AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ದಂಡ ವಿಧಿಸಿದ್ದಕ್ಕೆ ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ

ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುತ್ತಾರೆ. ಅದೇ ರೀತಿ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್​ನಲ್ಲಿ ಆಟೋ ಚಾಲಕನಿಗೆ ದಂಡ ವಿಧಿಸಲಾಗಿದೆ. ಆದರೆ ದಂಡ ವಿಧಿಸಿದ್ದಕ್ಕೆ ಕೋಪಗೊಂಡ ಆಟೋ ಚಾಲಕ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ್ದಾನೆ.

ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Mar 11, 2024 | 5:40 PM

Share

ಮಂಗಳೂರು, ಮಾ.11: ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುತ್ತಾರೆ. ಅದೇ ರೀತಿ, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ (Bantwal) ಬಿಸಿ ರೋಡ್​ನಲ್ಲಿ (BC Road) ಆಟೋ ಚಾಲಕನಿಗೆ ದಂಡ ವಿಧಿಸಲಾಗಿದೆ. ಆದರೆ ದಂಡ ವಿಧಿಸಿದ್ದಕ್ಕೆ ಕೋಪಗೊಂಡ ಆಟೋ ಚಾಲಕ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ.

ಬಿಸಿ ರೋಡ್​ನಲ್ಲಿ ಸಮವಸ್ತ್ರ ಧರಿಸದೆ ಮೊಬೈಲ್​ನಲ್ಲಿ ಮಾತಾಡುತ್ತ ಆಟೋ ಚಲಾಯಿಸುತ್ತಿರುವುದನ್ನು ಗಮನಿಸಿದ ಟ್ರಾಫಿಕ್ ಪಿಎಸ್​ಐ ಸುತೇಶ್ ಮತ್ತು ಸಿಬ್ಬಂದಿ ಆಟೋ ತಡೆದಿದ್ದಾರೆ. ಅಲ್ಲದೆ, ಸಂಚಾರಿ ನಿಯಮ ಉಲ್ಲಂಘಿಸಿದ ಹಿನ್ನೆಲೆ 2,000 ರೂಪಾಯಿ ದಂಡ ವಿಧಿಸಿದ್ದಾರೆ. ಇದರಿಂದ ಕೋಪಗೊಂಡ ಗೂಡಿನ ಬಳಿ‌ ನಿವಾಸಿ ಆಟೋ ಚಾಲಕ ಮೊಹಮ್ಮದ್ ಅನ್ಸಾರ್, ಸಾರ್ವಜನಿಕವಾಗಿ ರಂಪಾಟ ನಡೆಸಿದ್ದಾನೆ.

ಇದನ್ನೂ ಓದಿ: ಮಂಗಳೂರಿನಲ್ಲೊಂದು ಅಮಾನವೀಯ ಘಟನೆ: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಿಂದ ಹೊಡೆದ ಸೊಸೆ, ಬಂಧನ

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ವಾಹನ ಸುಟ್ಟುಹಾಕುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಆಟೋ ಹಾಗೂ ಪೊಲೀಸ್ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಘಟನೆ ದೃಶ್ಯ ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದೆ. ಪ್ರಕರಣ ಸಂಬಂಧ ಅನ್ಸಾರ್ ವಿರುದ್ಧ ಬಂಟ್ವಾಳ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?