತ್ತಿದ್ದ ಬೈಕ್ ಸವಾರ ಸಂಗಪ್ಪ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತನ್ನ ಮಗಳನ್ನು ಬಸ್​​ ನಿಲ್ದಾಣಕ್ಕೆ ಬಿಡಲು ಹೋಗಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಸಂಗಪ್ಪ ಅವರ ಮಗಳು ಸವಿತಾಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮುಂದುವರಿದ ಧರ್ಮ ದಂಗಲ್: ಕುಡುಪು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಸ್ಥಳ ನಿರಾಕರಣೆ

ನಿಯಂತ್ರಣ ಕಳೆದುಕೊಂಡಿದ್ದ ಲಾರಿ ಡಿವೈಡರ್​ ಮೇಲೆ ಹತ್ತಿ ಪಕ್ಕದ ರಸ್ತೆಗೆ ಬಂದು ಫುಟ್​ಪಾತ್​ ಮೇಲೆ ಕುಳಿತಿದ್ದ ಕಾರ್ಮಿಕರತ್ತ ನುಗ್ಗಿ ಆಟೋ ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಮುಲ್ಕಿ ಪೊಲೀಸರು ಲಾರಿ ಚಾಲಕ ಮತ್ತು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಖಾಸಗಿ ಬಸ್ ಪಲ್ಟಿ, ಇಬ್ಬರು ಸಾವು, ಹಲವರು ಚಿಂತಾಜನಕ

ಚಿಕ್ಕಬಳ್ಳಾಪುರ: ಮರಕ್ಕೆ ಡಿಕ್ಕಿ ಹೊಡೆದು ಖಾಸಗಿ ಬಸ್ ಉರುಳಿ ಬಿದ್ದ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಕಾಲಕ್ಕೆ ಌಂಬುಲೆನ್ಸ್​​ ಬಾರದ ಹಿನ್ನೆಲೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಗಾಯಾಳುಗಳು ಕೆಲ ಗಂಟೆಗಳ ಕಾಲ ರಸ್ತೆಯಲ್ಲೇ ನರಳಾಡಿದರು. ಬೈಕ್, ಆಟೋ, ಕಾರುಗಳ ಮೂಲಕ ಗಾಯಾಳುಗಳನ್ನು ಬಾಗೇಪಲ್ಲಿ ಆಸ್ಪತ್ರಗೆ ಕೊಂಡೊಯ್ಯಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ