AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಿನೊಳಗೆ ಪರಪುರಷನ ಜತೆ ಇರುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ, ಪತಿ ಮಾಡಿದ್ದೇನು?

ಆತ ವಿದೇಶದಲ್ಲಿ ದುಡಿದು ಹೆಂಡತಿ ಮಕ್ಕಳಿಗೆ ಮನೆ ಕಟ್ಟಿಸುತ್ತಿದ್ದ. ಆದ್ರೆ, ತನ್ನ ಪತ್ನಿಗೆ ಪರಸಂಗ ಇದೆ ಎನ್ನುವ ಸಣ್ಣ ಅನುಮಾನ ಆತನಿಗಿತ್ತು. ಇಲ್ಲಿಂದಲೇ ವಿದೇಶಕ್ಕೆ ಗುಸು ಗುಸು ಪಿಸು ಪಿಸು ಕೇಳುತ್ತಿತ್ತು. ಅದೇ ಅನುಮಾನದಿಂದ ವಿದೇಶ ಬಿಟ್ಟು ಊರಿಗೆ ವಾಪಾಸ್ ಆಗಿದ್ದ. ಆದ್ರೆ ಇಲ್ಲಿ ಬಂದ ಎರಡು ವರ್ಷಗಳ ಬಳಿಕ ಪತ್ನಿ ಲವ್ವಿಡವ್ವಿ ಬಟಾಬಯಲಾಗಿದ್ದು, ಪರಪುರಷನ ಜೊತೆ ಇರುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾಳೆ.

ಕಾಡಿನೊಳಗೆ ಪರಪುರಷನ ಜತೆ ಇರುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ, ಪತಿ ಮಾಡಿದ್ದೇನು?
Zeenat And Rafiq
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jul 17, 2025 | 6:30 PM

Share

ಮಂಗಳೂರು, (ಜುಲೈ 17): ಪರಪುರುಷನೊಂದಿಗೆ ಇರುವಾಗಲೇ ರೆಡ್​ ಹ್ಯಾಂಡ್ ಆಗಿಯೇ ಸಿಕ್ಕಿಬಿದ್ದ ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada)  ಜಿಲ್ಲೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ. ಝೀನತ್ ಬೇರೊಬ್ಬರನ ಜೊತೆ ಕಾಡಿನಲ್ಲಿ ಇರುವಾಗಲೇ ಪತಿ ರಫೀಕ್ ಗೆ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ಇದರಿಂದ ಆಕ್ರೋಶಗೊಂಡ ಪತಿ ರಫೀಕ್, ಪತ್ನಿ ಝೀನತಳನ್ನ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಝೀನತ್ ಹಾಗೂ ಗಂಡ ರಫೀಕ್ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ‌ ತೆಕ್ಕಾರು ಗ್ರಾಮದ ಬಾಜಾರು ನಿವಾಸಿಗಳು. 18 ವರ್ಷಗಳ ಹಿಂದೆ ಮದುವೆ ಅಗಿ ಇಬ್ಬರು ಮಕ್ಕಳಿದ್ದರು. ಇನ್ನು ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ರಫೀಕ್, ದುಡಿದ ಹಣವನ್ನು ಮನೆಗೆ ಕಳುಹಿಸುತ್ತಿದ್ದ. ಪತ್ನಿ ಮತ್ತು ಮಕ್ಕಳಿಗಾಗಿ ಒಂದು ಮನೆ ನಿರ್ಮಾಣ ಮಾಡುತ್ತಿದ್ದ. ಆದ್ರೆ ಕಳೆದ ಎರಡು ವರ್ಷದ ಹಿಂದೆ ರಫೀಕ್ ನ ಹೆಂಡತಿ ಅದೇ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷೆಯ ಪತಿ ಆರೀಸ್ ನ ಜೊತೆ ಲವ್ವಿಡವ್ವಿ ಶುರು ಮಾಡಿಕೊಂಡಿದ್ದಾಳೆ ಎನ್ನುವುದು ಕಿವಿಗೆ ಬಿದ್ದಿತ್ತು. ಈ ಸಂಬಂಧ ಗ್ರಾಮದಲ್ಲಿ ಸಾಕಷ್ಟು ಜನರಿಂದ ಇದೇ ಅಭಿಪ್ರಾಯ ಕೇಳಿ ಬಂದಿತ್ತು‌. ಇದನ್ನು ನಂಬದ ರಫೀಕ್ ಸುಮ್ಮನಾಗಿದ್ದ‌.

ಇದು ಪದೇ ಪದೇ ಕೇಳಿ ಬಂದಿದ್ದರಿಂದ ವಿದೇಶದ ಕೆಲಸ ತೊರೆದು ಊರಿಗೆ ವಾಪಾಸ್ ಆಗಿದ್ದ. ಅರ್ದ ಕಟ್ಟಿದ ಮನೆಯಲ್ಲೇ ಹೆಂಡತಿ ಮಕ್ಕಳೊಂದಿಗೆ ವಾಸವಾಗಿದ್ದ. ಅಕ್ರಮ ಸಂಬಂಧ ವಿಚಾರವಾಗಿ ಆಗಾಗ ಗಲಾಟೆ ನಡೆಯುತ್ತಿತ್ತು. ಆಗಾಗ ರಾಜೀ ಪಂಚಾಯತಿ ಕೂಡ ಆಗುತ್ತಿತ್ತು. ಇಂದು ಎಂದಿನಂತೆ ಬೆಳಗ್ಗೆ ಎದ್ದು ಕೆಲಸಕ್ಕೆ ಹೋಗಿದ್ದಾನೆ. ಕೆಲಸಕ್ಕೆ ಹೋದವನು ಆಗಲೇ ವಾಪಾಸ್ ಆಗಿ ನೋಡುವಾಗ ಝೀನತ್ ಮನೆಯಲ್ಲಿರಲಿಲ್ಲ. ಬೀಡಿ ಕಟ್ಟುತ್ತಿದ್ದ ಝೀನತ್ ಅಂಗಡಿಗೆ ಬೀಡಿ ಕೊಡಲು ಹೋಗಿದ್ದಾಳೆಂದು ವಿಚಾರಿಸಿದಾಗ ಆಕೆ ಅಲ್ಲಿರಲಿಲ್ಲ. ಆಗ ವಿಚಾರ ಗೊತ್ತಾಗಿ ಅರ್ಧ ಕಿಲೋಮೀಟರ್ ದೂರದಲ್ಲಿರೋ ಕಾಡಿನ ಬಳಿ ಹೋಗಿದ್ದಾನೆ. ಆಗ ಅಲ್ಲಿ ಆರೀಸ್ ಹಾಗೂ ಝೀನತ್ ಒಟ್ಟಿಗೆ ಇರುವುದನ್ನು ನೋಡಿದ್ದಾನೆ. ಅಲ್ಲಿಂದ ಅವರನ್ನು ಅಟ್ಟಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಆದ್ರೆ, ಅವರು ಆಟೋದಲ್ಲಿ ಪರಾರಿಯಾಗಿದ್ದಾರೆ‌. ನಂತರ ಮನೆಗೆ ಬಂದು ಝೀನತ್ ಜೊತೆ ಗಲಾಟೆ ಮಾಡಿದ್ದು, ಈ ವೇಳೆ ಝೀನತ್ ಳಿಗೆ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ.

ಸ್ಥಳಕ್ಕೆ ಧಾವಿಸಿದ ಉಪ್ಪಿನಂಗಡಿ ಪೊಲೀಸರು ಆರೋಪಿ ರಫೀಕ್ ನನ್ನು ಬಂಧಿಸಿದ್ದಾರೆ. ಇತ್ತ ಅರೀಸ್ ಊರಿನಿಂದ ಪರಾರಿಯಾಗಿದ್ದಾನೆ. ಊರಿನವರ ಅಭಿಪ್ರಾಯದ ಪ್ರಕಾರ ರಫೀಕ್ ಒಳ್ಳೆ ಮನುಷ್ಯನಾಗಿದ್ದ. ಆರೀಸ್ ನಿಂದಾಗಿ ಸಂಸಾರ ಒಡೆದುಹೋಗಿತ್ತು. ಈಗ ಎರಡು ಮಕ್ಕಳು ಅನಾಥರಾಗಿದ್ದಾರೆ‌. ಇದರಿಂದ ಆರೀಸ್ ಗೆ ನಾವೇ ಪಾಠ ಕಲಿಸುತ್ತೇವೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ