AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವ್ ಜಿಹಾದ್ ಆರೋಪ; ಹಿಂದೂ ಸಂಘಟನೆಯಿಂದ ಯುವತಿ ಮನವೊಲಿಕೆಗೆ ಯತ್ನ, ಖಡಕ್ ನಿರ್ಧಾರ ತಿಳಿಸಿ ಪ್ರಕರಣಕ್ಕೆ ಅಂತ್ಯ ಹಾಡಿದ ಯುವತಿ

ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ಜೋಡಿಗಳು ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಮನೆಯವರನೆಲ್ಲ ಒಪ್ಪಿಸಿ ಶಾಸ್ತ್ರಬದ್ಧವಾಗಿ ಮದುವೆಯಾಗುತ್ತಿದ್ದಾರೆ. ಕೇರಳದ ಕಣ್ಣೂರಿನಲ್ಲೇ ನವೆಂಬರ್ 29 ರಂದು ಇಬ್ಬರ ವಿವಾಹಕ್ಕೆ ಡೇಟ್ ಫಿಕ್ಸ್ ಆಗಿದೆ. ಆದ್ರೆ ಹಿಂದೂ ಹುಡುಗಿ-ಮುಸ್ಲಿಂ ಹುಡುಗನ ಮದುವೆ ಕಾರ್ಡ್ ಸದ್ಯ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ಲವ್ ಜಿಹಾದ್ ಆರೋಪ; ಹಿಂದೂ ಸಂಘಟನೆಯಿಂದ ಯುವತಿ ಮನವೊಲಿಕೆಗೆ ಯತ್ನ, ಖಡಕ್ ನಿರ್ಧಾರ ತಿಳಿಸಿ ಪ್ರಕರಣಕ್ಕೆ ಅಂತ್ಯ ಹಾಡಿದ ಯುವತಿ
ಬಜರಂಗದಳದ ಪ್ರಮುಖರ ಜೊತೆ ಹಿಂದೂ ಯುವತಿ ಮನೆಗೆ ತೆರಳಿ ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ ಮನವೊಲಿಕೆ ಯತ್ನ
TV9 Web
| Edited By: ಆಯೇಷಾ ಬಾನು|

Updated on: Nov 21, 2021 | 11:08 AM

Share

ಮಂಗಳೂರು: ಅನ್ಯಧರ್ಮದ ಮೆಡಿಕಲ್ ಜೋಡಿಯ ವಿವಾಹಕ್ಕೆ ಲವ್ ಜಿಹಾದ್ ಆರೋಪ ಕೇಳಿ ಬಂದಿದ್ದು ಜೋಡಿಯ ಮದುವೆ ಕಾರ್ಡ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮದುವೆ ತಡೆಯಲು ಹಿಂದೂ ಸಂಘಟನೆಗಳು ಮತ್ತು ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ ಯತ್ನಿಸಿದ್ದು ಯುವತಿ ತನ್ನ ನಿರ್ಧಾರ ಬದಲಿಸಲ್ಲ ಎಂದು ಮುಖ ಭಂಗ ಮಾಡಿ ಕಲಿಸಿರುವ ಘಟನೆ ನಡೆದಿದೆ.

ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ಜೋಡಿಗಳು ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಮನೆಯವರನೆಲ್ಲ ಒಪ್ಪಿಸಿ ಶಾಸ್ತ್ರಬದ್ಧವಾಗಿ ಮದುವೆಯಾಗುತ್ತಿದ್ದಾರೆ. ಕೇರಳದ ಕಣ್ಣೂರಿನಲ್ಲೇ ನವೆಂಬರ್ 29 ರಂದು ಇಬ್ಬರ ವಿವಾಹಕ್ಕೆ ಡೇಟ್ ಫಿಕ್ಸ್ ಆಗಿದೆ. ಆದ್ರೆ ಹಿಂದೂ ಹುಡುಗಿ-ಮುಸ್ಲಿಂ ಹುಡುಗನ ಮದುವೆ ಕಾರ್ಡ್ ಸದ್ಯ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಈ ವಿವಾಹಕ್ಕೆ ಲವ್ ಜಿಹಾದ್ ಎಂಬ ಹಣೆ ಪಟ್ಟಿ ಅಂಟಿಸಿ ಹಿಂದೂ ಸಂಘಟನೆ ಮತ್ತು ಹಿಂದೂ ಟಾಸ್ಕ್ ಫೋರ್ಸ್ ಸಮಿತಿಯ ಮುಖ್ಯಸ್ಥ ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ ಆಕ್ರೋಶ ಹೊರ ಹಾಕಿದ್ದಾರೆ.

ಮದುವೆ ತಡೆಯಲು ಸ್ವಾಮೀಜಿ ಮಧ್ಯಸ್ಥಿಕೆ ವಹಿಸಿದ್ದು ಬಜರಂಗದಳದ ಪ್ರಮುಖರ ಜೊತೆ ಹಿಂದೂ ಯುವತಿ ಮನೆಗೆ ತೆರಳಿ ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ ಮನವೊಲಿಕೆ ಯತ್ನಿಸಿದ್ದಾರೆ. ಸದ್ಯ ಮದುವೆ ಮುಂದೂಡಿ ಈ ಬಗ್ಗೆ ಯೋಚಿಸುವಂತೆ ಸಲಹೆ ನೀಡಿದ್ದಾರೆ. ಆದ್ರೆ ಯುವತಿ ಸ್ವಾಮೀಜಿಯ ಮಾತುಗಳನ್ನು ತಳ್ಳಿ ಹಾಕಿದ್ದು ಇದು ಲವ್ ಜಿಹಾದ್ ಅಲ್ಲ. ನಾವಿಬ್ಬರೂ ಪ್ರೀತಿಸಿ ಮದುವೆಯಾಗುತ್ತಿದ್ದೇವೆ. ಮುಸ್ಲಿಂ ಯುವಕನ ಮದುವೆಯಾದರೂ ಹಿಂದೂ ಧರ್ಮದಲ್ಲೇ ಮುಂದುವರೆಯುವೆ ಎಂದು ತಿಳಿಸಿದ್ದಾರೆ. ಸದ್ಯ ಅನ್ಯ ಧರ್ಮೀಯ ವಿವಾಹ ಪ್ರಕರಣ ಕರಾವಳಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಕೇರಳದ ಬಿಷಪ್​​ನ ನಾರ್ಕೋಟಿಕ್ಸ್ ಜಿಹಾದ್ ಹೇಳಿಕೆ ವಿವಾದ: ಲವ್ ಜಿಹಾದ್ ಬಗ್ಗೆ ಕಾನೂನು ತರಲು ಕೇಂದ್ರಕ್ಕೆ ಬಿಜೆಪಿ ಒತ್ತಾಯ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್