AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಮೀನುಗಾರರ ರಕ್ಷಣೆಗೆ ಕಡಲಿಗೆ ಇಳಿಯಲಿದೆ ಬೋಟ್ ಆಂಬ್ಯುಲೆನ್ಸ್! ಸರ್ಕಾರದ ಯೋಜನೆಗೆ ಕಾಯದೇ ಬೋಟ್ ನಿರ್ಮಾಣ

ವಿಧಾನಸಭಾ ಚುನಾವಣೆ ಸಂದರ್ಭ ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯ ಕರಾವಳಿಯ ಮೀನುಗಾರರ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ಒದಗಿಸುವ ಭರವಸೆ ನೀಡಿತ್ತು. ಆದ್ರೆ, ಅದು ಭರವಸೆಯಾಗಿಯೇ ಉಳಿದಿದ್ದು ಇದೀಗ ಮೀನುಗಾರರು ಸರ್ಕಾರದ ಯೋಜನೆಗೆ ಕಾಯದೆ ತಾವೇ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ.

ಮಂಗಳೂರು: ಮೀನುಗಾರರ ರಕ್ಷಣೆಗೆ ಕಡಲಿಗೆ ಇಳಿಯಲಿದೆ ಬೋಟ್ ಆಂಬ್ಯುಲೆನ್ಸ್! ಸರ್ಕಾರದ ಯೋಜನೆಗೆ ಕಾಯದೇ ಬೋಟ್ ನಿರ್ಮಾಣ
ಬೋಟ್​ ಆಂಬ್ಯುಲೆನ್ಸ್​
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Dec 19, 2023 | 7:21 PM

Share

ದಕ್ಷಿಣ ಕನ್ನಡ, ಡಿ.19: ಚುನಾವಣೆ ಬಂದಾಗ ವಿವಿಧ ಆಶ್ವಾಸನೆಗಳನ್ನು ನೀಡುವ ರಾಜಕೀಯ ಪಕ್ಷಗಳು, ಚುನಾವಣೆ ಮುಗಿದ ಬಳಿಕ ಅದನ್ನು ಮರೆತು ಬಿಡುತ್ತವೆ. ಅದೇ ರೀತಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯ ಕರಾವಳಿಯ ಮೀನುಗಾರರ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್(Boat Ambulance)  ಒದಗಿಸುವ ಭರವಸೆ ನೀಡಿತ್ತು. ಆದ್ರೆ, ಅದು ಭರವಸೆಯಾಗಿಯೇ ಉಳಿದಿದ್ದು, ಇದೀಗ ಮೀನುಗಾರರು ಸರ್ಕಾರದ ಯೋಜನೆಗೆ ಕಾಯದೆ ತಾವೇ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ.

ಬೋಟ್ ಆಂಬ್ಯುಲೆನ್ಸ್ ನಿರ್ಮಾಣ ಕಾರ್ಯಕ್ಕೆ ಮುಂದಾದ ಮೀನುಗಾರರು; ಏನೇನಿದೆ ವ್ಯವಸ್ಥೆ

ಮಂಗಳೂರಿನ ಉಳ್ಳಾಲ ವಲಯದ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಂಘದವರು ತಾವೇ ಆಂಬ್ಯುಲೆನ್ಸ್ ಬೋಟ್ ನಿರ್ಮಾಣದ ಕಾರ್ಯವನ್ನು ಮಾಡುತ್ತಿದ್ದಾರೆ. ಈಗಾಗಲೇ ಈ ಎಮರ್ಜೆನ್ಸಿ ಬೋಟ್ ತಯಾರಾಗುತ್ತಿದ್ದು, ಇದರಲ್ಲಿ ಆಕ್ಸಿಜನ್ ವ್ಯವಸ್ಥೆ, ವೈದ್ಯಕೀಯ ಉಪಕರಣಗಳು, ಲೈಫ್ ಜಾಕೆಟ್ ಸಹಿತ ಜೀವ ಉಳಿಸಲು ಬೇಕಾದ ತುರ್ತು ಚಿಕಿತ್ಸಾ ವ್ಯವಸ್ಥೆ ಇರಲಿದೆ.

ಇದನ್ನೂ ಓದಿ:ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಸಮುದ್ರಪಾಲು

ಸರಕಾರ ಬೋಟ್ ಆಂಬ್ಯುಲೆನ್ಸ್ ಬೇಡಿಕೆ ಈಡೇರಿಸುವುದನ್ನು ಕಾಯದೇ ಸ್ವತಃ ನಿರ್ಮಾಣ

ಇತ್ತಿಚೇಗೆ ಬೇಂಗ್ರೆಯ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಮಗುಚಿ ಬಿದ್ದಿತ್ತು. ಈ ಸಂದರ್ಭ ಬೋಟ್‌ನಲ್ಲಿದ್ದ ಆರು ಮೀನುಗಾರರ ರಕ್ಷಣೆಗೆ ಯಾವುದೇ ವ್ಯವಸ್ಥೆಯಿರಲಿಲ್ಲ. ಎಲ್ಲ ಮೀನುಗಾರಿಕಾ ಬೋಟ್‌ಗಳಲ್ಲಿ ಬಲೆ ಹಾಗೂ ಇತರ ಪರಿಕರಗಳು ಇದ್ದುದರಿಂದ ಮೀನುಗಾರರ ಜೀವಕ್ಕೆ ಅಪಾಯ ಎದುರಾಗಿತ್ತು. ಕೊನೆಗೆ ಖಾಲಿಯಿರುವ ದೋಣಿಯೊಂದು ಸಿಕ್ಕಿದ್ದು, ಅದನ್ನು ಬಳಸಿ ಆರು ಜೀವಗಳನ್ನು ರಕ್ಷಿಸಲಾಗಿತ್ತು. ಹೀಗಾಗಿ ಈ ಅವಘಡದ ಬಳಿಕ ಸಂಘವು, ತಮ್ಮದೇ ಆದ ಬೋಟ್ ಆಂಬ್ಯುಲೆನ್ಸ್ ಯೋಜನೆಯನ್ನು ರೂಪಿಸಿತು. ಈ ಬೋಟ್ ಆಂಬ್ಯುಲೆನ್ಸ್ ಮೀನುಗಾರರಿಗೆ ತುರ್ತು ಸಂದರ್ಭದಲ್ಲಿ ಉಚಿತ ಸೇವೆಯನ್ನು ನೀಡಲಿದೆ. ಈ ಮೂಲಕ ಸರಕಾರ ಬೋಟ್ ಆಂಬ್ಯುಲೆನ್ಸ್ ಬೇಡಿಕೆ ಈಡೇರಿಸುವುದನ್ನು ಕಾಯದೇ ಮೀನುಗಾರರ ಸಂಘ ಸ್ವಂತಿಕೆಯನ್ನು ಮೆರೆದಿದೆ.

ಉಳ್ಳಾಲ ಜೆಟ್ಟಿಯನ್ನು ಕೇಂದ್ರವಾಗಿರಿಸಿ ಈ ಎಮರ್ಜೆನ್ಸಿ ಬೋಟ್ ಕಾರ್ಯಚರಣೆ ನಡೆಸಲಿದೆ. ಇದಕ್ಕೆ ಒಟ್ಟು 15 ಲಕ್ಷ ಖರ್ಚಾಗಲಿದ್ದು, ಇದನ್ನು ಮೀನುಗಾರರೇ ಭರಿಸಲಿದ್ದಾರೆ. ಕಾರ್ಯಾಚರಣೆ ನಡೆಸುವುದಕ್ಕೆ 15 ಜನರ ತಂಡವು ರೆಡೆಯಾಗಿದ್ದು, ಇದರಲ್ಲಿ ನುರಿತ ಈಜುಗಾರರು ಸೇರಿದಂತೆ ಪ್ರಾಥಮಿಕ ಚಿಕಿತ್ಸೆ ನೀಡಲು ನುರಿತ ವ್ಯಕ್ತಿಗಳು ಇರಲಿದ್ದಾರೆ. ಒಟ್ಟಿನಲ್ಲಿ ಮೀನುಗಾರರೇ ಸೇರಿ ಬೋಟ್ ಆಂಬ್ಯುಲೆನ್ಸ್ ರೆಡಿ ಮಾಡಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾಗಿರುವುದು ನಿಜಕ್ಕೂ ಪ್ರಶಂಶನೀಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!