AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ದಂಡ ವಿಧಿಸಿದ್ದಕ್ಕೆ ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ

ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುತ್ತಾರೆ. ಅದೇ ರೀತಿ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್​ನಲ್ಲಿ ಆಟೋ ಚಾಲಕನಿಗೆ ದಂಡ ವಿಧಿಸಲಾಗಿದೆ. ಆದರೆ ದಂಡ ವಿಧಿಸಿದ್ದಕ್ಕೆ ಕೋಪಗೊಂಡ ಆಟೋ ಚಾಲಕ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ್ದಾನೆ.

ಅಶೋಕ್​ ಪೂಜಾರಿ, ಪುತ್ತೂರು
| Edited By: Rakesh Nayak Manchi|

Updated on: Mar 11, 2024 | 5:40 PM

Share

ಮಂಗಳೂರು, ಮಾ.11: ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುತ್ತಾರೆ. ಅದೇ ರೀತಿ, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ (Bantwal) ಬಿಸಿ ರೋಡ್​ನಲ್ಲಿ (BC Road) ಆಟೋ ಚಾಲಕನಿಗೆ ದಂಡ ವಿಧಿಸಲಾಗಿದೆ. ಆದರೆ ದಂಡ ವಿಧಿಸಿದ್ದಕ್ಕೆ ಕೋಪಗೊಂಡ ಆಟೋ ಚಾಲಕ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ.

ಬಿಸಿ ರೋಡ್​ನಲ್ಲಿ ಸಮವಸ್ತ್ರ ಧರಿಸದೆ ಮೊಬೈಲ್​ನಲ್ಲಿ ಮಾತಾಡುತ್ತ ಆಟೋ ಚಲಾಯಿಸುತ್ತಿರುವುದನ್ನು ಗಮನಿಸಿದ ಟ್ರಾಫಿಕ್ ಪಿಎಸ್​ಐ ಸುತೇಶ್ ಮತ್ತು ಸಿಬ್ಬಂದಿ ಆಟೋ ತಡೆದಿದ್ದಾರೆ. ಅಲ್ಲದೆ, ಸಂಚಾರಿ ನಿಯಮ ಉಲ್ಲಂಘಿಸಿದ ಹಿನ್ನೆಲೆ 2,000 ರೂಪಾಯಿ ದಂಡ ವಿಧಿಸಿದ್ದಾರೆ. ಇದರಿಂದ ಕೋಪಗೊಂಡ ಗೂಡಿನ ಬಳಿ‌ ನಿವಾಸಿ ಆಟೋ ಚಾಲಕ ಮೊಹಮ್ಮದ್ ಅನ್ಸಾರ್, ಸಾರ್ವಜನಿಕವಾಗಿ ರಂಪಾಟ ನಡೆಸಿದ್ದಾನೆ.

ಇದನ್ನೂ ಓದಿ: ಮಂಗಳೂರಿನಲ್ಲೊಂದು ಅಮಾನವೀಯ ಘಟನೆ: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಿಂದ ಹೊಡೆದ ಸೊಸೆ, ಬಂಧನ

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ವಾಹನ ಸುಟ್ಟುಹಾಕುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಆಟೋ ಹಾಗೂ ಪೊಲೀಸ್ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಘಟನೆ ದೃಶ್ಯ ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದೆ. ಪ್ರಕರಣ ಸಂಬಂಧ ಅನ್ಸಾರ್ ವಿರುದ್ಧ ಬಂಟ್ವಾಳ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ