AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore Ayodhya Train: ಮಂಗಳೂರಿನಿಂದ ಅಯೋಧ್ಯೆಗೆ ರೈಲು: ಇಲ್ಲಿದೆ ವೇಳಾಪಟ್ಟಿ

ಮಂಗಳೂರಿನಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ 06517 ಕೊಯಮತ್ತೂರು-ದರ್ಶನ ನಗರ್‌-ಕೊಯಮತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ಕಲ್ಪಿಸಲಾಗಿದೆ. ಈ ರೈಲು ತಮಿಳುನಾಡಿನ ಕನ್ಯಾಕುಮಾರಿಯಿಂದ ಫೆ.8 ಗುರುವಾರ ಸಂಜೆ 5.50ಕ್ಕೆ ಮಂಗಳೂರು ಜಂಕ್ಷನ್‌ಗೆ ಆಗಮಿಸಿ 6 ಗಂಟೆಗೆ ಅಯೋಧ್ಯೆಗೆ ತೆರಳಲಿದೆ. ಫೆ. 11 ರ ಮುಂಜಾನೆ ಅಯೋಧ್ಯೆಯ ದರ್ಶನ್ ನಗರ ರೈಲು ನಿಲ್ದಾಣಕ್ಕೆ ಆಗಮಿಸಲಿದೆ.

Mangalore Ayodhya Train: ಮಂಗಳೂರಿನಿಂದ ಅಯೋಧ್ಯೆಗೆ ರೈಲು: ಇಲ್ಲಿದೆ ವೇಳಾಪಟ್ಟಿ
ಅಯೋಧ್ಯೆಗೆ ರೈಲು
TV9 Web
| Edited By: |

Updated on:Feb 08, 2024 | 10:31 PM

Share

ಮಂಗಳೂರು, ಫೆಬ್ರವರಿ 8: ತಮಿಳುನಾಡಿನ ಕೊಯಮತ್ತೂರಿನಿಂದ ಅಯೋಧ್ಯೆ (Ayodhya) ರಾಮಮಂದಿರಕ್ಕೆ ತೆರಳಲು ವಿಶೇಷ ರೈಲು ಸಂಚಾರ ಗುರುವಾರ ಮಂಗಳೂರು ಜಂಕ್ಷನ್ ತಲುಪಲಿದೆ. ಮಂಗಳೂರಿನಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ 06517 ಕೊಯಮತ್ತೂರು-ದರ್ಶನ ನಗರ್‌-ಕೊಯಮತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ಕಲ್ಪಿಸಲಾಗಿದೆ. ಈ ರೈಲು ತಮಿಳುನಾಡಿನ ಕನ್ಯಾಕುಮಾರಿಯಿಂದ ಫೆ.8 ಗುರುವಾರ ಸಂಜೆ 5.50ಕ್ಕೆ ಮಂಗಳೂರು ಜಂಕ್ಷನ್‌ಗೆ ಆಗಮಿಸಿ 6 ಗಂಟೆಗೆ ಅಯೋಧ್ಯೆಗೆ ತೆರಳಲಿದೆ. ಫೆ. 11 ರ ಮುಂಜಾನೆ ಅಯೋಧ್ಯೆಯ ದರ್ಶನ್ ನಗರ ರೈಲು ನಿಲ್ದಾಣಕ್ಕೆ ಆಗಮಿಸಲಿದೆ. ಫೆಬ್ರವರಿ 12 ರಂದು ಬೆಳಿಗ್ಗೆ 8 ಗಂಟೆಗೆ ಅಯೋಧ್ಯೆಯಿಂದ ಹಿಂದಿರುಗುವ ಈ ರೈಲು ಫೆಬ್ರವರಿ 14 ರ ಸಂಜೆ ಮಂಗಳೂರು ಜಂಕ್ಷನ್​ಗೆ ಆಗಮಿಸಲಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಈಗಾಗಲೇ ಬೆಂಗಳೂರಿನಿಂದ ಅಯೋಧ್ಯೆಗೆ ಕಾಶಿ-ತಮಿಳ್‌ ಸಂಗಮ ಎಕ್ಸ್‌ಪ್ರೆಸ್‌ ಆರಂಭವಾಗಿದೆ. ವಿಶಾಖಪಟ್ಟಣ- ಗೋರಖಪುರ ಎಕ್ಸ್‌ಪ್ರೆಸ್‌, ನಾಗರಕೋಯಿಲ್‌ (ತಮಿಳುನಾಡು)-ಅಯೋಧ್ಯೆ ಎಕ್ಸ್‌ಪ್ರೆಸ್‌ ಆರಂಭ ಪ್ರಕ್ರಿಯೆಯೂ ಅಂತಿಮ ಹಂತದಲ್ಲಿದೆ. ಆದರೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಂದ ಅಯೋಧ್ಯೆ ಯಾತ್ರೆ ಕೈಗೊಳ್ಳುವ ಭಕ್ತರಿಗೆ ನೇರ ಸಂಪರ್ಕ ವ್ಯವಸ್ಥೆ ಇಲ್ಲ. ಕರಾವಳಿ ಭಾಗದವರು ಮುಂಬಯಿಗೆ ತೆರಳಿ ಅಲ್ಲಿಂದ ಅಯೋಧ್ಯೆಗೆ ತೆರಳಬೇಕು.

ಇದನ್ನೂ ಓದಿ: Palace on Wheels: ಅಯೋಧ್ಯೆ ಯಾತ್ರೆ ಪ್ರಾರಂಭಿಸಿದ ವಿಶ್ವದ ಐಷಾರಾಮಿ ರೈಲು; 42 ವರ್ಷಗಳ ಬಳಿಕ ರೈಲಿನ ಮಾರ್ಗ ಬದಲಾವಣೆ

ಇಲ್ಲವೇ ಬೆಂಗಳೂರಿಗೆ ತೆರಳಿ ರೈಲುಗಳನ್ನು ಬಳಸಬೇಕು. ಇದರಿಂದ ಸಮಯ ವ್ಯರ್ಥದ ಜತೆಗೆ ವೆಚ್ಚವೂ ಹೆಚ್ಚಳವಾಗಲಿದೆ. ನಾಗರಕೋಯಿಲ್‌ (ತಮಿಳುನಾಡು) -ಅಯೋಧ್ಯೆ ಎಕ್ಸ್‌ಪ್ರೆಸ್‌ ಮಂಗಳೂರು ಜಂಕ್ಷನ್‌ ನಿಲ್ದಾಣದ ಮೂಲಕ ಹಾದುಹೋಗಲಿದ್ದರೂ ಇದರಿಂದ ಕರಾವಳಿಯ ಪ್ರಯಾಣಿಕರಿಗೆ ಪ್ರಯೋಜನವಿಲ್ಲ.

ಈ ರೈಲು ಕೇರಳ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಹೆಚ್ಚಿನ ಸೀಟುಗಳನ್ನು ಅಲ್ಲಿನವರೇ ಕಾಯ್ದಿರಿಸುವುದರಿಂದ ಕರಾವಳಿಗರಿಗೆ ಸೀಟು ಸಿಗುವುದೇ ಅತ್ಯಲ್ಪ. ಕನಿಷ್ಠ ವಾರದಲ್ಲಿ ಒಂದು ದಿನವಾದರೂ ಕರಾವಳಿ ಭಾಗದಿಂದ ಉಡುಪಿ ಮಾರ್ಗವಾಗಿ ಅಯೋಧ್ಯೆಗೆ ನೇರ ರೈಲು ಸಂಪರ್ಕ ಒದಗಿಸಬೇಕಿದೆ.

ಇದನ್ನೂ ಓದಿ: ಅಯೋಧ್ಯೆ ರೈಲು ನಿಲ್ದಾಣದ ಹೆಸರು ಅಯೋಧ್ಯಾ ಧಾಮ ಎಂದು ಬದಲಾವಣೆ

ಪ್ರಸ್ತುತ ಅಯೋಧ್ಯಾ ಧಾಮ್, ಅಯೋಧ್ಯಾ ಕಂಟೋನ್ಮೆಂಟ್ ಮತ್ತು ಸಲಾರ್‌ಪುರ ನಿಲ್ದಾಣಗಳಲ್ಲಿನ ಯಾರ್ಡ್‌ಗಳನ್ನು ಮರುರೂಪಿಸುತ್ತಿದೆ. ಹೀಗಾಗಿ ಈ ಸ್ಥಳಗಳಿಂದ ಬೆಂಗಳೂರಿಗೆ ತೆರಳುವ ಎರಡು ರೈಲುಗಳನ್ನು ಬೇರೆಡೆಯಿಂದ ಸಂಚರಿಸುವಂತೆ ಮಾಡಲಾಗಿದೆ. ಯಾರ್ಡ್ ಪುನರ್ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ.

ಅಯೋಧ್ಯೆಗೆ ರೈಲುಗಳನ್ನು ಆರಂಭಿಸಿದ ನಂತರ, ಐಆರ್​ಸಿಟಿಸಿಯು ಕರ್ನಾಟಕ ಭಾರತ್ ಗೌರವ್ ಯಾತ್ರಾ ರೈಲುಗಳನ್ನು ನಿಲ್ಲಿಸಲಿದೆ ಎಂದು ಮೂಲಗಳು ತಿಳಿಸಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:30 pm, Thu, 8 February 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ