ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು; ಮುಸ್ಲಿಂ ಯುವಕನ ಜತೆ ಮದುವೆಯಾಗಿ ಠಾಣೆಗೆ ಬಂದ ಯುವತಿ

ಮೇ 23ರಂದು ಮನೆಯಿಂದ ಹೊರಟ ನೇಹಾ ದಿಢೀರ್ ನಾಪತ್ತೆಯಾಗಿದ್ದರು. ಆ ಬಳಿಕ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿ ಬೋರ್ಡ್‌ನಲ್ಲಿ ಇಬ್ಬರ ಭಾವಚಿತ್ರಗಳ ಸಹಿತ ನೋಟೀಸ್ ಪತ್ತೆಯಾಗಿತ್ತು. ರಿಜಿಸ್ಟರ್ ಕಚೇರಿಯಲ್ಲಿ ನೇಹಾ ಮತ್ತು ಮಿರ್ಶಾದ್ ಮದುವೆಯಾಗಿರುವುದು ತಿಳಿದುಬಂದಿತ್ತು. ಮದುವೆಯಾದ ನಂತರ ಮೇ 27ರಂದು ಬದಿಯಡ್ಕ ಠಾಣೆಗೆ ಜೋಡಿ ಹಾಜರಾಗಿತ್ತು.

ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು; ಮುಸ್ಲಿಂ ಯುವಕನ ಜತೆ ಮದುವೆಯಾಗಿ ಠಾಣೆಗೆ ಬಂದ ಯುವತಿ
ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು
Edited By:

Updated on: May 29, 2024 | 11:24 AM

ಮಂಗಳೂರು, ಮೇ 29: ದಕ್ಷಿಣ ಕನ್ನಡದ ನೆರೆಯ ಜಿಲ್ಲೆ, ಗಡಿನಾಡು ಕಾಸರಗೋಡಿನಲ್ಲಿ (Kasaragod) ಮತ್ತೆ ಲವ್ ಜಿಹಾದ್ (Love Jihad) ಸದ್ದು ಕೇಳಿಬಂದಿದೆ. ಮುಸ್ಲಿಂ ಲೀಗ್ ನಾಯಕರೊಬ್ಬರು ಲವ್ ಜಿಹಾದ್​ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕಾಸರಗೋಡಿನ ವಿಎಚ್​​​​ಪಿ ಸೇರಿ ಹಿಂದೂ ಪರ ಸಂಘಟನೆಗಳು ಅರೋಪಿಸಿವೆ. ಜಿಲ್ಲೆಯ ಬದಿಯಡ್ಕದಲ್ಲಿ ಲವ್‌ ಜಿಹಾದ್ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಹಿಂದೂ ಪರ ಸಂಘಟನೆಗಳು ಈ ಆರೋಪ ಮಾಡಿವೆ.

ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದಾರೆ. ಮಿರ್ಶಾದ್ ಎಂಬಾತನ ಜೊತೆ ತೆರಳಿದ ಯುವತಿ ಠಾಣೆಗೆ ಹಾಜರಾಗಿದ್ದಾರೆ. ಈಕೆ ಕಾಸರಗೋಡಿನ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದಾರೆ. ಆಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸದ್ಯ ಆಕೆ ಸ್ವಇಚ್ಛೆಯಂತೆ ಯುವಕನ ಜೊತೆ ತೆರಳಿದ್ದಾರೆ.

ಇದರ ಬೆನ್ನಲ್ಲೇ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಲವ್ ಜಿಹಾದ್​​ಗೆ ಕೇರಳದ ಮುಸ್ಲಿಂ ಲೀಗ್ ನೇತಾರನೋರ್ವ ಷಡ್ಯಂತ್ರ ರೂಪಿಸಿ ಪ್ರೇಮಾಂಕುರವಾಗುವಂತೆ ಮಾಡಿದ್ದಾರೆ. ಆ ನೆಪದಲ್ಲಿ ಹಿಂದೂ ಯುವತಿಯೊಬ್ಬಳನ್ನು ಇಸ್ಲಾಂಗೆ ಮತಾಂತರಿಸಲು ಭಾರೀ ಸಂಚು ರೂಪಿಸಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.

ಯುವತಿಯ ತಂದೆಯ ದೂರಿನಂತೆ ಬದಿಯಡ್ಕ ಪೊಲೀಸರು ನಾಪತ್ತೆ ಕೇಸು ದಾಖಲಿಸಿದ್ದರು. ದೂರಿನಲ್ಲಿ ಪೋಷಕರು ಯುವತಿಯ ಅಪಹರಣದ ಅನುಮಾನ ವ್ಯಕ್ತಪಡಿಸಿದ್ದರು.

ನಡೆದಿದ್ದೇನು?

ಮೇ 23ರಂದು ಮನೆಯಿಂದ ಹೊರಟ ಯುವತಿ ದಿಢೀರ್ ನಾಪತ್ತೆಯಾಗಿದ್ದರು. ಆ ಬಳಿಕ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿ ಬೋರ್ಡ್‌ನಲ್ಲಿ ಇಬ್ಬರ ಭಾವಚಿತ್ರಗಳ ಸಹಿತ ನೋಟೀಸ್ ಪತ್ತೆಯಾಗಿತ್ತು. ರಿಜಿಸ್ಟರ್ ಕಚೇರಿಯಲ್ಲಿ ಯುವತಿ ಮತ್ತು ಮಿರ್ಶಾದ್ ಮದುವೆಯಾಗಿರುವುದು ತಿಳಿದುಬಂದಿತ್ತು. ಮದುವೆಯಾದ ನಂತರ ಮೇ 27ರಂದು ಬದಿಯಡ್ಕ ಠಾಣೆಗೆ ಜೋಡಿ ಹಾಜರಾಗಿತ್ತು.

ಇದನ್ನೂ ಓದಿ: ಲವ್ ಜಿಹಾದ್​​ ತಡೆಗೆ ಶ್ರೀರಾಮಸೇನೆಯಿಂದ ರಾಜ್ಯದ 6 ಕಡೆ ಸಹಾಯವಾಣಿ ಆರಂಭಿಸಲು ನಿರ್ಧಾರ

ಲವ್ ಜಿಹಾದ್​​ಗೆ ಪೊಲೀಸರ ಸಾಥ್; ವಿಎಚ್​​ಪಿ ಆರೋಪ

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಲವ್ ಜಿಹಾದ್ ಸಕ್ರಿಯವಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗದ ಯುವತಿಯರಿಗೆ ಆಡಂಬರದ ಬದುಕಿನ ಆಮಿಷ ತೋರಿಸಿ ಲವ್ ಜಿಹಾದ್‌ನ ಜಾಲಕ್ಕೆ ಸಿಲುಕಿಸಲಾಗುತ್ತಿದೆ ಎಂದು ವಿಎಚ್​​​ಪಿ, ಭಜರಂಗದಳ ಹಾಗೂ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿವೆ. ಲವ್ ಜಿಹಾದ್​ಗೆ ಬದಿಯಡ್ಕ ಪೊಲೀಸರು ಸಾಥ್ ನೀಡುತ್ತಿದ್ದಾರೆ ಎಂದು ವಿಎಚ್​​​ಪಿ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us