ದಕ್ಷಿಣ ಕನ್ನಡ: ಮುಲ್ಕಿ ಬಳಿ ನಿಯಂತ್ರಣ ಕಳೆದುಕೊಂಡು ಫುಟ್​ಪಾತ್​ಗೆ ನುಗ್ಗಿದ ಲಾರಿ; ಆಟೋ, ಬೈಕ್​ಗೆ ಡಿಕ್ಕಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಿಲ್ಲೆಯ ಮುಲ್ಕಿ ತಾಲೂಕಿನಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಬೈಕ್ ಹಾಗೂ ಆಟೋಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋ ಪಲ್ಟಿಯಾಗಿದ್ದು, ಬೈಕ್ ಸವಾರನಿಗೆ ಹಾಗೂ ಟ್ರಾಫಿಕ್​​ ಡ್ಯೂಟಿ ಮೇಲಿದ್ದ ಮಹಿಳಾ ಪೊಲೀಸ್ ಪೇದೆಗೆ ಗಾಯಗಳಾಗಿವೆ.

ದಕ್ಷಿಣ ಕನ್ನಡ: ಮುಲ್ಕಿ ಬಳಿ ನಿಯಂತ್ರಣ ಕಳೆದುಕೊಂಡು ಫುಟ್​ಪಾತ್​ಗೆ ನುಗ್ಗಿದ ಲಾರಿ; ಆಟೋ, ಬೈಕ್​ಗೆ ಡಿಕ್ಕಿ
ಮುಲ್ಕಿಯಲ್ಲಿ ನಡೆದ ಸರಣಿ ಅಪಘಾತ
Edited By: Rakesh Nayak Manchi

Updated on: Dec 07, 2023 | 2:48 PM

ಮಂಗಳೂರು, ಡಿ.7: ನಿಯಂತ್ರಣ ಕಳೆದುಕೊಂಡ ಲಾರಿಯೊಂದು ರಸ್ತೆ ವಿಭಜಕದ ಮೇಲೆ ಹತ್ತಿ ಆಟೋ, ಬೈಕ್​ಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮುಲ್ಕಿ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಟ್ರಾಫಿಕ್​​ ಡ್ಯೂಟಿ ಮೇಲಿದ್ದ ಮಹಿಳಾ ಪೊಲೀಸ್​​ ಗೀತಾ ಸತೀಶ್ ಎಂಬವರ ಕೈಗೆ, ಬೈಕ್ ಸವಾರ, ಆಟೋ ಚಾಲಕ, ಆಟೋದಲ್ಲಿದ್ದ ಜನರಿಗೆ ಗಾಯಗಳಾಗಿವೆ.

ಲಾರಿ ಹೊಡೆತಕ್ಕೆ ಲಾಡ್ಜ್​​​ ಒಂದರಲ್ಲಿ ವಾಚ್​ಮೇನ್​​ ಆಗಿ ಕೆಲಸ ನಿರ್ವಹಿಸುತ್ತಿದ್ದ ಬೈಕ್ ಸವಾರ ಸಂಗಪ್ಪ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತನ್ನ ಮಗಳನ್ನು ಬಸ್​​ ನಿಲ್ದಾಣಕ್ಕೆ ಬಿಡಲು ಹೋಗಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಸಂಗಪ್ಪ ಅವರ ಮಗಳು ಸವಿತಾಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮುಂದುವರಿದ ಧರ್ಮ ದಂಗಲ್: ಕುಡುಪು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಸ್ಥಳ ನಿರಾಕರಣೆ

ನಿಯಂತ್ರಣ ಕಳೆದುಕೊಂಡಿದ್ದ ಲಾರಿ ಡಿವೈಡರ್​ ಮೇಲೆ ಹತ್ತಿ ಪಕ್ಕದ ರಸ್ತೆಗೆ ಬಂದು ಫುಟ್​ಪಾತ್​ ಮೇಲೆ ಕುಳಿತಿದ್ದ ಕಾರ್ಮಿಕರತ್ತ ನುಗ್ಗಿ ಆಟೋ ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಮುಲ್ಕಿ ಪೊಲೀಸರು ಲಾರಿ ಚಾಲಕ ಮತ್ತು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಖಾಸಗಿ ಬಸ್ ಪಲ್ಟಿ, ಇಬ್ಬರು ಸಾವು, ಹಲವರು ಚಿಂತಾಜನಕ

ಚಿಕ್ಕಬಳ್ಳಾಪುರ: ಮರಕ್ಕೆ ಡಿಕ್ಕಿ ಹೊಡೆದು ಖಾಸಗಿ ಬಸ್ ಉರುಳಿ ಬಿದ್ದ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಕಾಲಕ್ಕೆ ಌಂಬುಲೆನ್ಸ್​​ ಬಾರದ ಹಿನ್ನೆಲೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಗಾಯಾಳುಗಳು ಕೆಲ ಗಂಟೆಗಳ ಕಾಲ ರಸ್ತೆಯಲ್ಲೇ ನರಳಾಡಿದರು. ಬೈಕ್, ಆಟೋ, ಕಾರುಗಳ ಮೂಲಕ ಗಾಯಾಳುಗಳನ್ನು ಬಾಗೇಪಲ್ಲಿ ಆಸ್ಪತ್ರಗೆ ಕೊಂಡೊಯ್ಯಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us