AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: 8 ವರ್ಷಗಳ ನಂತರ ಸಮುದ್ರದಾಳದಲ್ಲಿ ಪತ್ತೆಯಾಯ್ತು ಸೇನಾ ವಿಮಾನ

8 ವರ್ಷಗಳ ನಂತರ ಆಳವಾದ ಸಮುದ್ರದಲ್ಲಿ AN-32-2743 ವಿಮಾನ ಪತ್ತೆಯಾಗಿದೆ. ಟಿವಿ9ಗೆ ಭಾರತೀಯ ವಾಯು ಸೇನೆ ಮೂಲಗಳಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಚೆನ್ನೈ ನೌಕಾನೆಲೆಯಿಂದ 310 ಕಿಲೋಮೀಟರ್​ ದೂರದಲ್ಲಿ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಯೋಧ ಏಕನಾಥಶೆಟ್ಟಿ ಸೇರಿದಂತೆ 29 ಜನರಿದ್ದರು.

ಮಂಗಳೂರು: 8 ವರ್ಷಗಳ ನಂತರ ಸಮುದ್ರದಾಳದಲ್ಲಿ ಪತ್ತೆಯಾಯ್ತು ಸೇನಾ ವಿಮಾನ
ಪತ್ತೆಯಾದ AN-32-2743 ವಿಮಾನ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 12, 2024 | 9:43 PM

Share

ಮಂಗಳೂರು, ಜನವರಿ 12: 8 ವರ್ಷಗಳ ನಂತರ ಆಳವಾದ ಸಮುದ್ರದಲ್ಲಿ AN-32-2743 ವಿಮಾನ (army plane) ಪತ್ತೆಯಾಗಿದೆ. ಟಿವಿ9ಗೆ ಭಾರತೀಯ ವಾಯು ಸೇನೆ ಮೂಲಗಳಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಚೆನ್ನೈ ನೌಕಾನೆಲೆಯಿಂದ 310 ಕಿಲೋಮೀಟರ್​ ದೂರದಲ್ಲಿ ಪತ್ತೆಯಾಗಿದೆ. 2016ರ ಜುಲೈ 22 ರಂದು ಚೆನ್ನೈನ ತಾಂಬರಂ ವಾಯುನೆಲೆಯಿಂದ ಬೆಳಗ್ಗೆ 8.30ಕ್ಕೆ ಹೊರಟಿದ್ದ AN-32-2743 ವಿಮಾನ,  ಬೆಳಗ್ಗೆ 9.12ಕ್ಕೆ ಸಂಪರ್ಕ ಕಡಿತಗೊಂಡಿತ್ತು. 11.45ಕ್ಕೆ ಪೋರ್ಟ್​ಬ್ಲೇರ್ ತಲುಪಬೇಕಿತ್ತು. ಮಧ್ಯಾಹ್ನ 1.50ಕ್ಕೆ ವಿಮಾನ ಕಣ್ಮರೆಯಾಗಿದೆ ಎಂದು IAF ಪ್ರಕಟಣೆಯಲ್ಲಿ ತಿಳಿಸಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಯೋಧ ಏಕನಾಥಶೆಟ್ಟಿ ಸೇರಿದಂತೆ 29 ಜನರಿದ್ದರು. ವಿಮಾನದಲ್ಲಿ ನಾಪತ್ತೆಯಾಗಿದ್ದ ಸೈನಿಕ ಏಕನಾಥ್ ಶೆಟ್ಟಿ, ಕಾರ್ಗಿಲ್ ವಾರ್​ನಲ್ಲಿ ಭಾಗವಹಿಸಿದ್ದ ಹೆಮ್ಮೆಯ ಯೋಧ. ಏಕನಾಥ್ ಅವರ ಸರ್ವಿಸ್ ರೆಕಾರ್ಡ್ ಟಿವಿ9 ಗೆ ಲಭ್ಯವಾಗಿದೆ.

ಪತ್ತೆಗಾಗಿ ಕೇಂದ್ರ ಸರಕಾರ ಹಾಗೂ ಮಿಲಿಟರಿ ತಜ್ಞರು ಸತತ ಮೂರು ತಿಂಗಳಿಂದ ಪ್ರಯತ್ನ ವಿಫಲವಾಗಿತ್ತು. ಇದಕ್ಕಾಗಿ ಪಿ-8ಎ ವಿಮಾನ, 3 ಡೋರ್ನಿಯರ್ ವಿಮಾನ, ಒಂದು ಜಲಂತರ್ಗಾಮಿ, ನೌಕಾಸೇನೆಯ 12 ನೌಕೆಗಳನ್ನು ಬಳಸಲಾಗಿತ್ತು. ಕುರುವೇ ಇಲ್ಲದಂತೆ ನಾಪತ್ತೆಯಾಗಿದ್ದ ಮೊದಲ ವಿಮಾನವಾಗಿತ್ತು. ಇಂದು ವಿಮಾನ ಅವಶೇಷವಾಗಿ ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:36 pm, Fri, 12 January 24

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ