AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಶಾಲಾ ಬಸ್​ನಿಂದ ಇಳಿದು ಅದೇ ಬಸ್​ ಅಡಿ ಬಿದ್ದ ವಿದ್ಯಾರ್ಥಿ!

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರವಲಯದಲ್ಲಿ ವಿದ್ಯಾರ್ಥಿಯೊಬ್ಬ ಶಾಲಾ ಬಸ್ ಅಡಿ ಬಿದ್ದ ಘಟನೆ ನಡೆದಿದೆ. ಶಾಲಾ ಬಸ್​ನಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಅದೇ ಬಸ್ ಅಡಿ ವಿದ್ಯಾರ್ಥಿ ಬಿದ್ದಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ, ಮಹಿಳೆ ಕಿರುಚಾಟದಿಂದ ಎಚ್ಚೆತ್ತ ಚಾಲಕ ಕೂಡಲೇ ಬಸ್ ನಿಲ್ಲಿಸಿದ್ದು, ಸಣ್ಣಪುಟ್ಟ ಗಾಯಗೊಳೊಂದಿಗೆ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಂಗಳೂರು: ಶಾಲಾ ಬಸ್​ನಿಂದ ಇಳಿದು ಅದೇ ಬಸ್​ ಅಡಿ ಬಿದ್ದ ವಿದ್ಯಾರ್ಥಿ!
ಮಂಗಳೂರು: ಶಾಲಾ ಬಸ್​ನಿಂದ ಇಳಿದು ಮುಂಭಾಗದಿಂದ ರಸ್ತೆ ದಾಟಲು ಮುಂದಾಗಿ ಅದೇ ಬಸ್​ ಅಡಿ ಬಿದ್ದ ವಿದ್ಯಾರ್ಥಿ!
ಅಶೋಕ್​ ಪೂಜಾರಿ, ಮಂಗಳೂರು
| Edited By: Rakesh Nayak Manchi|

Updated on:Feb 24, 2024 | 4:52 PM

Share

ಮಂಗಳೂರು, ಫೆ.24: ವಿದ್ಯಾರ್ಥಿಯೊಬ್ಬ ಶಾಲಾ ಬಸ್ ಅಡಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ಹೊರವಲಯದ ಕುಳಾಯಿ ಬಳಿ ನಡೆದಿದೆ. ಫೆಬ್ರವರಿ 21 ರಂದು ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ದೃಶ್ಯಾವಳಿಗಳು ಮನೆಯೊಂದರಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಡಿಯೋದಲ್ಲಿ ಇರುವಂತೆ, ಸುರತ್ಕಲ್​ನ‌ ಆಂಗ್ಲ‌ ಮಾಧ್ಯಮ ಶಾಲೆಯ ವಿದ್ಯಾರ್ಥಿಯೊಬ್ಬ ಮನೆ ಸಮೀಪ ಶಾಲಾ ಬಸ್​ನಿಂದ ಇಳಿದಿದ್ದಾನೆ. ಇಳಿದ ನಂತರ ಅದೇ ಬಸ್​ನ ಮುಂಭಾಗದಿಂದ ಹೋಗಿ ರಸ್ತೆ ದಾಟಲು ಮುಂದಾದಾಗ ಇದನ್ನು ಗಮನಿಸದ ಚಾಲಕ ಬಸ್ ಚಾಲನೆ ಮಾಡಿದ್ದಾನೆ. ಇದರಿಂದಾಗಿ ವಿದ್ಯಾರ್ಥಿ ಬಸ್​ನ ಮಧ್ಯಭಾಗದಿಂದ ಅಡಿಗೆ ಬಿದ್ದಿದ್ದಾನೆ.

ಇದನ್ನೂ ಓದಿ: ದುಬೈನಲ್ಲಿ ಮಂಗಳೂರಿನ ಯುವತಿ ಸಾವು: ಕಂಪನಿ ಕ್ಯಾಬ್ ಮಿಸ್ ಆಗಿದ್ದಕ್ಕೆ ಸ್ವಂತ ಕಾರಿನಲ್ಲಿ ಹೋಗುವಾಗ ಸಂಭವಿಸಿತು ದುರಂತ

ಇದನ್ನು ನೋಡಿದ ಇನ್ನೊಬ್ಬ ವಿದ್ಯಾರ್ಥಿ ಹಾಗೂ ಮಹಿಳೆ ಕಿರುಚಾಡಿದ್ದಾರೆ. ಇದರಿಂದ ಎಚ್ಚೆತ್ತ ಚಾಲಕ ಕೂಡಲೇ ಬಸ್ ನಿಲ್ಲಿಸಿ ಬಸ್​ನಿಂದ ಕೆಳಗಿಳಿದು ಪರಿಶೀಲಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಘಟನೆಯಲ್ಲಿ ವಿದ್ಯಾರ್ಥಿಯು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಶಾಲಾ ಬಸ್​ನಲ್ಲಿ ನಿರ್ವಾಹಕ ಇಲ್ಲದೆ ಈ ಘಟನೆ ನಡೆದಿದೆ.

ಶಾಲಾ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲು

ಶಾಲಾ ಬಸ್ ಅಡಿ ವಿದ್ಯಾರ್ಥಿ ಬಿದ್ದ ಪ್ರಕರಣ ಸಂಬಂಧ ಚಾಲಕ ಕಿರಣ್ ವಿರುದ್ಧ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ IPC 279, 337 ಸೆಕ್ಷನ್ ಅಡಿ ನಿರ್ಲಕ್ಷ್ಯದ ವಾಹನ ಚಾಲನೆ ಎಂದು ಪ್ರಕರಣ ದಾಖಲಾಗಿದೆ.

ಘಟನೆ ಬಗ್ಗೆ ಸ್ಥಳೀಯರ ಆಕ್ರೋಶ

ಘಟನೆ ಬಗ್ಗೆ ಸ್ಥಳೀಯ ನಾಗರೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಸಗಿಯವರು ನಡೆಸುವ ಸ್ಕೂಲ್ ಬಸ್​ಗಳಿಗೆ ನಿರ್ವಾಹಕರನ್ನು ಇರಿಸುವಂತೆ ಒತ್ತಾಯಿಸಿದ್ದಾರೆ. ಘಟನೆ ಬಗ್ಗೆ ಟಿವಿ9 ಜೊತೆ ಮಾತನಾಡಿದ ಸ್ಥಳೀಯ ನಿವಾಸಿ ಹರೀಶ್ಚಂದ್, ಪವಾಡಸದೃಶ್ಯವಾಗಿ ಹುಡುಗ ಪಾರಾಗಿದ್ದಾನೆ. ಮುಂದೆ ಈ ರೀತಿಯಾಗದಂತೆ ಪೋಷಕರು, ಚಾಲಕರು ಎಚ್ಚರಿಕೆ ವಹಿಸಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:52 pm, Sat, 24 February 24

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ