AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಶಾಲಾ ಬಸ್​ನಿಂದ ಇಳಿದು ಅದೇ ಬಸ್​ ಅಡಿ ಬಿದ್ದ ವಿದ್ಯಾರ್ಥಿ!

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರವಲಯದಲ್ಲಿ ವಿದ್ಯಾರ್ಥಿಯೊಬ್ಬ ಶಾಲಾ ಬಸ್ ಅಡಿ ಬಿದ್ದ ಘಟನೆ ನಡೆದಿದೆ. ಶಾಲಾ ಬಸ್​ನಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಅದೇ ಬಸ್ ಅಡಿ ವಿದ್ಯಾರ್ಥಿ ಬಿದ್ದಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ, ಮಹಿಳೆ ಕಿರುಚಾಟದಿಂದ ಎಚ್ಚೆತ್ತ ಚಾಲಕ ಕೂಡಲೇ ಬಸ್ ನಿಲ್ಲಿಸಿದ್ದು, ಸಣ್ಣಪುಟ್ಟ ಗಾಯಗೊಳೊಂದಿಗೆ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಂಗಳೂರು: ಶಾಲಾ ಬಸ್​ನಿಂದ ಇಳಿದು ಅದೇ ಬಸ್​ ಅಡಿ ಬಿದ್ದ ವಿದ್ಯಾರ್ಥಿ!
ಮಂಗಳೂರು: ಶಾಲಾ ಬಸ್​ನಿಂದ ಇಳಿದು ಮುಂಭಾಗದಿಂದ ರಸ್ತೆ ದಾಟಲು ಮುಂದಾಗಿ ಅದೇ ಬಸ್​ ಅಡಿ ಬಿದ್ದ ವಿದ್ಯಾರ್ಥಿ!
ಅಶೋಕ್​ ಪೂಜಾರಿ, ಮಂಗಳೂರು
| Edited By: Rakesh Nayak Manchi|

Updated on:Feb 24, 2024 | 4:52 PM

Share

ಮಂಗಳೂರು, ಫೆ.24: ವಿದ್ಯಾರ್ಥಿಯೊಬ್ಬ ಶಾಲಾ ಬಸ್ ಅಡಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ಹೊರವಲಯದ ಕುಳಾಯಿ ಬಳಿ ನಡೆದಿದೆ. ಫೆಬ್ರವರಿ 21 ರಂದು ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ದೃಶ್ಯಾವಳಿಗಳು ಮನೆಯೊಂದರಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಡಿಯೋದಲ್ಲಿ ಇರುವಂತೆ, ಸುರತ್ಕಲ್​ನ‌ ಆಂಗ್ಲ‌ ಮಾಧ್ಯಮ ಶಾಲೆಯ ವಿದ್ಯಾರ್ಥಿಯೊಬ್ಬ ಮನೆ ಸಮೀಪ ಶಾಲಾ ಬಸ್​ನಿಂದ ಇಳಿದಿದ್ದಾನೆ. ಇಳಿದ ನಂತರ ಅದೇ ಬಸ್​ನ ಮುಂಭಾಗದಿಂದ ಹೋಗಿ ರಸ್ತೆ ದಾಟಲು ಮುಂದಾದಾಗ ಇದನ್ನು ಗಮನಿಸದ ಚಾಲಕ ಬಸ್ ಚಾಲನೆ ಮಾಡಿದ್ದಾನೆ. ಇದರಿಂದಾಗಿ ವಿದ್ಯಾರ್ಥಿ ಬಸ್​ನ ಮಧ್ಯಭಾಗದಿಂದ ಅಡಿಗೆ ಬಿದ್ದಿದ್ದಾನೆ.

ಇದನ್ನೂ ಓದಿ: ದುಬೈನಲ್ಲಿ ಮಂಗಳೂರಿನ ಯುವತಿ ಸಾವು: ಕಂಪನಿ ಕ್ಯಾಬ್ ಮಿಸ್ ಆಗಿದ್ದಕ್ಕೆ ಸ್ವಂತ ಕಾರಿನಲ್ಲಿ ಹೋಗುವಾಗ ಸಂಭವಿಸಿತು ದುರಂತ

ಇದನ್ನು ನೋಡಿದ ಇನ್ನೊಬ್ಬ ವಿದ್ಯಾರ್ಥಿ ಹಾಗೂ ಮಹಿಳೆ ಕಿರುಚಾಡಿದ್ದಾರೆ. ಇದರಿಂದ ಎಚ್ಚೆತ್ತ ಚಾಲಕ ಕೂಡಲೇ ಬಸ್ ನಿಲ್ಲಿಸಿ ಬಸ್​ನಿಂದ ಕೆಳಗಿಳಿದು ಪರಿಶೀಲಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಘಟನೆಯಲ್ಲಿ ವಿದ್ಯಾರ್ಥಿಯು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಶಾಲಾ ಬಸ್​ನಲ್ಲಿ ನಿರ್ವಾಹಕ ಇಲ್ಲದೆ ಈ ಘಟನೆ ನಡೆದಿದೆ.

ಶಾಲಾ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲು

ಶಾಲಾ ಬಸ್ ಅಡಿ ವಿದ್ಯಾರ್ಥಿ ಬಿದ್ದ ಪ್ರಕರಣ ಸಂಬಂಧ ಚಾಲಕ ಕಿರಣ್ ವಿರುದ್ಧ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ IPC 279, 337 ಸೆಕ್ಷನ್ ಅಡಿ ನಿರ್ಲಕ್ಷ್ಯದ ವಾಹನ ಚಾಲನೆ ಎಂದು ಪ್ರಕರಣ ದಾಖಲಾಗಿದೆ.

ಘಟನೆ ಬಗ್ಗೆ ಸ್ಥಳೀಯರ ಆಕ್ರೋಶ

ಘಟನೆ ಬಗ್ಗೆ ಸ್ಥಳೀಯ ನಾಗರೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಸಗಿಯವರು ನಡೆಸುವ ಸ್ಕೂಲ್ ಬಸ್​ಗಳಿಗೆ ನಿರ್ವಾಹಕರನ್ನು ಇರಿಸುವಂತೆ ಒತ್ತಾಯಿಸಿದ್ದಾರೆ. ಘಟನೆ ಬಗ್ಗೆ ಟಿವಿ9 ಜೊತೆ ಮಾತನಾಡಿದ ಸ್ಥಳೀಯ ನಿವಾಸಿ ಹರೀಶ್ಚಂದ್, ಪವಾಡಸದೃಶ್ಯವಾಗಿ ಹುಡುಗ ಪಾರಾಗಿದ್ದಾನೆ. ಮುಂದೆ ಈ ರೀತಿಯಾಗದಂತೆ ಪೋಷಕರು, ಚಾಲಕರು ಎಚ್ಚರಿಕೆ ವಹಿಸಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:52 pm, Sat, 24 February 24

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ