AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ ಶಂಕೆ

ಪಿಜಿಯಲ್ಲಿದ್ದ ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಾರದ ಹಿಂದೆ ನಾಪತ್ತೆಯಾಗಿದ್ದು, ಇದವರೆಗೆ ಪತ್ತೆಯಾಗಿಲ್ಲ. ಈ ನಡುವೆ, ಚೈತ್ರಾ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಚೈತ್ರಾ ತಂಗಿದ್ದ ಪಿಜಿಗೆ ಬರುತ್ತಿದ್ದ ಬಂಟ್ವಾಳ ಮೂಲದ ಪುತ್ತೂರು ನಿವಾಸಿಯಾಗಿರುವ ಅನ್ಯಕೋಮಿನ ಯುವಕ ಗಾಂಜಾ ರುಚಿ ತೋರಿಸಿ ಕರೆದೊಯ್ದ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ಎರಡು ದಿನಗಳಲ್ಲಿ ಪತ್ತೆ ಹಚ್ಚದಿದ್ದರೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಬಜರಂಗ ದಳ ನೀಡಿದೆ.

ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ ಶಂಕೆ
ಮಂಗಳೂರಿನಲ್ಲಿ ಯುವತಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ ಶಂಕೆ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Feb 24, 2024 | 5:22 PM

Share

ಮಂಗಳೂರು, ಫೆ.24: ಇಲ್ಲಿನ ಕೋಟೆಕಾರು ಬಳಿಯ ಪಿಜಿಯಲ್ಲಿದ್ದ ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಾರದ ಹಿಂದೆ ನಾಪತ್ತೆಯಾಗಿದ್ದು, ಇದವರೆಗೆ ಪತ್ತೆಯಾಗಿಲ್ಲ. ಈ ನಡುವೆ, ಚೈತ್ರಾ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ (Love Jihad) ಆರೋಪ ಕೇಳಿಬಂದಿದೆ. ಚೈತ್ರಾ ತಂಗಿದ್ದ ಪಿಜಿಗೆ ಬರುತ್ತಿದ್ದ ಬಂಟ್ವಾಳ ಮೂಲದ ಪುತ್ತೂರು ನಿವಾಸಿಯಾಗಿರುವ ಅನ್ಯಕೋಮಿನ ಯುವಕ ಗಾಂಜಾ ರುಚಿ ತೋರಿಸಿ ಯುವತಿಯನ್ನು ಕರೆದೊಯ್ದ ಅನುಮಾನ ವ್ಯಕ್ತವಾಗಿದೆ.

ಚೈತ್ರಾ ನಾಪತ್ತೆ ಹಿಂದೆ ಹಿಂದೆ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಮೂಲತಃ ಬಂಟ್ವಾಳದ ನೇರಳಕಟ್ಟೆಯ ನಿವಾಸಿ ಹಾಗೂ ಪುತ್ತೂರಿನ ಕೂರ್ನಡ್ಕದಲ್ಲಿ ವಾಸವಿದ್ದ ಯುವಕ ಚೈತ್ರಾಳಿಗೆ ಗಾಂಜಾ ರುಚಿ ತೋರಿಸಿ ಕರೆದೊಯ್ದ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ: ಗದಗ ಲವ್ ಜಿಹಾದ್ ಪ್ರಕರಣಕ್ಕೆ ಮೇಜರ್​​ ಟ್ವಿಸ್ಟ್: ಅವನೂ ಬೇಡ- ಅಪ್ಪ ಅಮ್ಮನೂ ಬೇಡ ಎಂದ ಬಾಧಿತ ಹಿಂದೂ ಯುವತಿ

ಚೈತ್ರಾ ತಂಗಿದ್ದ ಪಿಜಿಗೆ ಶಂಕಿತ ಯುವಕ ಬರುತ್ತಿದ್ದ ಬಗ್ಗೆ ಚೈತ್ರಾಳ ಮನೆಯವರಿಗೆ ಮಾಡೂರು ಬಜರಂಗದಳದ ಕಾರ್ಯಕರ್ತರು ಮಾಹಿತಿ ನೀಡಿದ್ದರು. ಮಾಹಿತಿ ನೀಡಿದ ಬಳಿಕ ಚೈತ್ರಾ ಹೆಬ್ಬಾರ್‌ ನಾಪತ್ತೆಯಾಗಿದ್ದಳು. ತಂದೆ ನಿಧನದ ನಂತರ ತನ್ನ ಆರೈಕೆಯಲ್ಲಿ ಚೈತ್ರಾ ಇದ್ದ ಹಿನ್ನೆಲೆ ಆಕೆಯ ದೊಡ್ಡಪ್ಪ ಪೊಲೀಸ್ ಠಾಣೆಗೆ ದೂರು ನಿಡಿದ್ದರು.

ಪೊಲೀಸರಿಗೆ ದೂರು ನೀಡಿ ಒಂದು ವಾರವಾದರೂ ಚೈತ್ರಾ ಪತ್ತೆಯಾಗಿಲ್ಲ. ಇನ್ನೆರಡು ದಿನಗಳಲ್ಲಿ ಪತ್ತೆಯಾಗದೇ ಇದ್ದಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಬಜರಂಗದಳ ಕರ್ನಾಟಕ ಪ್ರಾಂತ ಸಂಚಾಲಕ ಮುರಳಿ ಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.

ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ

ಮಂಗಳೂರು ಹೊರವಲಯದ ದೇರಳಕಟ್ಟೆಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಎಂಎಸ್​ಸಿ ಮುಗಿಸಿದ ನಂತರ ಚೈತ್ರಾ ಕೋಟೆಕಾರು ಬಳಿಯ ಖಾಸಗಿ ಪಿಜಿಯಲ್ಲಿ ಇದ್ದುಕೊಂಡು ಫುಡ್ ಸೆಕ್ಯುರಿಟಿ ವಿಷಯದ ಮೇಲೆ ಪಿಹೆಚ್​ಡಿ ಅಧ್ಯಯನ ಮಾಡುತ್ತಿದ್ದಳು. ಫೆ.17 ರಂದು ಬೆಳಗ್ಗೆ 9 ಗಂಟೆಗೆ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದಾಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ದೊಡ್ಡಪ್ಪ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ