AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರಗೋಡು ಹನುಮ ಧ್ವಜ ತೆರವು ವಿವಾದ: ರಾಜ್ಯಾದ್ಯಂತ ಹನುಮ ಧ್ವಜ ಅಭಿಯಾನ ನಡೆಸಲು ಬಜರಂಗದಳ ಕರೆ

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರು ಗ್ರಾಮದ 108 ಅಡಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಜರಂಗದಳ ರಾಜ್ಯಾದ್ಯಂತ ಹನುಮ ಧ್ವಜ ಅಭಿಯಾನ ನಡೆಸಲು ನಿರ್ಧರಿಸಿದೆ. ಇಂದಿನಿಂದ (ಫೆ.02) ರಿಂದ ಫೆಬ್ರವರಿ 9ರ ವರೆಗೆ ಅಭಿಯಾನ ನಡೆಯಲಿದೆ.

ಕೆರಗೋಡು ಹನುಮ ಧ್ವಜ ತೆರವು ವಿವಾದ: ರಾಜ್ಯಾದ್ಯಂತ ಹನುಮ ಧ್ವಜ ಅಭಿಯಾನ ನಡೆಸಲು ಬಜರಂಗದಳ ಕರೆ
ಬಜರಂಗದಳ ಮುಖಂಡ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Feb 02, 2024 | 12:46 PM

Share

ಮಂಗಳೂರು, ಫೆಬ್ರವರಿ 02: ಮಂಡ್ಯ (Mandya) ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜವನ್ನು (Hanuman Flag) ಸರ್ಕಾರ ತೆರವುಗೊಳಿಸಿದನ್ನು ವಿರೋಧಿಸಿ ಬಜರಂಗದಳ (Bajarangdal) ರಾಜ್ಯಾದ್ಯಂತ ಹನುಮ ಧ್ವಜ ಅಭಿಯಾನ ನಡೆಸಲು ನಿರ್ಧರಿಸಿದೆ. ಇಂದಿನಿಂದ (ಫೆ.02) ರಿಂದ ಫೆಬ್ರವರಿ 9ರ ವರೆಗೆ ಅಭಿಯಾನ ನಡೆಯಲಿದೆ. ಫೆಬ್ರವರಿ 9 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಕಚೇರಿ ಎದುರು ಹನುಮಾನ್ ಚಾಲೀಸಾ (Hanuman Chalisa) ಪಠಿಸುವಂತೆ ಕರೆ ನೀಡಿದೆ.

ಅಭಿಯಾನದ ಕುರಿತು ಟಿ.ವಿ9 ಡಿಜಿಟಲ್​ನೊಂದಿಗೆ ಮಾತನಾಡಿದ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್, ಮಂಡ್ಯದ ಘಟನೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ನೋವಾಗಿದೆ. ಸಮಾಜಕ್ಕೆ ವಿಶ್ವಾಸ ತುಂಬಿಸಲು ಧಾರ್ಮಿಕ ಕೇಂದ್ರಗಳಲ್ಲಿ ಹನುಮಧ್ವಜ ಅಭಿಯಾನ ನಡೆಯಲಿದೆ. ಇಂದಿನಿಂದ ಆರಂಭವಾಗಿ ಫೆಬ್ರವರಿ 9ರ ವರೆಗೆ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.

ಕರ್ನಾಟಕದ ಎಲ್ಲಾ ಮನೆ-ಮನೆಗಳಲ್ಲಿ, ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ಹನುಮ ಧ್ವಜ ಹಾಕುವಂತೆ ವಿನಂತಿಸುತ್ತೇವೆ. ಫೆಬ್ರವರಿ 9 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ, ಧರಣಿ ಸತ್ಯಾಗ್ರಹ ನಡೆಯಲಿದೆ. ಕೆರಗೋಡು ಗ್ರಾಮದಲ್ಲಿ ಮತ್ತೆ ಅದೇ ಜಾಗದಲ್ಲಿ ಹನುಮ ಧ್ವಜ ಹಾಕಲು ಆಗ್ರಹಿಸಿ ಈ ಧರಣಿ ನಡೆಯಲಿದೆ. ಅದೇ ಜಾಗದಲ್ಲಿ ಹನುಮ ಧ್ವಜ ಹಾಕದಿದ್ದರೆ ಅಭಿಯಾನ ಮುಂದುವರೆಯುತ್ತೆ ಎಂದು ಎಚ್ಚರಿಕೆ ಕೊಟ್ಟರು.

ಇದನ್ನೂ ಓದಿ: ಕೆರಗೋಡುವಿನ ಎಲ್ಲ ಮನೆಗಳ ಮೇಲೆ ಹನುಮ ಧ್ವಜ ಹಾರುತ್ತೆ, ಸರ್ಕಾರಕ್ಕೆ ತಾಕತ್ತಿದ್ದರೆ ತಡೆಯಲಿ: ಮಂಡ್ಯ ಬಿಜೆಪಿ ಘಟಕ ಅಧ್ಯಕ್ಷ

ಏನಿದು ಹನುಮ ಧ್ವಜ ವಿವಾದ

ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನಪಿಗಾಗಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರು 108 ಅಡಿ ಎತ್ತರ ಧ್ವಜಸ್ತಂಭದ ಮೇಲೆ ಹನುಮ ಧ್ವಜ ಹಾರಿಸಿದ್ದರು. ಧ್ವಜ ಹಾರಿಸಿದ್ದ ಜಾಗ ಗ್ರಾಮ ಪಂಚಾಯಿತಿಗೆ ಸೇರಿದ್ದಾಗಿದೆ. ಅಲ್ಲದೇ ಧ್ವಜ ಹಾರಿಸಿದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿ ತಾಲೂಕು ಪಂಚಾಯಿತಿಗೆ ದೂರು ನೀಡಿದ್ದರು. ದೂರಿನ್ವಯ ತಾಲೂಕು ಪಂಚಾಯಿತಿ ಅಧಿಕಾರಿಗಳು ಧ್ವಜವನ್ನು ತೆರವುಗೊಳಿಸಲು ಬಂದಿದ್ದರು. ಇದಿಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು.

ಬಳಿಕ ಪೊಲೀಸರು ಗ್ರಾಮಕ್ಕೆ ಆಗಮಿಸಿ ಧ್ವಜ ತೆರವುಗೊಳಿಸಲು ಮುಂದಾದರು. ಆಗ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಲು ಪೊಲೀಸರು 144 ಸೆಕ್ಷನ್​ ಜಾರಿ ಮಾಡಿದ್ದರು. 144 ಸೆಕ್ಷನ್​ ಜಾರಿಯಾದ ಬಳಿಕವೂ ಪ್ರತಿಭಟನಾಕಾರರು ಸ್ಥಳದಿಂದ ತೆರಳದ ಹಿನ್ನೆಲೆಯಲ್ಲಿ ಲಾಠಿ ಜಾರ್ಜ್​ ಮಾಡಲಾಯಿತು. ಕೊನೆಗೂ ಪೊಲೀಸರು ಧ್ವಜ ತೆರವುಗೊಳಿಸಿದರು.

ಇದಾದ ಬಳಿಕ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಜನವರಿ 29 ರಂದು ಹನುಮ ಧ್ವಜ ಇಳಿಸಿದ್ದನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್​ ನಾಯಕರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಕೆರಗೋಡಿನಿಂದ ಮಂಡ್ಯದವರೆಗು ಪಾದಯಾತ್ರೆ ನಡೆಸಿದರು. ಈ ಹಿನ್ನೆಲೆಯಲ್ಲಿ ಬಜರಂಗದಳ ರಾಜ್ಯಾದ್ಯಂತ ಹನುಮ ಧ್ವಜ ಅಭಿಯಾನ ನಡೆಸಲು ನಿರ್ಧರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು