AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lunar eclipse 2023: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶನಿವಾರ ದೇವರ ದರ್ಶನ ಸಮಯ ಬದಲು, ಚಂದ್ರ ಗ್ರಹಣ ಪ್ರಯುಕ್ತ ಅನ್ನದಾನ ಸೇವೆಯೂ ಬಂದ್

Kukke Shree Subrahmanya Temple: ಶನಿವಾರ ಸಂಜೆಯ ಆಶ್ಲೇಷಾ ಬಲಿ ಹಾಗೂ ರಾತ್ರಿಯ ಅನ್ನದಾನ (Annadana) ಸೇವೆಯೂ ಬಂದ್ ಆಗಿರುತ್ತದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಶನಿವಾರ ರಾತ್ರಿ 01.04 ಗಂಟೆಗೆ ಗ್ರಹಣ ಸ್ಪರ್ಶವಾಗಿ ರಾತ್ರಿ 02.24 ಗಂಟೆಗೆ ಗ್ರಹಣ ಮೋಕ್ಷ ಪ್ರಾಪ್ತಿಯಾಗಲಿದೆ.

Lunar eclipse 2023: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶನಿವಾರ ದೇವರ ದರ್ಶನ ಸಮಯ ಬದಲು, ಚಂದ್ರ ಗ್ರಹಣ ಪ್ರಯುಕ್ತ ಅನ್ನದಾನ ಸೇವೆಯೂ ಬಂದ್
ಚಂದ್ರಗ್ರಹಣ -ಕುಕ್ಕೆ ಶ್ರೀಕ್ಷೇತ್ರದಲ್ಲಿ ಶನಿವಾರ ದೇವರ ದರ್ಶನ ಸಮಯ ಬದಲು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Oct 26, 2023 | 3:01 PM

Share

ಮಂಗಳೂರು, ಅಕ್ಟೋಬರ್ 26: ನಾಳಿದ್ದು ಶನಿವಾರ ಅಕ್ಟೋಬರ್​ 28 ರಂದು ಈ ವರ್ಷದ ಕೊನೆಯ ಚಂದ್ರಗ್ರಹಣ (Lunar eclipse 2023). ಹಾಗಾಗಿ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ (Kukke Shree Subrahmanya Temple) ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸವಿರುತ್ತದೆ. ಶನಿವಾರದಂದು ಸುಬ್ರಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ರಾತ್ರಿಯ ಮಹಾಪೂಜೆ ಸಂಜೆ 6.30 ಕ್ಕೇ ಮುಕ್ತಾಯವಾಗಲಿದೆ. ಅಕ್ಟೋಬರ್​ 28ರ ಸಂಜೆ ಶನಿವಾರ ಸಂಜೆ 6.30ರ ಬಳಿಕ ದೇವರ ದರ್ಶನ ಬಂದ್ ಮಾಡಲಾಗಿದೆ.

ಗ್ರಹಣ ಪ್ರಯುಕ್ತ ಅನ್ನದಾನ ಸೇವೆಯೂ ಬಂದ್:

ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಆದಾಯ ಗಳಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ

ಶನಿವಾರ ಸಂಜೆಯ ಆಶ್ಲೇಷಾ ಬಲಿ ಹಾಗೂ ರಾತ್ರಿಯ ಅನ್ನದಾನ (Annadana) ಸೇವೆಯೂ ಬಂದ್ ಆಗಿರುತ್ತದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಶನಿವಾರ ರಾತ್ರಿ 01.04 ಗಂಟೆಗೆ ಗ್ರಹಣ ಸ್ಪರ್ಶವಾಗಿ ರಾತ್ರಿ 02.24 ಗಂಟೆಗೆ ಗ್ರಹಣ ಮೋಕ್ಷ ಪ್ರಾಪ್ತಿಯಾಗಲಿದೆ.

ಉಡುಪಿಯ ಕೃಷ್ಣಮಠದಲ್ಲಿಯೂ ದೈನಂದಿನ ಪೂಜೆಯಲ್ಲಿ ವ್ಯತ್ಯಾಸ

ಶನಿವಾರ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಉಡುಪಿಯ ಕೃಷ್ಣಮಠದಲ್ಲಿ ಶ್ರೀ ಕೃಷ್ಣನ ದರ್ಶನಕ್ಕೆ ಸಮಯ ಬದಲಾವಣೆ ಮಾಡಲಾಗಿದೆ. ಅ. 28 (ಶನಿವಾರ) ಸಂಜೆ 4 ಗಂಟೆಯ ನಂತರ ಊಟದ ವ್ಯವಸ್ಥೆ ಸ್ಥಗಿತಗೊಳಿಸಲಾಗಿದೆ. ರಾತ್ರಿ ಮಠಕ್ಕೆ ಬಂದ ಭಕ್ತರಿಗೆ ನೀಡುತ್ತಿದ್ದ ಅನ್ನ ಪ್ರಸಾದ ರದ್ದಿಗೆ ಸಹ ಆದೇಶ ನೀಡಲಾಗಿದೆ. ಮಠಾಧೀಶರು ಉಪವಾಸ ಕೈಗೊಳ್ಳುವ ಮೂಲಕ ವ್ರತ ಆಚರಿಸಲಿದ್ದಾರೆ. ಇನ್ನು, ಮಠದ ಒಳಗಿರುವ ಮುಖ್ಯಪ್ರಾಣ ದೇವರಿಗೆ ರಂಗ ಪೂಜೆ ಇರುವುದಿಲ್ಲ. ಆದರೆ ಭೋಜನಾಲಯದ ಮುಖ್ಯಪ್ರಾಣ ದೇವರಿಗೆ ಶನಿವಾರ ಸಂಜೆ ರಂಗ ಪೂಜೆ ಇರುತ್ತದೆ. ಭಾನುವಾರ ಬೆಳಗ್ಗೆ ಒಂದು ಗಂಟೆ ಮುಂಚಿತವಾಗಿ ಪರ್ಯಾಯ ಕೃಷ್ಣಾಪುರ ಮಠಾಧೀಶರಿಂದ ದೈನಂದಿನ ಮಹಾಪೂಜೆ ಆರಂಭವಾಗುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:53 am, Thu, 26 October 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!