AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ನ್ಯಾಯಾಲಯದಲ್ಲಿ ಇಂದು ಮಳಲಿ ಮಸೀದಿ ವಿವಾದ ವಿಚಾರಣೆ, ತೀರ್ಪು ಸಾಧ್ಯತೆ

ಮಳಲಿ ಮಸೀದಿ ಕುರಿತು ವಿಶ್ವ ಹಿಂದೂ ಪರಿಷತ್ ಮತ್ತು ಮುಸ್ಲಿಂ ಸೆಂಟ್ರಲ್ ಕಮಿಟಿ ಅರ್ಜಿಗಳನ್ನು ಸಲ್ಲಿಸಿವೆ.

ಮಂಗಳೂರು ನ್ಯಾಯಾಲಯದಲ್ಲಿ ಇಂದು ಮಳಲಿ ಮಸೀದಿ ವಿವಾದ ವಿಚಾರಣೆ, ತೀರ್ಪು ಸಾಧ್ಯತೆ
ಮಳಲಿ ದರ್ಗಾ
TV9 Web
| Edited By: |

Updated on:Jun 06, 2022 | 1:13 PM

Share

ಮಂಗಳೂರು: ದೇಶದ ಗಮನ ಸೆಳೆದಿರುವ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ಕೋರ್ಟ್ ತೀರ್ಪು ನೀಡುವ ಸಾಧ್ಯತೆಯಿದೆ. ಮಧ್ಯಾಹ್ನದ ಬಳಿಕ ಎರಡೂ ಕಡೆಯ ಅರ್ಜಿಗಳ ವಿಚಾರಣೆ ನಡೆಸಿ, ತೀರ್ಪು ನೀಡಬಹುದು. ಮಳಲಿ ಮಸೀದಿ ಕುರಿತು ವಿಶ್ವ ಹಿಂದೂ ಪರಿಷತ್ ಮತ್ತು ಮುಸ್ಲಿಂ ಸೆಂಟ್ರಲ್ ಕಮಿಟಿ ಅರ್ಜಿಗಳನ್ನು ಸಲ್ಲಿಸಿವೆ. ಮೇ 31 ಮತ್ತು ಜೂನ್ 1ರಂದು ಪ್ರಕರಣ ಸಂಬಂಧ ನ್ಯಾಯಾಲಯವು ಸುದೀರ್ಘ ವಿಚಾರಣೆ ನಡೆಸಿತ್ತು. ವಿಎಚ್​ಪಿ ಪರ ವಕೀಲರಾದ ಚಿದಾನಂದ ಕೆದಿಲಾಯ ಹಾಗೂ ಮಸೀದಿ ಪರ ವಕೀಲರಾದ ಎಂ.ಪಿ.ಶೆಣೈ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ಮಳಲಿ ಮಸೀದಿಯ ಸಮೀಕ್ಷೆಗೆ ಕೋರ್ಟ್ ಕಮಿಷನರ್ ನೇಮಿಸಬೇಕೆಂದು ವಿಎಚ್​ಪಿ ಮನವಿ ಮಾಡಿದೆ. ವಿಎಚ್​ಪಿ ಮನವಿ ತಿರಸ್ಕರಿಸಬೇಕು ಮತ್ತು ನವೀಕರಣ ಕಾಮಗಾರಿಗೆ ನೀಡಿರುವ ತಡೆಯಾಜ್ಞೆ ತೆರವು ಮಾಡಬೇಕು ಎಂದು ಮಸೀದಿ ಸಮಿತಿ ನ್ಯಾಯಾಲಯವನ್ನು ವಿನಂತರಿಸಿದೆ.

ಏನಿದು ವಿವಾದ

ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು. ನವೀಕರಣಕಕ್ಕಾಗಿ ದರ್ಗಾದ ಮುಂಭಾಗ ಕೆಡವಲಾಗಿತ್ತು. ದರ್ಗಾದ ಹಿಂಭಾಗದಲ್ಲಿ ಕಲಶ, ತೋಮರ, ಕಂಬಗಳ ಮಾದರಿ ಪತ್ತೆಯಾಗಿತ್ತು. ಬಹುಶಃ, ಇದು ಜೈನ ಬಸದಿ ಅಥವಾ ದೇವಸ್ಥಾನದ ಅವಶೇಷ ಆಗಿರಬಹುದು ಎಂದು ಹಿಂದುತ್ವಪರ ಸಂಘಟನೆಗಳು ಶಂಕಿಸಿವೆ.

ದರ್ಗಾ ಸಮಿತಿಯ ವಾದ

ಮಳಲಿ ದರ್ಗಾ ನವೀಕರಣಕ್ಕೆ ಅವಕಾಶ ಕೊಡಬಾರದು ಎಂದು ಆದೇಶಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ನ್ಯಾಯಾಲಯಕ್ಕೆ ಮನವಿ ಮಾಡಿದೆ. ಇದನ್ನು ಆಕ್ಷೇಪಿಸಿರುವ ದರ್ಗಾ ಪರ ವಕೀಲರು, ಮಸೀದಿಗೆ ನೂರಾರು ವರ್ಷಗಳ ಇತಿಹಾಸವಿದೆ. ಹಲವು ವರ್ಷಗಳಿಂದ ಮುಸ್ಲಿಮರು ಪ್ರಾರ್ಥನೆ ಮಾಡುತ್ತಿದ್ದಾರೆ. ಇದೇ ಸ್ಥಳದಲ್ಲಿ ದಫನ್ ಭೂಮಿ ಸಹ ಇದೆ. ಎಲ್ಲದಕ್ಕೂ ದಾಖಲೆಗಳಿದ್ದು, ಸ್ಥಳೀಯ ಪಂಚಾಯಿತಿ ಒಪ್ಪಿಗೆ ಪಡೆದು ದರ್ಗಾ ನವೀಕರಿಸಲಾಗುತ್ತಿದೆ. ಇದು ವಕ್ಫ್ ಆಸ್ತಿ ಎಂಬ ಬಗ್ಗೆ ಸರ್ಕಾರದ ದಾಖಲೆಗಳಲ್ಲೂ ಉಲ್ಲೇಖವಿದೆ. ಮಳಲಿ ಮಸೀದಿ ದರ್ಗಾವನ್ನು ಜ್ಞಾನವಾಪಿ ಪ್ರಕರಣಕ್ಕೆ ಹೋಲಿಸುವುದು ಸರಿಯಲ್ಲ. ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡಬೇಕು ಎಂಬ ಮನವಿ ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದರು.

Published On - 1:13 pm, Mon, 6 June 22

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ