AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ, ದಂಪತಿ ಮಧ್ಯೆ ಜಗಳ: ಸಾವು

ಲೈವ್ ವಿಡಿಯೋದಲ್ಲಿ ವಿಷ ಕುಡಿದು ಯುವಕ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ತಮಿಳುನಾಡು ಮೂಲದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಸುಳ್ಯದಲ್ಲಿ ಆಗಸ್ಟ್ 22ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ, ದಂಪತಿ ಮಧ್ಯೆ ಜಗಳ: ಸಾವು
ಪ್ರಾತಿನಿಧಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Aug 23, 2023 | 4:16 PM

Share

ಮಂಗಳೂರು, ಆಗಸ್ಟ್​ 23: ಲೈವ್ ವಿಡಿಯೋದಲ್ಲಿ ವಿಷ ಕುಡಿದು ಯುವಕ ಆತ್ಮಹತ್ಯೆಗೆ (suicide) ಯತ್ನಿಸಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿರುವ ಯುವಕ. ಸದ್ಯ ಅಬ್ದುಲ್ ನಾಸಿರ್​ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಿದ್ದು, ಸ್ಥಿತಿ ಗಂಭೀರವಾಗಿದೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಬ್ಯಾರಿ ಭಾಷೆಯಲ್ಲಿ ಯುವಕ ವಿಡಿಯೋ ಮಾಡಿದ್ದು,  ಅದ್ರಾಮ ಮತ್ತು ಅವನ ಕುಟುಂಬಸ್ಥರೇ ಸಾವಿಗೆ ಕಾರಣವೆಂದು ಹೇಳಿದ್ದಾನೆ.

ಆತ್ಮಹತ್ಯೆಗೆ ಯತ್ನಿಸಿದ ಅಬ್ದುಲ್ ನಾಸಿರ್​​, ಅದ್ರಾಮ ಎನ್ನುವವರ ಮನೆಯಲ್ಲಿ ಕಾರು ಚಾಲಕನಾಗಿದ್ದ. ಅವರ ಮನೆಯ ಹೆಣ್ಣಿನ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಹಲ್ಲೆ ನಡೆಸಿದ್ದಾಗಿ ಆತ ಆರೋಪ ಮಾಡಿದ್ದಾನೆ. ನನಗೆ ಯಾವುದೇ ಹುಡುಗಿಯ ಸಂಬಂಧ ಇಲ್ಲ ಎಂದು ಹೇಳಿದ್ದು, ಜೊತೆಗಿದ್ದ ನಾಲ್ವರನ್ನು ತೋರಿಸಿ ನೇಣಿಗೆ ಶರಣಾಗುತ್ತೇನೆಂದು ಹೇಳಿ ವಿಡಿಯೋ ಬಂದ ಮಾಡಲಾಗಿದೆ.

ದಂಪತಿ ಮಧ್ಯೆ ಜಗಳ: ಸಾವು

ಸುಳ್ಯ: ತಮಿಳುನಾಡು ಮೂಲದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಸುಳ್ಯ ತಾಲೂಕಿನ ಎಲಿಮಲೆ ತೋಟದಲ್ಲಿ ಆಗಸ್ಟ್ 22ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಿವಕುಮಾರ ಅಲಿಯಾಸ್​ ರಾಜನ್​ (54), ಮುತ್ತುಲಕ್ಷ್ಮೀ (47) ಮೃತ ದಂಪತಿಗಳು. ಕಳೆದ ಕೆಲವು ವರ್ಷಗಳಿಂದ ದಂಪತಿ ದೇವಚಳ್ಳ ಗ್ರಾಮದ ಗುಡ್ಡದಲ್ಲಿ ರಬ್ಬರ್ ಟ್ಯಾಪಿಂಗ್​ ಕಾರ್ಯದಲ್ಲಿ ತೊಡಗಿದ್ದರು.  ಅಲ್ಲಿಯೇ ಭೂಮಿಯನ್ನು ಸಹ ಖರೀದಿಸಿದ್ದರು.

ಇದನ್ನೂ ಓದಿ: ಬೆಂಗಳೂರು: ಸಿಸಿಬಿ ಎಚ್ಚರಿಕೆ ನೀಡಿದ ಮೇಲೂ ಬಾಲ ಬಿಚ್ಚಿದ ರೌಡಿಶೀಟರ್ಸ್​​​​​​​ ಸೈಕಲ್​ ರವಿ, ಬೇಕರಿ ರಘು; ಪ್ರಕರಣ ದಾಖಲು

ಸೋಮವಾರ ರಾತ್ರಿ ದಂಪತಿ ಮಧ್ಯೆ ಜಗಳ ನಡೆದಿದೆ. ಸುಳ್ಯದಲ್ಲಿ ವಾಸವಿದ್ದ ತಮ್ಮ ಮಗಳಿಗೆ ಈ ಕುರಿತಾಗಿ ತಾಯಿ ಮುತ್ತುಲಕ್ಷ್ಮೀ ಹೇಳಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಮನನೊಂದ ರಾಜನ್ ಮೊದಲು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಕಂಡ ಪತ್ನಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಂಡ್ಯ: ಸ್ನೇಹಿತರ ದಿನವೇ ಕುಚಿಕು ಗೆಳಯನ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಗಳ ಬಂಧನ

ದಂಪತಿಗೆ ಒಟ್ಟು ಮೂವರು ಮಕ್ಕಳಿದ್ದು, ಮಗ ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾನೆ. ಇಬ್ಬರೂ ಹೆಣ್ಣುಮಕ್ಕಳಿ ಮದುವೆ ಆಗಿದೆ. ದಂಪತಿಗಳು ಸುಳ್ಯದಲ್ಲಿ ವಾಸವಾಗಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ