AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ ಶಂಕೆ

ಪಿಜಿಯಲ್ಲಿದ್ದ ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಾರದ ಹಿಂದೆ ನಾಪತ್ತೆಯಾಗಿದ್ದು, ಇದವರೆಗೆ ಪತ್ತೆಯಾಗಿಲ್ಲ. ಈ ನಡುವೆ, ಚೈತ್ರಾ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಚೈತ್ರಾ ತಂಗಿದ್ದ ಪಿಜಿಗೆ ಬರುತ್ತಿದ್ದ ಬಂಟ್ವಾಳ ಮೂಲದ ಪುತ್ತೂರು ನಿವಾಸಿಯಾಗಿರುವ ಅನ್ಯಕೋಮಿನ ಯುವಕ ಗಾಂಜಾ ರುಚಿ ತೋರಿಸಿ ಕರೆದೊಯ್ದ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ಎರಡು ದಿನಗಳಲ್ಲಿ ಪತ್ತೆ ಹಚ್ಚದಿದ್ದರೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಬಜರಂಗ ದಳ ನೀಡಿದೆ.

ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ ಶಂಕೆ
ಮಂಗಳೂರಿನಲ್ಲಿ ಯುವತಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ ಶಂಕೆ
ಅಶೋಕ್​ ಪೂಜಾರಿ, ಪುತ್ತೂರು
| Edited By: Rakesh Nayak Manchi|

Updated on: Feb 24, 2024 | 5:22 PM

Share

ಮಂಗಳೂರು, ಫೆ.24: ಇಲ್ಲಿನ ಕೋಟೆಕಾರು ಬಳಿಯ ಪಿಜಿಯಲ್ಲಿದ್ದ ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಾರದ ಹಿಂದೆ ನಾಪತ್ತೆಯಾಗಿದ್ದು, ಇದವರೆಗೆ ಪತ್ತೆಯಾಗಿಲ್ಲ. ಈ ನಡುವೆ, ಚೈತ್ರಾ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ (Love Jihad) ಆರೋಪ ಕೇಳಿಬಂದಿದೆ. ಚೈತ್ರಾ ತಂಗಿದ್ದ ಪಿಜಿಗೆ ಬರುತ್ತಿದ್ದ ಬಂಟ್ವಾಳ ಮೂಲದ ಪುತ್ತೂರು ನಿವಾಸಿಯಾಗಿರುವ ಅನ್ಯಕೋಮಿನ ಯುವಕ ಗಾಂಜಾ ರುಚಿ ತೋರಿಸಿ ಯುವತಿಯನ್ನು ಕರೆದೊಯ್ದ ಅನುಮಾನ ವ್ಯಕ್ತವಾಗಿದೆ.

ಚೈತ್ರಾ ನಾಪತ್ತೆ ಹಿಂದೆ ಹಿಂದೆ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಮೂಲತಃ ಬಂಟ್ವಾಳದ ನೇರಳಕಟ್ಟೆಯ ನಿವಾಸಿ ಹಾಗೂ ಪುತ್ತೂರಿನ ಕೂರ್ನಡ್ಕದಲ್ಲಿ ವಾಸವಿದ್ದ ಯುವಕ ಚೈತ್ರಾಳಿಗೆ ಗಾಂಜಾ ರುಚಿ ತೋರಿಸಿ ಕರೆದೊಯ್ದ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ: ಗದಗ ಲವ್ ಜಿಹಾದ್ ಪ್ರಕರಣಕ್ಕೆ ಮೇಜರ್​​ ಟ್ವಿಸ್ಟ್: ಅವನೂ ಬೇಡ- ಅಪ್ಪ ಅಮ್ಮನೂ ಬೇಡ ಎಂದ ಬಾಧಿತ ಹಿಂದೂ ಯುವತಿ

ಚೈತ್ರಾ ತಂಗಿದ್ದ ಪಿಜಿಗೆ ಶಂಕಿತ ಯುವಕ ಬರುತ್ತಿದ್ದ ಬಗ್ಗೆ ಚೈತ್ರಾಳ ಮನೆಯವರಿಗೆ ಮಾಡೂರು ಬಜರಂಗದಳದ ಕಾರ್ಯಕರ್ತರು ಮಾಹಿತಿ ನೀಡಿದ್ದರು. ಮಾಹಿತಿ ನೀಡಿದ ಬಳಿಕ ಚೈತ್ರಾ ಹೆಬ್ಬಾರ್‌ ನಾಪತ್ತೆಯಾಗಿದ್ದಳು. ತಂದೆ ನಿಧನದ ನಂತರ ತನ್ನ ಆರೈಕೆಯಲ್ಲಿ ಚೈತ್ರಾ ಇದ್ದ ಹಿನ್ನೆಲೆ ಆಕೆಯ ದೊಡ್ಡಪ್ಪ ಪೊಲೀಸ್ ಠಾಣೆಗೆ ದೂರು ನಿಡಿದ್ದರು.

ಪೊಲೀಸರಿಗೆ ದೂರು ನೀಡಿ ಒಂದು ವಾರವಾದರೂ ಚೈತ್ರಾ ಪತ್ತೆಯಾಗಿಲ್ಲ. ಇನ್ನೆರಡು ದಿನಗಳಲ್ಲಿ ಪತ್ತೆಯಾಗದೇ ಇದ್ದಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಬಜರಂಗದಳ ಕರ್ನಾಟಕ ಪ್ರಾಂತ ಸಂಚಾಲಕ ಮುರಳಿ ಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.

ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ

ಮಂಗಳೂರು ಹೊರವಲಯದ ದೇರಳಕಟ್ಟೆಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಎಂಎಸ್​ಸಿ ಮುಗಿಸಿದ ನಂತರ ಚೈತ್ರಾ ಕೋಟೆಕಾರು ಬಳಿಯ ಖಾಸಗಿ ಪಿಜಿಯಲ್ಲಿ ಇದ್ದುಕೊಂಡು ಫುಡ್ ಸೆಕ್ಯುರಿಟಿ ವಿಷಯದ ಮೇಲೆ ಪಿಹೆಚ್​ಡಿ ಅಧ್ಯಯನ ಮಾಡುತ್ತಿದ್ದಳು. ಫೆ.17 ರಂದು ಬೆಳಗ್ಗೆ 9 ಗಂಟೆಗೆ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದಾಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ದೊಡ್ಡಪ್ಪ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ