AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಪಕ್ಕದ ಮನೆಯ ಬಾತ್​ರೂಮ್​ನಲ್ಲಿ ಮೊಬೈಲ್​ ಇಟ್ಟು ಯುವತಿಯ ಅಣ್ಣನ ಕೈ ಸಿಕ್ಕಿಬಿದ್ದ ಯುವಕ

ಮಂಗಳೂರು ನಗರ ಹೊರವಲಯದ ಮುಲ್ಕಿಯ ಪಕ್ಷಿಕರೆಯಲ್ಲಿ ಪಕ್ಕದ ಮನೆಯ ಯುವತಿಯ ಸ್ನಾನದ ವಿಡಿಯೋಗಾಗಿ ಯುವಕನೊಬ್ಬ ಮೊಬೈಲ್ ಇಟ್ಟು ಸಿಕ್ಕಿಬಿದ್ದ ಘಟನೆ ನಡೆದಿದೆ. ಸುಮಂತ್ ಪೂಜಾರಿ(22) ಮೊಬೈಲ್​ಯಿಟ್ಟ ಯುವಕ.

ಮಂಗಳೂರು: ಪಕ್ಕದ ಮನೆಯ ಬಾತ್​ರೂಮ್​ನಲ್ಲಿ ಮೊಬೈಲ್​ ಇಟ್ಟು ಯುವತಿಯ ಅಣ್ಣನ ಕೈ ಸಿಕ್ಕಿಬಿದ್ದ ಯುವಕ
ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 05, 2023 | 11:17 AM

Share

ದಕ್ಷಿಣ ಕನ್ನಡ, ಆ.5: ಮಂಗಳೂರು(Mangalore) ನಗರ ಹೊರವಲಯದ ಮುಲ್ಕಿಯ ಪಕ್ಷಿಕರೆಯಲ್ಲಿ ಪಕ್ಕದ ಮನೆಯ ಯುವತಿಯ ಸ್ನಾನದ ವಿಡಿಯೋಗಾಗಿ ಯುವಕನೊಬ್ಬ ಮೊಬೈಲ್(Mobile) ಇಟ್ಟು ಸಿಕ್ಕಿಬಿದ್ದ ಘಟನೆ ನಡೆದಿದೆ. ಸುಮಂತ್ ಪೂಜಾರಿ(22) ಮೊಬೈಲ್​ಯಿಟ್ಟ ಯುವಕ. ಹೌದು, ಪಕ್ಕದ ಮನೆಯ ಯುವತಿಯ ಸ್ನಾನದ ವಿಡಿಯೋಗಾಗಿ ಮೊಬೈಲ್ ಇಟ್ಟಿದ್ದ ಸುಮಂತ್. ಆದರೆ, ಯುವತಿಯ ಬದಲಾಗಿ ಯುವತಿಯ ಅಣ್ಣ ಬಚ್ಚಲು ಮನೆಗೆ ಸ್ನಾನಕ್ಕಾಗಿ ಬಂದಿದ್ದ. ಈ ವೇಳೆ ಮೊಬೈಲ್ ಇರುವುದನ್ನು ಗಮನಿಸಿದ ಯುವತಿಯ ಅಣ್ಣ, ರೆಡ್​ ಹ್ಯಾಂಡ್​ ಆಗಿ ಹಿಡಿದು ಆರೋಪಿ ಸುಮಂತ್​ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಸುಮಂತ್ ಪೂಜಾರಿ

ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ಮೂಬೈಲ್​ ಚಿತ್ರೀಕರಣ ಈಗಾಗಲೇ ದೊಡ್ಡ ಮಟ್ಟದ ಸುದ್ದಿ ಮಾಡುತ್ತಿದೆ. ಇದರ ಬೆನ್ನಲ್ಲೇ ಇದೀಗ ಇಂತಹದೊಂದು ಘಟನೆ ನಡೆದಿದೆ. ಇನ್ನು ಆರೋಪಿ ಸುಮಂತ್ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾನೆ. ಇದೀಗ ಇತನ ವಿರುದ್ದ ಮುಲ್ಕಿ ಠಾಣೆಯಲ್ಲಿ ಯುವತಿಯ ಅಣ್ಣ ಪ್ರಜ್ವಲ್ ದೂರು ನೀಡಿದ್ದು, ಆರೋಪಿ ಸುಮಂತ್ ಪೂಜಾರಿಯನ್ನು ಮುಲ್ಕಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಕಾಫಿನಾಡಿನ ಬಿಂಡಿಗ ದೇವಿರಮ್ಮನ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ, ಸಂಪ್ರದಾಯಿಕ ಉಡುಗೆ ಧರಿಸದರೆ ಮಾತ್ರ ಎಂಟ್ರಿ

ಗಾಂಜಾ ಸಾಗಿಸುತ್ತಿದ್ದವನ ಬಂಧನ

ದಕ್ಷಿಣ ಕನ್ನಡ: ಡ್ರಗ್ಸ್​ ಮುಕ್ತ ಮಂಗಳೂರು ಮಾಡುವತ್ತ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಅದರಂತೆ ಇದೀಗ ಮಂಗಳೂರಿನ ಪಂಪ್ವೆಲ್ ಬಳಿ ಗಾಂಜಾ ಸಾಗಿಸುತ್ತಿದ್ದ ಕೋಡಿಕಲ್ ನಿವಾಸಿ ಮೊಹಮ್ಮದ್ ಅಜೀಜ್​​(40)ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2 ಕೆಜಿ ಗಾಂಜಾ, ಬೈಕ್, ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:22 am, Sat, 5 August 23

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ