AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಲಾಡ್ಜ್​ ರೂಮ್​ನಲ್ಲಿ ಬೆಡ್​ಗೆ ಬೆಂಕಿ ತಗುಲಿ ವ್ಯಕ್ತಿ ಸಜೀವದಹನ!

ಲಾಡ್ಜ್​ ರೂಮ್​ನಲ್ಲಿ ಬೆಡ್​ಗೆ ಬೆಂಕಿ ತಗುಲಿ ವ್ಯಕ್ತಿಯೋರ್ವ ಸಜೀವ ದಹನವಾಗಿರುವ ಘಟನೆ ಮಂಗಳೂರಿನ ಕಂಕನಾಡಿಯ ರೆಸಿಡೆನ್ಸಿ ಗೇಟ್ ಲಾಡ್ಜ್​ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳಬೇಕೆಂದೇ ತಾವೇ ಬೆಂಕಿಹಚ್ಚಿಕೊಂಡಿದ್ದಾರಾ? ಅಥವಾ ಸಿಗರೇಟ್​ನಿಂದ ಏನಾದರೂ ಬೆಡ್​ಗೆ ಬೆಂಕಿ ತಗುಲಿದ್ಯಾ? ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿವೆ.

ಮಂಗಳೂರು: ಲಾಡ್ಜ್​ ರೂಮ್​ನಲ್ಲಿ ಬೆಡ್​ಗೆ ಬೆಂಕಿ ತಗುಲಿ ವ್ಯಕ್ತಿ ಸಜೀವದಹನ!
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Nov 23, 2023 | 11:35 AM

Share

ಮಂಗಳೂರು, (ನವೆಂಬರ್, 23): ಲಾಡ್ಜ್​ (Lodge)ರೂಮ್​ನಲ್ಲಿ ಬೆಡ್​ಗೆ ಬೆಂಕಿ ತಗುಲಿ ವ್ಯಕ್ತಿಯೋರ್ವ ಸಜೀವ ದಹನವಾಗಿರುವ ಘಟನೆ ಮಂಗಳೂರಿನ (Mangaluru) ಕಂಕನಾಡಿಯ ರೆಸಿಡೆನ್ಸಿ ಗೇಟ್ ಲಾಡ್ಜ್​ನಲ್ಲಿ ನಡೆದಿದೆ. ಬೆಂದೂರವೆಲ್ ನಿವಾಸಿ ಯಶ್​ರಾಜ್ ಸುವರ್ಣ(43) ಎನ್ನುವರು ಸಜೀವ ದಹನವಾಗಿದ್ದಾರೆ. ನವೆಂಬರ್ 15ರಿಂದ ಹೋಟೆಲ್​ನಲ್ಲಿ ವಾಸವಿದ್ದ ಯಶ್​ರಾಜ್, ನಿನ್ನೆ(ನವೆಂಬರ್ 22) ರಾತ್ರಿ ಊಟ ಮುಗಿಸಿ ರೂಮ್​ಗೆ ಬಂದಿದ್ದ. ಬಳಿಕ ಮಧ್ಯರಾತ್ರಿ 12 ಗಂಟೆಗೆ ರೂಮ್​ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಯಶ್​ರಾಜ್ ಸುವರ್ಣ ಸಜೀವ ದಹನವಾಗಿದ್ದಾರೆ. ಆದ್ರೆ, ಬೆಂಕಿ ಹೇಗೆ ಹೊತ್ತಿಕೊಂಡಿದೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.

ನಿನ್ನೆ ರಾತ್ರಿ ಊಟ ಮುಗಿಸಿ ರೂಮ್​ಗೆ ಬಂದಿದ್ದ. ಬಳಿಕ ಮಧ್ಯರಾತ್ರಿ 12 ಗಂಟೆಗೆ ರೂಮ್​ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ರೂಮ್​​ನಿಂದ ಹೊಗೆ ಬರುವುದನ್ನು ಕಂಡು ಲಾಡ್ಜ್​ ಸಿಬ್ಬಂದಿ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದ್ರೆ, ಅಷ್ಟೊತ್ತಿಗಾಗಲೇ ಯಶ್​ರಾಜ್ ಸುವರ್ಣ ಸುಟ್ಟು ಕರಕಲಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಯಶ್​ರಾಜ್ ಸುವರ್ಣ ಆತ್ಮಹತ್ಯೆ ಮಾಡಿಕೊಳ್ಳಬೇಕೆಂದೇ ತಾವೇ ಬೆಂಕಿಹಚ್ಚಿಕೊಂಡಿದ್ದಾರಾ? ಅಥವಾ ಸಿಗರೇಟ್​ನಿಂದ ಏನಾದರೂ ಬೆಡ್​ಗೆ ಬೆಂಕಿ ತಗುಲಿದ್ಯಾ? ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿವೆ. ಈ ಹಿನ್ನೆಲೆಯಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅನುಮಾನಸ್ಪದ ಸಾವು ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

ಕೊಡಗು: ಪೊನ್ನಂಪೇಟೆ ತಾಲೂಕಿನ ಬೆಸಗೂರು ಗ್ರಾಮದ ನಿವಾಸದಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ. ಮನೆಯ ಸಮೀಪದ ಕೀರೆಹೊಳೆಯಲ್ಲಿ ಬಾಚಮಾಡ ಸೌಮ್ಯ(37) ಮೃತದೇಹ ಸಿಕ್ಕಿದೆ. ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:24 am, Thu, 23 November 23

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ