AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಪತ್ನಿಯ ಕತ್ತು ಹಿಸುಕಿ ಬಾವಿಗೆ ಎಸೆದ ಪತಿ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಾಚಾರೆ ಎಂಬಲ್ಲಿ ನಿನ್ನೆ ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಆದರೆ, ಗಂಡ ಸುಧಾಕರನಿಗೆ ಬೇರೊಂದು ಯುವತಿ ಜೊತೆ ಅಕ್ರಮ ಸಂಬಂಧ ಇರುವ ವಿಚಾರ ತಿಳಿದು ದಂಪತಿ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ ನಡೆದ ಜಗಳದ ವೇಳೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವುದು ಇದೀಗ ತಿಳಿದುಬಂದಿದೆ.

ಮಂಗಳೂರು: ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಪತ್ನಿಯ ಕತ್ತು ಹಿಸುಕಿ ಬಾವಿಗೆ ಎಸೆದ ಪತಿ
ಬಾವಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ, ಪತಿಯೇ ಪತ್ನಿಯನ್ನು ಕೊಲೆ ಮಾಡಿದ ವಿಚಾರ ಬೆಳಕಿಗೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: Rakesh Nayak Manchi|

Updated on: Nov 04, 2023 | 2:53 PM

Share

ಮಂಗಳೂರು, ನ.4: ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಾಚಾರೆ ಎಂಬಲ್ಲಿ ನಿನ್ನೆ ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಆದರೆ, ಗಂಡ ಸುಧಾಕರನಿಗೆ ಬೇರೊಂದು ಯುವತಿ ಜೊತೆ ಅಕ್ರಮ ಸಂಬಂಧ ಇರುವ ವಿಚಾರ ತಿಳಿದು ದಂಪತಿ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ ನಡೆದ ಜಗಳದ ವೇಳೆ ಪತಿಯೇ ಪತ್ನಿಯನ್ನು ಕೊಲೆ (Murder) ಮಾಡಿರುವುದು ಇದೀಗ ತಿಳಿದುಬಂದಿದೆ.

ಬೆಳಾಲು ಗ್ರಾಮದ ಮಾಚಾರಿನ ಜ್ಯೋತಿ ನಗರದಲ್ಲಿನ ಮನೆಯಲ್ಲಿರುವ ಬಾವಿಯಲ್ಲಿ ಶಶಿಕಲಾ (25) ಅವರ ಶವ ಪತ್ತೆಯಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಹಾವೇರಿ: ಅತ್ತಿಗೆ, ಇಬ್ಬರು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ ಮೈದುನ ಪರಾರಿ

ಶಶಿಕಲಾ ಮತ್ತು ಸುಧಾಕರ್ ಕಳೆದ 7 ವರ್ಷಗಳ ಹಿಂದೆ ಪ್ರೀತಿ ಮಾಡಿ ಮದುವೆಯಗಿದ್ದರು. ದಾಂಪತ್ಯ ಜೀವನಕ್ಕೆ ಸಾಕ್ಷಿಯಾಗಿ 6 ವರ್ಷದ ಮಗಳು ಕೂಡ ಇದ್ದಾಳೆ. ಆದರೆ, ಸುಧಾಕರ್​ಗೆ ಬೇರೊಂದು ಯುವತಿಯ ಜೊತೆ ಅಕ್ರಮ ಸಂಬಂಧ ಇರುವುದು ಗೊತ್ತಾಗಿದೆ. ಇದೇ ವಿಚಾತವಾಗಿ ದಂಪತಿ ನಡುವೆ ಜಗಳ ನಡೆಯುತ್ತಿತ್ತು.

ಅಲ್ಲದೆ, ನಿನ್ನೆ ಕೂಡ ಜಗಳ ನಡೆದಿದೆ. ಇದು ತಾರಕಕ್ಕೇರಿ ಸುಧಾಕರ್, ಪತ್ನಿ ಶಶಿಕಲಾಳ ಕುತ್ತಿಗೆ ಹಿಸುಕಿದ್ದಾನೆ. ಪರಿಣಾಮ ಆಕೆ ಪ್ರಜ್ಞೆ ತಪ್ಪಿ ಕೆಳಗೆ ಬಿದಿದ್ದಾಳೆ. ಬಳಿಕ ಹೆಂಡತಿಯನ್ನು ಬಾವಿಗೆ ಎಸೆದು ಕೊಲೆ ಮಾಡಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ