Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ, ದಂಪತಿ ಮಧ್ಯೆ ಜಗಳ: ಸಾವು

ಲೈವ್ ವಿಡಿಯೋದಲ್ಲಿ ವಿಷ ಕುಡಿದು ಯುವಕ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ತಮಿಳುನಾಡು ಮೂಲದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಸುಳ್ಯದಲ್ಲಿ ಆಗಸ್ಟ್ 22ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ, ದಂಪತಿ ಮಧ್ಯೆ ಜಗಳ: ಸಾವು
ಪ್ರಾತಿನಿಧಿಕ ಚಿತ್ರ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Aug 23, 2023 | 4:16 PM

ಮಂಗಳೂರು, ಆಗಸ್ಟ್​ 23: ಲೈವ್ ವಿಡಿಯೋದಲ್ಲಿ ವಿಷ ಕುಡಿದು ಯುವಕ ಆತ್ಮಹತ್ಯೆಗೆ (suicide) ಯತ್ನಿಸಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿರುವ ಯುವಕ. ಸದ್ಯ ಅಬ್ದುಲ್ ನಾಸಿರ್​ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಿದ್ದು, ಸ್ಥಿತಿ ಗಂಭೀರವಾಗಿದೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಬ್ಯಾರಿ ಭಾಷೆಯಲ್ಲಿ ಯುವಕ ವಿಡಿಯೋ ಮಾಡಿದ್ದು,  ಅದ್ರಾಮ ಮತ್ತು ಅವನ ಕುಟುಂಬಸ್ಥರೇ ಸಾವಿಗೆ ಕಾರಣವೆಂದು ಹೇಳಿದ್ದಾನೆ.

ಆತ್ಮಹತ್ಯೆಗೆ ಯತ್ನಿಸಿದ ಅಬ್ದುಲ್ ನಾಸಿರ್​​, ಅದ್ರಾಮ ಎನ್ನುವವರ ಮನೆಯಲ್ಲಿ ಕಾರು ಚಾಲಕನಾಗಿದ್ದ. ಅವರ ಮನೆಯ ಹೆಣ್ಣಿನ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಹಲ್ಲೆ ನಡೆಸಿದ್ದಾಗಿ ಆತ ಆರೋಪ ಮಾಡಿದ್ದಾನೆ. ನನಗೆ ಯಾವುದೇ ಹುಡುಗಿಯ ಸಂಬಂಧ ಇಲ್ಲ ಎಂದು ಹೇಳಿದ್ದು, ಜೊತೆಗಿದ್ದ ನಾಲ್ವರನ್ನು ತೋರಿಸಿ ನೇಣಿಗೆ ಶರಣಾಗುತ್ತೇನೆಂದು ಹೇಳಿ ವಿಡಿಯೋ ಬಂದ ಮಾಡಲಾಗಿದೆ.

ದಂಪತಿ ಮಧ್ಯೆ ಜಗಳ: ಸಾವು

ಸುಳ್ಯ: ತಮಿಳುನಾಡು ಮೂಲದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಸುಳ್ಯ ತಾಲೂಕಿನ ಎಲಿಮಲೆ ತೋಟದಲ್ಲಿ ಆಗಸ್ಟ್ 22ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಿವಕುಮಾರ ಅಲಿಯಾಸ್​ ರಾಜನ್​ (54), ಮುತ್ತುಲಕ್ಷ್ಮೀ (47) ಮೃತ ದಂಪತಿಗಳು. ಕಳೆದ ಕೆಲವು ವರ್ಷಗಳಿಂದ ದಂಪತಿ ದೇವಚಳ್ಳ ಗ್ರಾಮದ ಗುಡ್ಡದಲ್ಲಿ ರಬ್ಬರ್ ಟ್ಯಾಪಿಂಗ್​ ಕಾರ್ಯದಲ್ಲಿ ತೊಡಗಿದ್ದರು.  ಅಲ್ಲಿಯೇ ಭೂಮಿಯನ್ನು ಸಹ ಖರೀದಿಸಿದ್ದರು.

ಇದನ್ನೂ ಓದಿ: ಬೆಂಗಳೂರು: ಸಿಸಿಬಿ ಎಚ್ಚರಿಕೆ ನೀಡಿದ ಮೇಲೂ ಬಾಲ ಬಿಚ್ಚಿದ ರೌಡಿಶೀಟರ್ಸ್​​​​​​​ ಸೈಕಲ್​ ರವಿ, ಬೇಕರಿ ರಘು; ಪ್ರಕರಣ ದಾಖಲು

ಸೋಮವಾರ ರಾತ್ರಿ ದಂಪತಿ ಮಧ್ಯೆ ಜಗಳ ನಡೆದಿದೆ. ಸುಳ್ಯದಲ್ಲಿ ವಾಸವಿದ್ದ ತಮ್ಮ ಮಗಳಿಗೆ ಈ ಕುರಿತಾಗಿ ತಾಯಿ ಮುತ್ತುಲಕ್ಷ್ಮೀ ಹೇಳಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಮನನೊಂದ ರಾಜನ್ ಮೊದಲು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಕಂಡ ಪತ್ನಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಂಡ್ಯ: ಸ್ನೇಹಿತರ ದಿನವೇ ಕುಚಿಕು ಗೆಳಯನ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಗಳ ಬಂಧನ

ದಂಪತಿಗೆ ಒಟ್ಟು ಮೂವರು ಮಕ್ಕಳಿದ್ದು, ಮಗ ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾನೆ. ಇಬ್ಬರೂ ಹೆಣ್ಣುಮಕ್ಕಳಿ ಮದುವೆ ಆಗಿದೆ. ದಂಪತಿಗಳು ಸುಳ್ಯದಲ್ಲಿ ವಾಸವಾಗಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ