ಮಂಗಳೂರು: ದಂಡ ವಿಧಿಸಿದ್ದಕ್ಕೆ ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ

| Updated By: Rakesh Nayak Manchi

Updated on: Mar 11, 2024 | 5:40 PM

ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುತ್ತಾರೆ. ಅದೇ ರೀತಿ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್​ನಲ್ಲಿ ಆಟೋ ಚಾಲಕನಿಗೆ ದಂಡ ವಿಧಿಸಲಾಗಿದೆ. ಆದರೆ ದಂಡ ವಿಧಿಸಿದ್ದಕ್ಕೆ ಕೋಪಗೊಂಡ ಆಟೋ ಚಾಲಕ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ್ದಾನೆ.

ಮಂಗಳೂರು, ಮಾ.11: ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುತ್ತಾರೆ. ಅದೇ ರೀತಿ, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ (Bantwal) ಬಿಸಿ ರೋಡ್​ನಲ್ಲಿ (BC Road) ಆಟೋ ಚಾಲಕನಿಗೆ ದಂಡ ವಿಧಿಸಲಾಗಿದೆ. ಆದರೆ ದಂಡ ವಿಧಿಸಿದ್ದಕ್ಕೆ ಕೋಪಗೊಂಡ ಆಟೋ ಚಾಲಕ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಪೊಲೀಸ್ ವಾಹನಕ್ಕೇ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ.

ಬಿಸಿ ರೋಡ್​ನಲ್ಲಿ ಸಮವಸ್ತ್ರ ಧರಿಸದೆ ಮೊಬೈಲ್​ನಲ್ಲಿ ಮಾತಾಡುತ್ತ ಆಟೋ ಚಲಾಯಿಸುತ್ತಿರುವುದನ್ನು ಗಮನಿಸಿದ ಟ್ರಾಫಿಕ್ ಪಿಎಸ್​ಐ ಸುತೇಶ್ ಮತ್ತು ಸಿಬ್ಬಂದಿ ಆಟೋ ತಡೆದಿದ್ದಾರೆ. ಅಲ್ಲದೆ, ಸಂಚಾರಿ ನಿಯಮ ಉಲ್ಲಂಘಿಸಿದ ಹಿನ್ನೆಲೆ 2,000 ರೂಪಾಯಿ ದಂಡ ವಿಧಿಸಿದ್ದಾರೆ. ಇದರಿಂದ ಕೋಪಗೊಂಡ ಗೂಡಿನ ಬಳಿ‌ ನಿವಾಸಿ ಆಟೋ ಚಾಲಕ ಮೊಹಮ್ಮದ್ ಅನ್ಸಾರ್, ಸಾರ್ವಜನಿಕವಾಗಿ ರಂಪಾಟ ನಡೆಸಿದ್ದಾನೆ.

ಇದನ್ನೂ ಓದಿ: ಮಂಗಳೂರಿನಲ್ಲೊಂದು ಅಮಾನವೀಯ ಘಟನೆ: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಿಂದ ಹೊಡೆದ ಸೊಸೆ, ಬಂಧನ

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ವಾಹನ ಸುಟ್ಟುಹಾಕುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಆಟೋ ಹಾಗೂ ಪೊಲೀಸ್ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಘಟನೆ ದೃಶ್ಯ ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದೆ. ಪ್ರಕರಣ ಸಂಬಂಧ ಅನ್ಸಾರ್ ವಿರುದ್ಧ ಬಂಟ್ವಾಳ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ