ಮಂಗಳೂರು: ಹೊಸ ವರ್ಷಾಚರಣೆ​ ಪಾರ್ಟಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ಬಂಧನ

ಹೊಸ ವರ್ಷಾಚರಣೆ​ ಪಾರ್ಟಿ(New Year Party) ಹಿನ್ನಲೆ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್​ನನ್ನು ಮಂಗಳೂರು(Mangalore) ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ಹೊರವಲಯದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಬಳಿ ನಡೆದಿದೆ.

ಮಂಗಳೂರು: ಹೊಸ ವರ್ಷಾಚರಣೆ​ ಪಾರ್ಟಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ಬಂಧನ
ಬಂಧಿತ ಆರೋಪಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Dec 30, 2023 | 9:00 PM

ದಕ್ಷಿಣ ಕನ್ನಡ, ಡಿ.30: ಹೊಸ ವರ್ಷಾಚರಣೆ​ ಪಾರ್ಟಿ(New Year Party) ಹಿನ್ನಲೆ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್​ನನ್ನು ಮಂಗಳೂರು(Mangalore) ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ಹೊರವಲಯದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಬಳಿ ನಡೆದಿದೆ. ಮೊಹಮ್ಮದ್ ರಮೀಜ್(33) ಅಲಿಯಾಸ್ ಲೆಮನ್ ಟೀ ರಮೀಜ್ ಬಂಧಿತ ಆರೋಪಿ. ಇತ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ನಿವಾಸಿಯಾಗಿದ್ದು, ಡ್ರಗ್ಸ್ ಮಾರಾಟ ಮಾಡುತ್ತಿದ್ದಾಗ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇತನಿಂದ 5 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಆನೇಕಲ್: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಆನೇಕಲ್ ಪೊಲೀಸರು ಬಂಧಿಸಿದ್ದಾರೆ. ಆನೇಕಲ್ ತಾಲ್ಲೂಕಿನ ಹಾಲ್ದೇನಹಳ್ಳಿ ನಿವಾಸಿಯಾಗಿರುವ ಆರೋಪಿ ಪೃಥ್ವಿ(23) ಬಂಧಿತ ಆರೋಪಿ. ಇತನಿಂದ 550 ಗ್ರಾಂ ಗಾಂಜಾವ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಆನೇಕಲ್ ಪುರಸಭೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಇತ, ಕರ್ಪೂರು ಗೇಟ್ ಬಳಿಯ ರೈಲ್ವೆ ಬ್ರಿಡ್ಜ್ ಬಳಿ ಕಾಲೇಜು ವಿಧ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಈ ಹಿಂದೆ ಗಾಂಜಾ ಪ್ರಕರಣದಲ್ಲಿ ಬಂಧಿಯಾಗಿ ಜೈಲಿಗೆ ಹೋಗಿದ್ದರೂ ಬುದ್ದಿ ಕಲಿಯದೆ, ಪುನಃ ಗಾಂಜಾ ಮಾರಾಟವನ್ನೇ ಕಾಯಕ ಮಾಡಿಕೊಂಡಿದ್ದ. ಇಂದು ಖಚಿತ ಮಾಹಿತಿ ಮೇರೆಗೆ ಆನೇಕಲ್ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ನೆಲಮಂಗಲ: ಹೊಸ ವರ್ಷಾಚರಣೆಗೆ ಡ್ರಗ್ಸ್ ಪೂರೈಸಲು ಮುಂದಾಗಿದ್ದ ನಾಲ್ವರು ಪೊಲೀಸ್ ಬಲೆಗೆ

ಗಾಂಜಾ ಮಾರಾಟ ಜಾಲದ ಮೇಲೆ ಹದ್ದಿನ ಕಣ್ಣಿಟ್ಟ ಪೊಲೀಸರು

ಧಾರವಾಡ: ನಾಳೆ ನ್ಯೂ ಇಯರ್ ಪಾರ್ಟಿ ಹಿನ್ನೆಲೆ ಗಾಂಜಾ ಮಾರಾಟ ಜಾಲದ ಮೇಲೆ ಧಾರವಾಡ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಅದರಂತೆ ಇಂದು ಇಬ್ಬರು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಧಾರವಾಡದ ಸಿಎಸ್‌ಐ ಕಾಲೇಜ್ ರಸ್ತೆ ಬಳಿ ನಿಂತು ಗಾಂಜಾ ಮಾರಾಟ ಮಾಡಲು ಯತ್ನಿಸಿದಾಗ ದಾಳಿ ಮಾಡಿದ ನಗರ ಠಾಣೆ ಪೊಲೀಸರು,
3500 ರೂ. ಮೌಲ್ಯದ 377 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ನಾಜೀಮ್ ಶೇಖ್ ಮತ್ತು ಮಹಮ್ಮದ್ ಸಾದಿಕ್ ಕಬಾಡಿ ಬಂಧಿತರು. ಬಂಧಿತ ಆರೋಪಿಗಳಿಬ್ಬರೂ ಧಾರವಾಡ ಮೂಲದವರಾಗಿದ್ದು, ಸದ್ಯ ಬೇರೆ ಬೇರೆ ಕಡೆಯೂ ಗಾಂಜಾ ಮಾರಾಟ ನಡೆದಿರುವ ಶಂಕೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us