AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: 8 ವರ್ಷಗಳ ನಂತರ ಸಮುದ್ರದಾಳದಲ್ಲಿ ಪತ್ತೆಯಾಯ್ತು ಸೇನಾ ವಿಮಾನ

8 ವರ್ಷಗಳ ನಂತರ ಆಳವಾದ ಸಮುದ್ರದಲ್ಲಿ AN-32-2743 ವಿಮಾನ ಪತ್ತೆಯಾಗಿದೆ. ಟಿವಿ9ಗೆ ಭಾರತೀಯ ವಾಯು ಸೇನೆ ಮೂಲಗಳಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಚೆನ್ನೈ ನೌಕಾನೆಲೆಯಿಂದ 310 ಕಿಲೋಮೀಟರ್​ ದೂರದಲ್ಲಿ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಯೋಧ ಏಕನಾಥಶೆಟ್ಟಿ ಸೇರಿದಂತೆ 29 ಜನರಿದ್ದರು.

ಮಂಗಳೂರು: 8 ವರ್ಷಗಳ ನಂತರ ಸಮುದ್ರದಾಳದಲ್ಲಿ ಪತ್ತೆಯಾಯ್ತು ಸೇನಾ ವಿಮಾನ
ಪತ್ತೆಯಾದ AN-32-2743 ವಿಮಾನ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 12, 2024 | 9:43 PM

Share

ಮಂಗಳೂರು, ಜನವರಿ 12: 8 ವರ್ಷಗಳ ನಂತರ ಆಳವಾದ ಸಮುದ್ರದಲ್ಲಿ AN-32-2743 ವಿಮಾನ (army plane) ಪತ್ತೆಯಾಗಿದೆ. ಟಿವಿ9ಗೆ ಭಾರತೀಯ ವಾಯು ಸೇನೆ ಮೂಲಗಳಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಚೆನ್ನೈ ನೌಕಾನೆಲೆಯಿಂದ 310 ಕಿಲೋಮೀಟರ್​ ದೂರದಲ್ಲಿ ಪತ್ತೆಯಾಗಿದೆ. 2016ರ ಜುಲೈ 22 ರಂದು ಚೆನ್ನೈನ ತಾಂಬರಂ ವಾಯುನೆಲೆಯಿಂದ ಬೆಳಗ್ಗೆ 8.30ಕ್ಕೆ ಹೊರಟಿದ್ದ AN-32-2743 ವಿಮಾನ,  ಬೆಳಗ್ಗೆ 9.12ಕ್ಕೆ ಸಂಪರ್ಕ ಕಡಿತಗೊಂಡಿತ್ತು. 11.45ಕ್ಕೆ ಪೋರ್ಟ್​ಬ್ಲೇರ್ ತಲುಪಬೇಕಿತ್ತು. ಮಧ್ಯಾಹ್ನ 1.50ಕ್ಕೆ ವಿಮಾನ ಕಣ್ಮರೆಯಾಗಿದೆ ಎಂದು IAF ಪ್ರಕಟಣೆಯಲ್ಲಿ ತಿಳಿಸಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಯೋಧ ಏಕನಾಥಶೆಟ್ಟಿ ಸೇರಿದಂತೆ 29 ಜನರಿದ್ದರು. ವಿಮಾನದಲ್ಲಿ ನಾಪತ್ತೆಯಾಗಿದ್ದ ಸೈನಿಕ ಏಕನಾಥ್ ಶೆಟ್ಟಿ, ಕಾರ್ಗಿಲ್ ವಾರ್​ನಲ್ಲಿ ಭಾಗವಹಿಸಿದ್ದ ಹೆಮ್ಮೆಯ ಯೋಧ. ಏಕನಾಥ್ ಅವರ ಸರ್ವಿಸ್ ರೆಕಾರ್ಡ್ ಟಿವಿ9 ಗೆ ಲಭ್ಯವಾಗಿದೆ.

ಪತ್ತೆಗಾಗಿ ಕೇಂದ್ರ ಸರಕಾರ ಹಾಗೂ ಮಿಲಿಟರಿ ತಜ್ಞರು ಸತತ ಮೂರು ತಿಂಗಳಿಂದ ಪ್ರಯತ್ನ ವಿಫಲವಾಗಿತ್ತು. ಇದಕ್ಕಾಗಿ ಪಿ-8ಎ ವಿಮಾನ, 3 ಡೋರ್ನಿಯರ್ ವಿಮಾನ, ಒಂದು ಜಲಂತರ್ಗಾಮಿ, ನೌಕಾಸೇನೆಯ 12 ನೌಕೆಗಳನ್ನು ಬಳಸಲಾಗಿತ್ತು. ಕುರುವೇ ಇಲ್ಲದಂತೆ ನಾಪತ್ತೆಯಾಗಿದ್ದ ಮೊದಲ ವಿಮಾನವಾಗಿತ್ತು. ಇಂದು ವಿಮಾನ ಅವಶೇಷವಾಗಿ ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:36 pm, Fri, 12 January 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ