AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು!

ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ತಾಯಿಗೆ ನಿಂದನೆ ಆರೋಪ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪುತ್ತೂರು ಪೊಲೀಸ್ ಠಾಣೆಗೆ ವಾರಕ್ಕೊಮ್ಮೆ ಹಾಜರಾಗಿ, ತನಿಖೆಗೆ ಸಹಕರಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಸಾಕ್ಷ್ಯ ನಾಶ ಅಥವಾ ದೂರುದಾರರಿಗೆ ಬೆದರಿಕೆ ಹಾಕದಂತೆ ಸೂಚಿಸಿರುವ ಈ ತೀರ್ಪಿನಿಂದ ಪ್ರಕರಣಕ್ಕೆ ತಾತ್ಕಾಲಿಕ ವಿರಾಮ ಸಿಕ್ಕಿದೆ.

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು!
ಮಹೇಶ್ ಶೆಟ್ಟಿ ತಿಮರೋಡಿ
ಅಕ್ಷಯ್​ ಪಲ್ಲಮಜಲು​​
|

Updated on: May 28, 2026 | 9:16 PM

Share

ಬೆಂಗಳೂರು, ಮೇ.28: ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ಅವರ ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಗಂಭೀರ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸುದೀರ್ಘ ವಾದ-ವಿವಾದಗಳನ್ನು ಆಲಿಸಿದ ನ್ಯಾಯಾಲಯವು ತಿಮರೋಡಿ ಅವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಕೆ ಮಾಡಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ನಟರಾಜ್ ಅವರ ಅಧ್ಯಕ್ಷತೆಯ ರಜಾ ಕಾಲದ ಏಕಸದಸ್ಯ ಪೀಠವು ಈ ಮಹತ್ವದ ತೀರ್ಪು ನೀಡಿದೆ. ದೂರುದಾರರು ಹಾಗೂ ಆರೋಪಿ ಪರ ವಕೀಲರ ಸುದೀರ್ಘ ಮತ್ತು ಕೂಲಂಕಷ ವಾದಗಳನ್ನು ಆಲಿಸಿದ ನ್ಯಾಯಪೀಠವು ಕೊನೆಗೂ ಔಪಚಾರಿಕವಾಗಿ ಪರಿಹಾರವನ್ನು ಮಂಜೂರು ಮಾಡಿದೆ.

ಮಾನ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡುವ ವೇಳೆ ಕೆಲವು ಕಠಿಣ ಕಾನೂನು ಷರತ್ತುಗಳನ್ನು ವಿಧಿಸಿದೆ. ಅದರಂತೆ, ಆರೋಪಿತ ಮಹೇಶ್ ಶೆಟ್ಟಿ ತಿಮರೋಡಿ ಅವರು ಪ್ರತಿ ವಾರಕ್ಕೊಮ್ಮೆ ಕಡ್ಡಾಯವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೊಲೀಸ್ ಠಾಣೆಗೆ ಹಾಜರಾಗಬೇಕು ಮತ್ತು ಅಲ್ಲಿನ ಪೊಲೀಸ್ ರಿಜಿಸ್ಟರ್‌ನಲ್ಲಿ ಸಹಿ ಹಾಕಬೇಕು ಎಂದು ಪೀಠವು ಕಟ್ಟುನಿಟ್ಟಾಗಿ ಸೂಚಿಸಿದೆ.

ಇದನ್ನೂ ಓದಿ:ಕೊನೆಯುಸಿರಿರುವವರೆಗೂ ನೀನೇ ನನ್ನವಳು!: ಆಸ್ಪತ್ರೆ ಹಾಸಿಗೆಯಲ್ಲೇ ಹೆಂಡತಿಗೆ ಸಿಂಧೂರ ಇಟ್ಟು ಪತಿ ಧರ್ಮ ಮೆರೆದ ಪತಿ

ಇದಲ್ಲದೆ, ಈ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸರು ನಡೆಸುತ್ತಿರುವ ಕಾನೂನು ತನಿಖೆಗೆ ಆರೋಪಿಯು ಸಂಪೂರ್ಣವಾಗಿ ಸಹಕಾರ ನೀಡಬೇಕು. ಯಾವುದೇ ಕಾರಣಕ್ಕೂ ಸಾಕ್ಷ್ಯ ನಾಶಪಡಿಸುವ ಅಥವಾ ದೂರುದಾರರಿಗೆ ಬೆದರಿಕೆ ಹಾಕುವ ಪ್ರಯತ್ನ ಮಾಡಬಾರದು ಎಂದು ಹೈಕೋರ್ಟ್ ಬಿಗಿಯಾದ ನಿರ್ದೇಶನ ನೀಡಿದೆ. ಈ ಆದೇಶದೊಂದಿಗೆ ಕರಾವಳಿ ಭಾಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹೈಪ್ರೊಫೈಲ್ ನಿಂದನೆ ಪ್ರಕರಣಕ್ಕೆ ಸದ್ಯಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ