ಮಂಗಳೂರು: ಲವರ್ ಔಟಿಂಗ್ ಬಂದಿಲ್ಲವೆಂದು ಪಿಜಿಗೆ ಕಲ್ಲೆಸೆದ ಯುವಕ, ಸಾರ್ವಜನಿಕರಿಂದ ಧರ್ಮದೇಟು

ತನ್ನ ಪ್ರಿಯತಮೆ ಔಟಿಂಗ್ ಬಂದಿಲ್ಲವೆಂದು ಯುವಕನೊಬ್ಬ ಆಕೆ ಕೆಲಸ ಮಾಡುತ್ತಿದ್ದ ಪಿಜಿಗೆ ಕಲ್ಲು ತೂರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸೆಂಟ್ ಆಗ್ನೇಸ್ ಕಾಲೇಜು ಬಳಿ ನಡೆದಿದೆ. ಗಾಜು ಪುಡಿಯಾಗಿದ್ದರಿಂದ ಸಾರ್ವಜನಿಕರು ಯುವಕನಿಗೆ ಧರ್ಮದೇಟು ನೀಡಿದ್ದಾರೆ.

ಮಂಗಳೂರು: ಲವರ್ ಔಟಿಂಗ್ ಬಂದಿಲ್ಲವೆಂದು  ಪಿಜಿಗೆ ಕಲ್ಲೆಸೆದ ಯುವಕ, ಸಾರ್ವಜನಿಕರಿಂದ ಧರ್ಮದೇಟು
ಔಟಿಂಗ್ ಬಂದಿಲ್ಲವೆಂದು ಲವರ್ ಕೆಲಸ ಮಾಡುತ್ತಿದ್ದ ಪಿಜಿಗೆ ಕಲ್ಲು ತೂರಿದ ಯುವಕನಿಗೆ ಧರ್ಮದೇಟು
Edited By: Rakesh Nayak Manchi

Updated on: Nov 03, 2023 | 9:40 AM

ಮಂಗಳೂರು, ನ.3: ತನ್ನ ಲವರ್ ಔಟಿಂಗ್ ಬರಲಿಲ್ಲ ಅಂತಾ ಆಕೆ ಕೆಲಸ ಮಾಡುತ್ತಿದ್ದ ಕಟ್ಟಡಕ್ಕೆ ಯುವಕನೊಬ್ಬ ಕಲ್ಲು ತೂರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ (Mangaluru) ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಕಲ್ಲೆಸೆತದಿಂದ ಕಟ್ಟಡದ ಗಾಜು ಪುಡಿಯಾಗಿದ್ದರಿಂದ ಸಾರ್ವಜನಿಕರು ಯುವಕನಿಗೆ ಧರ್ಮದೇಟು ನೀಡಿದ್ದಾರೆ.

ಸುಳ್ಯ ನಿವಾಸಿ ವಿವೇಕ್ (18) ಸುರೇಶ್ ಶೆಟ್ಟಿ ಎಂಬುವವರ ಪಿಜಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದ. ಅದರಂತೆ ನಿನ್ನೆ (ನವೆಂಬರ್ 3) ಸಂಜೆ ಔಟಿಂಗ್​ಗೆ ಬರುವಂತೆ ಕರೆ ಮಾಡಿದ್ದಾನೆ.

ಇದನ್ನೂ ಓದಿ: ಮಂಗಳೂರು: ತಾಯಿಯ ಮೇಲೆಯೇ ಅತ್ಯಾಚಾರಕ್ಕೆ ಯತ್ನ; ವಿರೋಧಿಸಿದಕ್ಕೆ ಕತ್ತು ಹಿಸುಕಿ ಕೊಂದ ಮಗ

ಆದರೆ, ಯುವತಿ ಔಟಿಂಗ್ ಬರಲು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಪ್ರಿಯಕರ ವಿವೇಕ್, ಆಕೆ ಕೆಲಸ ಮಾಡುತ್ತಿದ್ದ ಪಿಜಿಗೆ ಕಲ್ಲು ಎಸೆದಿದ್ದಾನೆ. ಘಟನೆಯಲ್ಲಿ ಕಟ್ಟಡದ ಗಾಜು ಪುಡಿಯಾಗಿದ್ದು, ಸಾರ್ವಜನಿಕರು ವಿವೇಕ್​ನನ್ನು ಹಿಡಿದು ಥಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us