AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಚಿಕನ್​ ಸಾಂಬಾರ್​ಗಾಗಿ ತಂದೆ-ಮಗನ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಕೋಳಿ ಸಾಂಬಾರ್​​​ಗಾಗಿ ಆರಂಭವಾದ ಅಪ್ಪ ಮತ್ತು ಮಗನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಕರ್ನಾಟಕದಲ್ಲಿ ನಡೆದಿದ್ದು, ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

Mangaluru: ಚಿಕನ್​ ಸಾಂಬಾರ್​ಗಾಗಿ ತಂದೆ-ಮಗನ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on:Apr 06, 2023 | 9:37 AM

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ಮನಸ್ಥಾಪಗಳು ಮೂಡಿ, ಅಂತಹ ಕಲಹಗಳು ತಾರಕಕ್ಕೇರಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗುವ ಪ್ರಕರಣಗಳು ಹೆಚ್ಚಾಗುತ್ತಿವೆ. ಆಹಾರದಲ್ಲಿ ಉಪ್ಪು ಕಡಿಮೆಯಾತ್ತು, ಹೆಚ್ಚಾಯ್ತು ಎಂದು ಗಂಡ, ಹೆಂಡ್ತಿಯನ್ನು ಕೊಲೆ ಮಾಡಿರುವ ಪ್ರಕರಣಗಳು ಉಂಟು. ಇಂತಹದ್ದೇ ಪ್ರಕರಣವೊಂದು ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada District) ನಡೆದಿದೆ. ಚಿಕನ್ ಸಾಂಬರ್​ಗಾಗಿ(Chicken Curry) ತಂದೆ ಮಗನನ್ನೇ ಕೊಲೆ ಮಾಡಿರುವ ಘಟನೆ ಮಂಗಳೂರಿನ(Mangaluru) ಸುಳ್ಯ ತಾಲೂಕಿನ ಮೊಗ್ರದಲ್ಲಿ ನಡೆದಿದೆ.

ಇದನ್ನೂ ಓದಿ: ಬೀದರ್: ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬದ ನಡುವೆ ಗಲಾಟೆ, ಕೊಲೆಯಲ್ಲಿ ಅಂತ್ಯ

ಗುತ್ತಿಗಾರಿನ ಮೊಗ್ರದ ಶಿವರಾಮ್ (33) ಕೊಲೆಯಾದ ಮಗ. ಮಂಗಳವಾರ ರಾತ್ರಿ ಶಿವರಾಮನ ಮನೆಯಲ್ಲಿ ಚಿಕನ್​ ಮಾಡಲಾಗಿತ್ತು. ಆದ್ರೆ, ಮಗ ಶಿವರಾಮ ಕೂಲಿ ಕೆಲಸ ಮುಗಿಸಿ, ರಾತ್ರಿ ಮನೆಗೆ ಬರುವಾಗ ಅದು ಖಾಲಿಯಾಗಿತ್ತು. ಮೊದಲೇ ಮದ್ಯದ ಅಮಲಿನಲ್ಲಿದ್ದ ಮಗ ಶಿವರಾಮ ಜಗಳ ಪ್ರಾರಂಭಿಸಿದ್ದ, ನನಗೆ ಈಗಲೇ ಚಿಕನ್  ಮಾಡಿಕೊಡಬೇಕೆಂದು ಮನೆಯಲ್ಲಿ ಸಾಕಿದ್ದ ಕೋಳಿಯನ್ನು ಹಿಡಿಯಲು ಮುಂದಾಗಿದ್ದಾನೆ. ಈ ವೇಳೆ ತಂದೆ ಹಾಗೂ ಮಗನ ನಡುವಿನ ಜಗಳ ಶುರುವಾಗಿದ್ದು, ಅದು ವಿಕೋಪಕ್ಕೆ ತಿರುಗಿ ಕೋಪಗೊಂಡ ತಂದೆ ಶೀನ ಮಗ ಶಿವರಾಮನ ತಲೆಗೆ ದೊಣ್ಣೆಯಿಂದ ಹೊಡೆದಿದ್ದಾನೆ. ಬಲವಾದ ಏಟಿನಿಂದ ತಲೆ ಒಡೆದು ಪುತ್ರ ಶಿವರಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ಶಿವರಾಮ, ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನ ಅಗಲಿದ್ದಾನೆ. ಇನ್ನು ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕೊಲೆ ಆರೋಪಿ ಶೀನನನ್ನ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ದಕ್ಷಿಣ ಕನ್ನಡ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:32 am, Thu, 6 April 23

ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್