AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ ಜಿಲ್ಲೆ ಜನರ ರಕ್ತದ ಬಣ್ಣ ಕೇಸರಿ, ಕುಯ್ದ್ರೆ ಬರೋದು ಕೆಂಪು ರಕ್ತ ಅಲ್ಲ: ಮಾಳವಿಕಾ ಅವಿನಾಶ್

ದಕ್ಷಿಣ ಕನ್ನಡ ಜಿಲ್ಲೆಯ ಜನರ ರಕ್ತದ ಬಣ್ಣ ಕೇಸರಿ, ಕುಯ್ದ್ರೆ ಬರೋದು ಕೆಂಪು ರಕ್ತ ಅಲ್ಲ, ಕೇಸರಿ ಬಣ್ಣದ ರಕ್ತ ಎಂದು ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್(Malavika Avinash) ಹೇಳಿದ್ದಾರೆ. ಪುತ್ತೂರಿನಲ್ಲಿ ನಡೆದ ನಾರಿಶಕ್ತಿ ಮಹಿಳಾ ಸಮಾವೇಶದಲ್ಲಿ ಅಬ್ಬರದ ಭಾಷಣ ಮಾಡಿದ ಅವರು, ‘ 28ಕ್ಕೆ 28 ಕ್ಷೇತ್ರ ಗೆಲ್ಲುವ ಸವಾಲು ನಮ್ಮ‌ ಮುಂದಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆ ಜನರ ರಕ್ತದ ಬಣ್ಣ ಕೇಸರಿ, ಕುಯ್ದ್ರೆ ಬರೋದು ಕೆಂಪು ರಕ್ತ ಅಲ್ಲ: ಮಾಳವಿಕಾ ಅವಿನಾಶ್
ಮಾಳವಿಕಾ ಅವಿನಾಶ್​
ಅಶೋಕ್​ ಪೂಜಾರಿ, ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 10, 2024 | 7:11 PM

Share

ದಕ್ಷಿಣ ಕನ್ನಡ, ಏ.10: ಲೋಕಸಭಾ ಚುನಾವಣೆ(Lok sabha election) ಹತ್ತಿರವಾಗುತ್ತಿದ್ದಂತೆ ಅದರ ಕಾವು ಜೋರಾಗಿದೆ. ಉಭಯ ಪಕ್ಷಗಳು ಕೂಡ ಅಬ್ಬರದ ಪ್ರಚಾರವನ್ನ ಕೈಗೊಂಡಿದ್ದಾರೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ರಕ್ತದ ಬಣ್ಣ ಕೇಸರಿ, ಕುಯ್ದ್ರೆ ಬರೋದು ಕೆಂಪು ರಕ್ತ ಅಲ್ಲ, ಕೇಸರಿ ಬಣ್ಣದ ರಕ್ತ ಎಂದು ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್(Malavika Avinash) ಹೇಳಿದ್ದಾರೆ. ಪುತ್ತೂರಿನಲ್ಲಿ ನಡೆದ ನಾರಿಶಕ್ತಿ ಮಹಿಳಾ ಸಮಾವೇಶದಲ್ಲಿ ಅಬ್ಬರದ ಭಾಷಣ ಮಾಡಿದ ಅವರು, ‘ 28ಕ್ಕೆ 28 ಕ್ಷೇತ್ರ ಗೆಲ್ಲುವ ಸವಾಲು ನಮ್ಮ‌ ಮುಂದಿದೆ ಎಂದರು.

ಮೋದಿಜಿ ಮತ್ತೊಮ್ಮೆ ಪ್ರಧಾನಿ ಆಗುವುದರಲ್ಲಿ ಸಂಶಯವಿಲ್ಲ

ಇನ್ನು ಬ್ರಿಜೇಶ್ ಚೌಟ ಅಭ್ಯರ್ಥಿ ಅಲ್ಲ, ನನ್ನ ಲೆಕ್ಕದಲ್ಲಿ ಅವರು ಲೋಕಸಭಾ ಸದಸ್ಯ. ಜೊತೆಗೆ ಮೋದಿಜಿ ಮತ್ತೊಮ್ಮೆ ಪ್ರಧಾನಿ ಆಗುವುದರಲ್ಲಿ ಸಂಶಯವಿಲ್ಲ. ಆದರೆ, ಎಷ್ಟು ಅಂತರದಲ್ಲಿ ಗೆಲ್ಲಿಸುತ್ತೇವೆ ಎಂಬ ಸವಾಲು ನಮ್ಮ ಮುಂದಿದೆ. 26 ನೇ ತಾರೀಖು ಹೆಚ್ಚಿನ ಮದುವೆ ಮುಹೂರ್ತ ಇದೆಯಂತೆ, ಮದುವೆಗೆ ಹೋಗ್ತಿನಿ‌ ಎಂದು ನರೇಂದ್ರ ಮೋದಿಗೆ ಅನ್ಯಾಯ ಮಾಡಿ ಹೋಗಿ ಬಿಟ್ಟಿರಾ?, ಅದಕ್ಕೂ ಮುಂಚೆ ಬಟನ್ ಒತ್ತಿ ಎಲ್ಲಿಗಾದರೂ ಹೋಗೋಕೆ ಹೇಳಿ ಎಂದರು.

ಇದನ್ನೂ ಓದಿ:ನೂರಾರು ವರ್ಷಗಳಿಂದ ಇದ್ದರೂ ಸಿಗದ ಹಕ್ಕು ಪತ್ರಗಳು; ಲೋಕಸಭಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ ಗ್ರಾಮಸ್ಥರು

ಕಾಂಗ್ರೆಸ್​ ಪಕ್ಷ ಎಲ್ಲದರ ಮೇಲೂ ತಮ್ಮ ಬೋರ್ಡ್​ನ್ನು ಹಾಕಿಕೊಳ್ಳುತ್ತದೆ. ಹೀಗಾಗಿ ಜನರಿಗೆ ನಾವು ಮನವರಿಕೆ ಮಾಡಿಕೊಡಬೇಕು. ಸತತ ನಾಲ್ಕು ವರ್ಷಗಳ ಕಾಲ ಉಚಿತ ಆಹಾರವನ್ನ ಕೊಟ್ಟ ದೇಶ ಇರುವುದಕ್ಕೆ ಸಾಧ್ಯವಿಲ್ಲ. ಆದರೆ ನಮ್ಮ ದೇಶದ 80 ಕೋಟಿ ಜನರಿಗೆ 2020 ರಿಂದ ಇಲ್ಲಿಯವರೆಗೂ ನಡೆಯುತ್ತಿದೆ. ಅನ್ನಸಂತರ್ಪಣೆ, ಧಾನ್ಯ ಸಂತರ್ಪಣೆ ಮೂಲಕ ಎಂದರು. ಮತ್ತೊಮ್ಮೆ ನಾನು ಬರುವಷ್ಟರಲ್ಲಿ ಬ್ರಿಜೇಶ್ ಚೌಟ ಅವರು ಸಂಸತ್​ ಸದಸ್ಯ ಆಗಿರಲಿ ಎಂದು ಹಾರೈಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:59 pm, Wed, 10 April 24

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು