Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: 8 ವರ್ಷಗಳ ನಂತರ ಸಮುದ್ರದಾಳದಲ್ಲಿ ಪತ್ತೆಯಾಯ್ತು ಸೇನಾ ವಿಮಾನ

8 ವರ್ಷಗಳ ನಂತರ ಆಳವಾದ ಸಮುದ್ರದಲ್ಲಿ AN-32-2743 ವಿಮಾನ ಪತ್ತೆಯಾಗಿದೆ. ಟಿವಿ9ಗೆ ಭಾರತೀಯ ವಾಯು ಸೇನೆ ಮೂಲಗಳಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಚೆನ್ನೈ ನೌಕಾನೆಲೆಯಿಂದ 310 ಕಿಲೋಮೀಟರ್​ ದೂರದಲ್ಲಿ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಯೋಧ ಏಕನಾಥಶೆಟ್ಟಿ ಸೇರಿದಂತೆ 29 ಜನರಿದ್ದರು.

ಮಂಗಳೂರು: 8 ವರ್ಷಗಳ ನಂತರ ಸಮುದ್ರದಾಳದಲ್ಲಿ ಪತ್ತೆಯಾಯ್ತು ಸೇನಾ ವಿಮಾನ
ಪತ್ತೆಯಾದ AN-32-2743 ವಿಮಾನ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Jan 12, 2024 | 9:43 PM

ಮಂಗಳೂರು, ಜನವರಿ 12: 8 ವರ್ಷಗಳ ನಂತರ ಆಳವಾದ ಸಮುದ್ರದಲ್ಲಿ AN-32-2743 ವಿಮಾನ (army plane) ಪತ್ತೆಯಾಗಿದೆ. ಟಿವಿ9ಗೆ ಭಾರತೀಯ ವಾಯು ಸೇನೆ ಮೂಲಗಳಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಚೆನ್ನೈ ನೌಕಾನೆಲೆಯಿಂದ 310 ಕಿಲೋಮೀಟರ್​ ದೂರದಲ್ಲಿ ಪತ್ತೆಯಾಗಿದೆ. 2016ರ ಜುಲೈ 22 ರಂದು ಚೆನ್ನೈನ ತಾಂಬರಂ ವಾಯುನೆಲೆಯಿಂದ ಬೆಳಗ್ಗೆ 8.30ಕ್ಕೆ ಹೊರಟಿದ್ದ AN-32-2743 ವಿಮಾನ,  ಬೆಳಗ್ಗೆ 9.12ಕ್ಕೆ ಸಂಪರ್ಕ ಕಡಿತಗೊಂಡಿತ್ತು. 11.45ಕ್ಕೆ ಪೋರ್ಟ್​ಬ್ಲೇರ್ ತಲುಪಬೇಕಿತ್ತು. ಮಧ್ಯಾಹ್ನ 1.50ಕ್ಕೆ ವಿಮಾನ ಕಣ್ಮರೆಯಾಗಿದೆ ಎಂದು IAF ಪ್ರಕಟಣೆಯಲ್ಲಿ ತಿಳಿಸಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಯೋಧ ಏಕನಾಥಶೆಟ್ಟಿ ಸೇರಿದಂತೆ 29 ಜನರಿದ್ದರು. ವಿಮಾನದಲ್ಲಿ ನಾಪತ್ತೆಯಾಗಿದ್ದ ಸೈನಿಕ ಏಕನಾಥ್ ಶೆಟ್ಟಿ, ಕಾರ್ಗಿಲ್ ವಾರ್​ನಲ್ಲಿ ಭಾಗವಹಿಸಿದ್ದ ಹೆಮ್ಮೆಯ ಯೋಧ. ಏಕನಾಥ್ ಅವರ ಸರ್ವಿಸ್ ರೆಕಾರ್ಡ್ ಟಿವಿ9 ಗೆ ಲಭ್ಯವಾಗಿದೆ.

ಪತ್ತೆಗಾಗಿ ಕೇಂದ್ರ ಸರಕಾರ ಹಾಗೂ ಮಿಲಿಟರಿ ತಜ್ಞರು ಸತತ ಮೂರು ತಿಂಗಳಿಂದ ಪ್ರಯತ್ನ ವಿಫಲವಾಗಿತ್ತು. ಇದಕ್ಕಾಗಿ ಪಿ-8ಎ ವಿಮಾನ, 3 ಡೋರ್ನಿಯರ್ ವಿಮಾನ, ಒಂದು ಜಲಂತರ್ಗಾಮಿ, ನೌಕಾಸೇನೆಯ 12 ನೌಕೆಗಳನ್ನು ಬಳಸಲಾಗಿತ್ತು. ಕುರುವೇ ಇಲ್ಲದಂತೆ ನಾಪತ್ತೆಯಾಗಿದ್ದ ಮೊದಲ ವಿಮಾನವಾಗಿತ್ತು. ಇಂದು ವಿಮಾನ ಅವಶೇಷವಾಗಿ ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:36 pm, Fri, 12 January 24

ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ